Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಸೌಧ ವಜ್ರ...

ವಿಧಾನಸೌಧ ವಜ್ರ ಮಹೋತ್ಸವ:ಝಗಮಗಿಸುತ್ತಿರುವ ರಾಜ್ಯದ ಶಕ್ತಿ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ23 Oct 2017 8:52 PM IST
share
ವಿಧಾನಸೌಧ ವಜ್ರ ಮಹೋತ್ಸವ:ಝಗಮಗಿಸುತ್ತಿರುವ ರಾಜ್ಯದ ಶಕ್ತಿ ಕೇಂದ್ರ

ಬೆಂಗಳೂರು, ಅ. 23: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಅರವತ್ತು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಅ.25ರಂದು ವಜ್ರ ಮಹೋತ್ಸವ ಸಮಾರಂಭಕ್ಕೆ ದಿನಗಣನೆ ಆರಂಭವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಸ್ವಾಗತಕ್ಕೆ ಭರದ ಸಿದ್ಧತೆ ನಡೆಸಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿಧಾನಸೌಧದಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಅವರಿಗೆ ಕೆಂಪುಹಾಸಿನ ಸ್ವಾಗತ ಕೋರಲು ಸಿದ್ಧತೆ ನಡೆದಿದ್ದು, ಅ.25ರ ಬೆಳಗ್ಗೆ 11ಕ್ಕೆ ಸರಿಯಾಗಿ ರಾಮನಾಥ್ ಕೋವಿಂದ್ ಅವರನ್ನು ರಾಜಭವನದಿಂದ ವಿಧಾನಸೌಧದ ವರೆಗೆ ವಿಶೇಷ ಮೆರವಣಿಗೆಯಲ್ಲಿ ಬರಲಿದ್ದಾರೆ.

ಅಶ್ವಾರೂಢ ಪಡೆ ವಿಶೇಷವಾಗಿ ರಾಜಭವನದಿಂದ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ವರೆಗೆ ಕರೆ ತರಲಿದೆ. ರಾಜಭವನದಿಂದ ವಿಧಾನಸೌಧದ ವರೆಗಿನ ಮಾರ್ಗದಲ್ಲಿ ನಳನಳಿಸುವ ವಿವಿಧ ಜಾತಿಯ ಹೂವುಗಳಿಂದ ಅಲಂಕರಿಸಲಾಗುತ್ತಿದೆ.

ಕೆಂಗಲ್ ಹನುಮಂತಯ್ಯ ಪ್ರತಿಮೆಯಿಂದ ವಿಧಾನಸಭೆ ಸ್ಪೀಕರ್ ಆಸನದ ವರೆಗೆ ರಾಷ್ಟ್ರಪತಿಗಳೊಂದಿಗೆ ಸ್ಪೀಕರ್ ಕೆ.ಬಿ.ಕೋಳಿವಾಡ, ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಹಿರಿಯ ಅಧಿಕಾರಿಗಳು ಹೆಜ್ಜೆ ಹಾಕಲಿದ್ದಾರೆ. ಅನಂತರ ವಿಧಾನಸಭೆಯಲ್ಲಿ ರಾಷ್ಟ್ರಪತಿಗಳು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಮೂಲಕ ಐತಿಹಾಸಿಕ ಕ್ಷಣಗಳಿಗೆ ಎಲ್ಲರೂ ಸಾಕ್ಷಿಯಾಗಲಿದ್ದಾರೆ.

ವಿಧಾನಸಭೆಯನ್ನು ವಿಶೇಷವಾಗಿ ಹೂವುಗಳಿಂದ ಅಲಂಕಾರ ಮಾಡಲಿದ್ದು, ಇದೇ ಮೊದಲ ಬಾರಿಗೆ ಇಡೀ ವಿಧಾನಸಭೆಗೆ ಹೊಸ ಕಳೆ ಬರಲಿದೆ. ಅದೇರೀತಿ, ಭಾಷಣ ಮುಗಿದ ನಂತರ ಕೋವಿಂದ್ ಅವರು ವಿಧಾನ ಪರಿಷತ್ತಿನ ಸಭಾಂಗಣಕ್ಕೂ ಭೇಟಿ ನೀಡಲಿದ್ದಾರೆ.

ಝಗಮಗಿಸುವ ಶಕ್ತಿ ಕೇಂದ್ರ: ವಜ್ರ ಮಹೋತ್ಸವ ಸಮಾರಂಭದ ಹಿನ್ನೆಲೆಯಲ್ಲಿ ಇದೇ ವೇಳೆ, ಐತಿಹಾಸಿಕ ಕಟ್ಟಡ ವಿಧಾನಸೌಧಕ್ಕೆ ವಿಶೇಷವಾದ ವಿದ್ಯುದ್ದೀಪಾಲಂಕಾರ ಮಾಡಲಾಗಿದ್ದು, ರಾತ್ರಿ ವೇಳೆಯಲ್ಲಿ ವಿಧಾನಸೌಧ ಅಕ್ಷರಶಃ ಝಗಮಗಿಸುತ್ತಿದೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಅನ್ನು ಒಂದು ರೀತಿಯಲ್ಲಿ ಚಿತ್ರಮಂದಿರದ ರೀತಿಯಲ್ಲಿ ಮಾರ್ಪಾಟು ಮಾಡಿದ್ದು, ವಿಧಾನಸೌಧ ನಡೆದು ಬಂದ ಹಾದಿಯ ಬಗ್ಗೆ ಪ್ರಮುಖವಾಗಿ ಮೂರು ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಅನಂತರ ಸಂಜೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖಾ ಅವರ ತಂಡದಿಂದದ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X