Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಗೀತೆ ಪ್ರಸಾರದ ಸಂದರ್ಭ...

ರಾಷ್ಟ್ರಗೀತೆ ಪ್ರಸಾರದ ಸಂದರ್ಭ ಎದ್ದುನಿಲ್ಲಬೇಕಿಲ್ಲ: ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ23 Oct 2017 11:55 PM IST
share
ರಾಷ್ಟ್ರಗೀತೆ ಪ್ರಸಾರದ ಸಂದರ್ಭ ಎದ್ದುನಿಲ್ಲಬೇಕಿಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಅ.23: ದೇಶದಾದ್ಯಂತ ಸಿನೆಮಾ ಮಂದಿರಗಳಲ್ಲಿ ರಾಷ್ಟ್ರಗೀತೆಯ ಪ್ರಸಾರದ ಸಂದರ್ಭ, ತಮ್ಮ ರಾಷ್ಟ್ರಭಕ್ತಿ ಸಮರ್ಥಿಸಿಕೊಳ್ಳಲು ಪ್ರೇಕ್ಷಕರು ಎದ್ದುನಿಂತು ಗೌರವ ಸೂಚಿಸಬೇಕಿಲ್ಲ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.

  ಅಲ್ಲದೆ ಸಿನೆಮ ಮಂದಿರದಲ್ಲಿ ರಾಷ್ಟ್ರಗೀತೆ ನುಡಿಸುವ ಸಂದರ್ಭ ಎದ್ದುನಿಲ್ಲದ ವ್ಯಕ್ತಿ ಕಡಿಮೆ ರಾಷ್ಟ್ರಭಕ್ತಿ ಹೊಂದಿದ್ದಾನೆ ಎಂದು ಪರಿಗಣಿಸುವಂತಿಲ್ಲ ಎಂದೂ ಸುಪ್ರೀಂಕೋರ್ಟ್ ತಿಳಿಸಿದೆ. ಸಮಾಜಕ್ಕೆ ನೈತಿಕ ಪೊಲೀಸರ ಅಗತ್ಯವಿಲ್ಲ ಎಂದು ಹೇಳಿರುವ ನ್ಯಾಯಪೀಠ, ಮುಂದೊಂದು ದಿನ ಸಿನೆಮ ಮಂದಿರಕ್ಕೆ ಟಿಶರ್ಟ್ ಅಥವಾ ಶಾರ್ಟ್ಸ್ ಧರಿಸಿ ಹೋದರೆ ರಾಷ್ಟ್ರಗೀತೆಗೆ ಅಪಮಾನವಾದಂತೆ ಎಂದು ಸರಕಾರ ಹೇಳಲೂ ಬಹುದು ಎಂದು ತಿಳಿಸಿದೆ.

ಸಿನೆಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರ ಕಡ್ಡಾಯಗೊಳಿಸಿರುವ ತನ್ನ ಈ ಹಿಂದಿನ ಆದೇಶ ಪರಿಣಾಮಕಾರಿಯಾಗಿದೆಯೇ ಎಂಬುದನ್ನು ಕೇಂದ್ರ ಸರಕಾರ ಗಮನಿಸಬೇಕಿದೆ ಎಂದು ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರ, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರಿದ್ದ ನ್ಯಾಯಪೀಠ ತಿಳಿಸಿತು.

    ಎಲ್ಲಾ ಸಿನೆಮಮಂದಿರಗಳಲ್ಲೂ ಸಿನೆಮ ಪ್ರದರ್ಶನಕ್ಕೆ ಮೊದಲು ರಾಷ್ಟ್ರಗೀತೆ ಪ್ರಸಾರ ಕಡ್ಡಾಯಗೊಳಿಸಬೇಕು ಎಂದು ಕೋರಿ ಶ್ಯಾಮ್‌ನಾರಾಯಣ್ ಚೌಕ್ಸೆ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ವಿಚಾರಣೆ ಸಂದರ್ಭ ನ್ಯಾಯಪೀಠ ಈ ಸೂಚನೆ ನೀಡಿದೆ.

ಜನರು ಮನರಂಜನೆ ಪಡೆಯಲು ಸಿನೆಮ ಮಂದಿರಕ್ಕೆ ಹೋಗುತ್ತಾರೆ. ಸಮಾಜಕ್ಕೆ ಮನರಂಜನೆಯ ಅಗತ್ಯವಿದೆ. ನಮ್ಮ ಹೆಗಲ ಮೇಲೆ ಬಂದೂಕ ಇಟ್ಟು ನೀವು ಗುಂಡು ಹೊಡೆಯಲು ನಾವು ಆಸ್ಪದ ನೀಡುವುದಿಲ್ಲ. ರಾಷ್ಟ್ರಭಕ್ತಿ ಸಮರ್ಥಿಸಿಕೊಳ್ಳಲು ಜನ ಸಿನೆಮ ಮಂದಿರದಲ್ಲಿ ರಾಷ್ಟ್ರಗೀತೆ ಪ್ರಸಾರದ ಸಂದರ್ಭ ಎದ್ದುನಿಲ್ಲುವ ಅಗತ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿತು.

ಅಪೇಕ್ಷೆ ಹಾಗೂ ಕಡ್ಡಾಯಕ್ಕೆ ವ್ಯತ್ಯಾಸವಿದೆ. ಜನತೆ ತಮ್ಮಾಂದಿಗೆ ರಾಷ್ಟ್ರಭಕ್ತಿಯನ್ನು ಒಯ್ಯಬೇಕು ಎಂದು ಹೇಳುವಂತಿಲ್ಲ ಹಾಗೂ ಆದೇಶದ ಮೂಲಕ ದೇಶಭಕ್ತಿಯನ್ನು ಯಾರಲ್ಲೂ ಮೂಡಿಸಲಾಗದು ಎಂದು ನ್ಯಾಯಪೀಠ ತಿಳಿಸಿತು.

ಭಾರತವು ವಿವಿಧ ಜಾತಿ, ಸಂಸ್ಕೃತಿಯ ದೇಶವಾಗಿದ್ದು ಏಕರೂಪತೆ ಸಾಧಿಸುವ ನಿಟ್ಟಿನಲ್ಲಿ ಸಿನೆಮ ಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರ ಮಾಡುವ ಅಗತ್ಯವಿದೆ ಎಂದು ವಿಚಾರಣೆ ಸಂದರ್ಭ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ತಿಳಿಸಿದರು.

 ಸಿನೆಮ ಮಂದಿರಗಳಲ್ಲಿ ಸಿನೆಮ ಪ್ರದರ್ಶನ ಆರಂಭದ ಮೊದಲು ರಾಷ್ಟ್ರಗೀತೆ ಪ್ರಸಾರ ಕಡ್ಡಾಯಗೊಳಿಸಿ 2016ರ ಡಿಸೆಂಬರ್ 1ರಂದು ತಾನು ನೀಡಿದ್ದ ಆದೇಶವನ್ನು ಮಾರ್ಪಡಿಸಬಹುದು. ಆದೇಶದಲ್ಲಿರುವ ಪ್ರಸಾರ ಮಾಡತಕ್ಕದ್ದು ಎಂಬ ಪದದ ಬದಲು ಪ್ರಸಾರ ಮಾಡಬಹುದು ಎಂದು ಬದಲಾಯಿಸಬಹುದು ಎಂದು ನ್ಯಾಯಪೀಠ ತಿಳಿಸಿತು.

  ಅಲ್ಲದೆ ರಾಷ್ಟ್ರಗೀತೆಯ ಪ್ರತಿಷ್ಠೆಗೆ ಘಾಸಿಯಾಗುವ ರೀತಿಯಲ್ಲಿ ರಾಷ್ಟ್ರಗೀತೆಯನ್ನು ಪ್ರಿಂಟ್ ಮಾಡಿಸಿ, ಅದನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸುವುದನ್ನು ನಿಷೇಧಿಸುವ ಹಾಗೂ ಈ ಕುರಿತು ಶಿಷ್ಟಾಚಾರವೊಂದನ್ನು ರೂಪಿಸುವಂತೆ ನ್ಯಾಯಪೀಠ ಸರಕಾರಕ್ಕೆ ಸೂಚಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X