Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಎಸ್‌ಸಿಎ ಅಂಡರ್ 16 ಅಂತರ್ ವಲಯ...

ಕೆಎಸ್‌ಸಿಎ ಅಂಡರ್ 16 ಅಂತರ್ ವಲಯ ಕ್ರಿಕೆಟ್: ಮಿಂಚಿನ ಮಂಗಳೂರು ವಲಯದ ಮ್ಯಾಕ್ನಿಲ್, ಕರುಂಬಯ್ಯ

ವಾರ್ತಾಭಾರತಿವಾರ್ತಾಭಾರತಿ23 Oct 2017 10:23 PM IST
share
ಕೆಎಸ್‌ಸಿಎ ಅಂಡರ್ 16 ಅಂತರ್ ವಲಯ ಕ್ರಿಕೆಟ್: ಮಿಂಚಿನ ಮಂಗಳೂರು ವಲಯದ ಮ್ಯಾಕ್ನಿಲ್, ಕರುಂಬಯ್ಯ

ಬೆಂಗಳೂರು, ಅ.23: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಶ್ರಯದಲ್ಲಿ ಇಲ್ಲಿ ನಡೆದಿರುವ 16 ವರ್ಷದೊಳಗಿನ ಬಾಲಕರ ಅಂತರ್ ವಲಯ ಕ್ರಿಕೆಟ್ ಪಂದ್ಯಾಟದಲ್ಲಿ ಮಂಗಳೂರು ವಲಯ ತಂಡ, ಬೆಂಗಳೂರಿನ ಸಂಯುಕ್ತ ನಗರ ತಂಡದ ವಿರುದ್ಧ ಪ್ರಥಮ ಇನ್ನಿಂಗ್ಸ್ ಮುನ್ನಡೆಯ ಮೂಲಕ ಮೇಲುಗೈ ಸಾಧಿಸಿ 3 ಅಂಕಗಳನ್ನು ಪಡೆಯಿತು.

ಮೊದಲು ಬ್ಯಾಟಿಂಗ್ ನಡೆಸಿದ ಸಂಯುಕ್ತ ನಗರ ತಂಡ ಪೃಥ್ವಿ (68), ರೋಹನ್ (53) ಇವರ ಬ್ಯಾಟಿಂಗ್ ನೆರವಿನಿಂದ 79.4 ಓವರುಗಳಲ್ಲಿ 180 ರನ್‌ಗಳನ್ನು ಗಳಿಸಿ ಆಲೌಟಾಯಿತು. ಮಂಗಳೂರು ತಂಡದ ಕರುಂಬಯ್ಯ ತಮ್ಮ 22 ಓವರುಗಳ ಲೆಗ್ ಸ್ಪಿನ್ ಬೌಲಿಂಗ್‌ನಲ್ಲಿ 41 ರನ್‌ಗಳನ್ನು ನೀಡಿ 5 ವಿಕೆಟ್‌ಗಳನ್ನು ಗಳಿಸಿ ಮಿಂಚಿದರು.

ಇದಕ್ಕೆ ಉತ್ತರವಾಗಿ ಮಂಗಳೂರು ವಲಯ ತಂಡ, ಆರಂಭಕಾರ ಮ್ಯಾಕ್ನಿಲ್ ನೊರೊನ್ಹಾ ಅವರ ಅತ್ಯಾಕರ್ಷಕ ಅಜೇಯ 140 ರನ್‌ಗಳ (279ಬಾಲು, 18 ಬೌಂಡರಿ, ಒಂದು ಸಿಕ್ಸ್) ನೆರವಿನಿಂದ 90 ಓವರುಗಳ ಆಟ ಮುಗಿದಾಗ ಐದು ವಿಕೆಟ್‌ಗೆ 253 ರನ್‌ಗಳಿಸಿ ಮುನ್ನಡೆ ಸಾಧಿಸಿತು. ಮ್ಯಾಕ್ನಿಲ್ ಅವರು ಅಝಾನ್ (38) ರೊಂದಿಗೆ ಮೊದಲ ವಿಕೆಟ್‌ಗೆ 62 ರನ್ ಸೇರಿಸಿದ ು. ಅರವಿಂದ್ 31 ರನ್ ಗಳಿಸಿದರು.

ಮಂಗಳೂರು ವಲಯ ತಂಡ ತನ್ನ ಮೊದಲ ಪಂದ್ಯದಲ್ಲಿ ಧಾರವಾಡ ತಂಡದ ವಿರುದ್ಧ ಬ್ಯಾಟಿಂಗ್‌ನಲ್ಲಿ ಕಳಪೆ ನಿರ್ವಹಣೆ ತೋರಿಸಿತು. ಧಾರವಾಡದ 271 ರನ್‌ಗಳಿಗೆ ಉತ್ತರವಾಗಿ ಮಂಗಳೂರು ಪ್ರಥಮ ಇನಿಂಗ್ಸ್‌ನಲ್ಲಿ ಕೇವಲ 88 ರನ್‌ಗಳಿಗೆ ಆಲೌಟಾಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಅದು 29 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ ಪಂದ್ಯ ಡ್ರಾಗೊಂಡಿತು. ಈ ಪಂದ್ಯದಿಂದ ಧಾರವಾಡ ವಲಯ 3, ಮಂಗಳೂರು ವಲಯ 1 ಅಂಕವನ್ನು ಗಳಿಸಿತ್ತು.

ಕಾರ್ಯದರ್ಶಿ ಇಲೆವೆನ್ ವಿರುದ್ಧದ ಎರಡನೆಯ ಪಂದ್ಯದಲ್ಲಿ ಮಂಗಳೂರು ವಲಯ 92 ರನ್‌ಗಳಿಗೆ ಅಲೌಟಾಗಿತ್ತು. ಉತ್ತರವಾಗಿ ಕಾರ್ಯದರ್ಶಿ ತಂಡ 231 ರನ್ ಗಳಿಸಿ ಪ್ರಥಮ ಇನ್ನಿಂಗ್ಸ್ ಮುನ್ನಡೆ ಪಡೆಯಿತು. ಎರಡನೆ ಇನಿಂಗ್ಸ್ ನಲ್ಲಿ ಮಂಗಳೂರು ತಂಡ ಅಝಾನ್ (45), ರವೀಂದ್ (ಅಜೇಯ 43), ಮ್ಯಾಕ್ನಿಲ್ (34) ಇವರ ಉತ್ತಮ ಆಟದ ಮೂಲಕ 67 ಓವರುಗಳಲ್ಲಿ ಆರು ವಿಕೆಟ್‌ಗಳಿಗೆ 159 ರನ್ ಗಳಿಸಿದ್ದಾಗ ಪಂದ್ಯ ಮುಕ್ತಾಯಗೊಂಡಿತು. ಪ್ರಥಮ ಇನಿಂಗ್ಸ್ ಮುನ್ನಡೆ ಆಧಾರದಲ್ಲಿ ಕಾರ್ಯದರ್ಶಿ ತಂಡ 3 ಹಾಗೂ ಮಂಗಳೂರು ವಲು ತಂಡ 1 ಅಂಕವನ್ನು ಪಡೆದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X