ಲಘುವಾಹನ ಚಾಲನಾ ತರಬೇತಿ ಪಡೆಯಲು ಅರ್ಜಿ ಆಹ್ವಾನ
ಉಡುಪಿ, ಅ.24: ಉಡುಪಿ ಜಿಲ್ಲೆಯ ಪರಿಶಿಷ್ಟ ಪಂಗಡದವರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನಿಗದಿಪಡಿಸಿದ ಅನುದಾನದಲ್ಲಿ ಅಲೆಮಾರಿ/ಅರೆಅಲೆಮಾರಿ/ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಯೋಜನೆಯಡಿ ಲಘುವಾಹನ ಚಾಲನಾ ತರಬೇತಿ ಪಡೆಯಲು ಪರಿಶಿಷ್ಟ ಪಂಗಡದ ಅಲೆಮಾರಿ/ಅರೆಅಲೆಮಾರಿ/ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಜಿಲ್ಲಾ ಸಂಕೀರ್ಣ, ಬಿ ಬ್ಲಾಕ್ ಎರಡನೇ ಮಹಡಿ ರಜತಾದ್ರಿ ಮಣಿಪಾಲ, ಎಲ್ಲಾ ಗ್ರಾಪಂ ಅಥವಾ ಸಹಾಯಕ ನಿರ್ದೇಶಕರ ಕಚೇರಿ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಉಡುಪಿ, ಕುಂದಾಪುರ, ಕಾರ್ಕಳ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:0820-2574814ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಕಂಪ್ಯೂಟರ್ ತರಬೇತಿಗೆ: ಉಡುಪಿ ಜಿಲ್ಲೆಯ ಪರಿಶಿಷ್ಟ ಪಂಗಡದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನಿಗದಿಪಡಿಸಿದ ಅನುದಾನದಲ್ಲಿ ಅಲೆಮಾರಿ/ಅರೆಅಲೆಮಾರಿ/ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಯೋಜನೆಯಡಿ ಕಂಪ್ಯೂಟರ್ ತರಬೇತಿ ಪಡೆಯಲು ಅದೇ ಪರಿಶಿಷ್ಟ ಪಂಗಡದ ಅರ್ಹ ಅ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ: 0820- 2574814ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.