Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬ್ರೆಝಿಲ್-ಇಂಗ್ಲೆಂಡ್ ಸೆಮಿಫೈನಲ್ ಪಂದ್ಯ...

ಬ್ರೆಝಿಲ್-ಇಂಗ್ಲೆಂಡ್ ಸೆಮಿಫೈನಲ್ ಪಂದ್ಯ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ23 Oct 2017 11:50 PM IST
share
ಬ್ರೆಝಿಲ್-ಇಂಗ್ಲೆಂಡ್ ಸೆಮಿಫೈನಲ್ ಪಂದ್ಯ ಸ್ಥಳಾಂತರ

ಹೊಸದಿಲ್ಲಿ, ಅ.23:ಫಿಫಾ ಅಂಡರ್-17 ವಿಶ್ವಕಪ್‌ನಲ್ಲಿ ಬ್ರೆಝಿಲ್ ಹಾಗೂ ಇಂಗ್ಲೆಂಡ್ ನಡುವೆ ನಡೆಯಲಿರುವ ಮೊದಲ ಸೆಮಿ ಫೈನಲ್ ಪಂದ್ಯ ಗುವಾಹತಿಯ ಇಂದಿರಾ ಗಾಂಧಿ ಅಥ್ಲೆಟಿಕ್ ಸ್ಟೇಡಿಯಂನಿಂದ ಕೋಲ್ಕತಾದ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ.

ಗುವಾಹತಿ ಸ್ಟೇಡಿಯಂನ ಕಳಪೆ ಪಿಚ್ ಸೆಮಿಫೈನಲ್ ಪಂದ್ಯದ ಸ್ಥಳಾಂತರಕ್ಕೆ ಕಾರಣ ಎನ್ನಲಾಗಿದೆ. ಮೊದಲ ಸೆಮಿಫೈನಲ್ ಪಂದ್ಯ ಅಕ್ಟೋಬರ್ 25 ರಂದು ಸಂಜೆ 5ಕ್ಕೆ ನಡೆಯಲಿದೆ.

‘‘ಇಂಗ್ಲೆಂಡ್ ತಂಡ ಪಿಚ್ ಬಗ್ಗೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದೆ. ಆದರೆ, ಬ್ರೆಝಿಲ್ ಆಟಗಾರರು ಗುವಾಹತಿ ಪಿಚ್‌ನಲ್ಲಿ ಆಡಲು ಹಿಂದೇಟು ಹಾಕಿದರು. ಪಿಚ್ ಗುಣಮಟ್ಟವನ್ನು ಸುಧಾರಿಸಲು ಎಲ್ಲ ಪ್ರಯತ್ನ ನಡೆಸಿದ್ದೆವು. ಆದರೆ, ಇದೀಗ ಪಂದ್ಯ ಬೇರೆಡೆಗೆ ಸ್ಥಳಾಂತರವಾಗುತ್ತಿದೆ. ಇಂದು ಸಂಜೆ ಉಭಯ ತಂಡಗಳು ಗುವಾಹತಿಯಿಂದ ಕೋಲ್ಕತಾಕ್ಕೆ ನಿರ್ಗಮಿಸಲಿವೆ’’ಎಂದು ಅಸ್ಸಾಂ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ಹೇಮೇಂದ್ರ ನಾಥ್ ಬ್ರಹ್ಮ ಹೇಳಿದ್ದಾರೆ.

ಫಿಫಾ ಹಾಗೂ ಅಸ್ಸಾಂ ಸರಕಾರದ ಅಧಿಕಾರಿಗಳು ಸೋಮವಾರ ಮಧ್ಯಾಹ್ನ ಸಭೆ ನಡೆಸಿ ಬುಧವಾರದಂದು ಇಂದಿರಾಗಾಂಧಿ ಅಥ್ಲೆಟಿಕ್ ಸ್ಟೇಡಿಯಂನಲ್ಲಿ ಸೆಮಿಫೈನಲ್ ಪಂದ್ಯ ಆಯೋಜಿಸುವುದಕ್ಕೆ ಸಂಬಂಧಿಸಿ ಚರ್ಚಿಸಿದೆ. ಈ ಬಗ್ಗೆ ಬ್ರೆಝಿಲ್-ಇಂಗ್ಲೆಂಡ್ ತಂಡಗಳ ಅಭಿಪ್ರಾಯಪಡೆಯಲು ನಿರ್ಧರಿಸಲಾಗಿತ್ತು. ಬ್ರೆಝಿಲ್ ಗುವಾಹತಿಯಲ್ಲಿ ಆಡಲು ನಿರಾಕರಿಸಿತು.

ಅಕ್ಟೋಬರ್ 21 ರಂದು ಘಾನಾ-ಮಾಲಿ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯ ಮಳೆ ನಡುವೆ ನಡೆದಿತ್ತು. ಮಾಲಿ ಗುವಾಹಟಿಯ ವಾತಾವರಣದಲ್ಲಿ ಹೊಂದಿಕೊಂಡು ಆಡಿದ್ದರೆ, ಘಾನಾ ತಂಡ ಮೈದಾನದ ಬಗ್ಗೆ ದೂರು ಸಲ್ಲಿಸಿತ್ತು.

ಇಂಗ್ಲೆಂಡ್ ತಂಡ ಸ್ಟ್ರೈಕರ್ ರಿಯಾನ್ ಬ್ರೆವ್‌ಸ್ಟರ್ ಹ್ಯಾಟ್ರಿಕ್ ಗೋಲಿನ ಸಹಾಯದಿಂದ ಕ್ವಾರ್ಟರ್ ಫೈನಲ್‌ನಲ್ಲಿ ಅಮೆರಿಕವನ್ನು 4-1 ಅಂತರದಿಂದ ಮಣಿಸಿ ಸೆಮಿ ಫೈನಲ್‌ಗೆ ತಲುಪಿತ್ತು. ಮತ್ತೊಂದು ಕ್ವಾರ್ಟರ್‌ಫೈನಲ್‌ನಲ್ಲಿ ಬ್ರೆಝಿಲ್ ತಂಡ ಆರಂಭಿಕ ಹಿನ್ನಡೆಯಿಂದ ಚೇತರಿಸಿಕೊಂಡು ಜರ್ಮನಿಯ ವಿರುದ್ಧ 2-1 ಅಂತರದಿಂದ ಜಯ ಸಾಧಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X