Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2022ಕ್ಕೆ ಭಾರತ ಮಾದರಿ ರಾಷ್ಟ್ರವಾಗಲಿದೆ:...

2022ಕ್ಕೆ ಭಾರತ ಮಾದರಿ ರಾಷ್ಟ್ರವಾಗಲಿದೆ: ರಾಮನಾಥ ಕೋವಿಂದ್

ವಾರ್ತಾಭಾರತಿವಾರ್ತಾಭಾರತಿ24 Oct 2017 9:33 PM IST
share
2022ಕ್ಕೆ ಭಾರತ ಮಾದರಿ ರಾಷ್ಟ್ರವಾಗಲಿದೆ: ರಾಮನಾಥ ಕೋವಿಂದ್

ಬೆಂಗಳೂರು, ಅ.24: ಕಾರ್ಮಿಕರು, ವಿಜ್ಞಾನಿಗಳು, ಕೃಷಿಕರ ಅಸ್ತಿತ್ವವಿಲ್ಲದೆ ಪ್ರಜಾಪ್ರಭುತ್ವ ವ್ಯವಸ್ಥೆಯು ಯಾವುದೇ ಅರ್ಥ ಕೊಡುವುದಿಲ್ಲ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಜ್ಞಾನಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಭಾರತದ ಸ್ವಾತಂತ್ರ ದೊರೆತು 2022ಕ್ಕೆ 75 ವರ್ಷ ತುಂಬಲಿದೆ. 2022 ರ ವೇಳೆಗೆ ಭಾರತವನ್ನು ಒಂದು ಮಾದರಿ ರಾಷ್ಟ್ರವನ್ನಾಗಿ ಪರಿವರ್ತಿಸಲು ಎಲ್ಲ ವಿಧಗಳಲ್ಲೂ ನಾವು ಶ್ರಮಿಸಬೇಕಿದೆ. ಭಾರತೀಯ ವಿಜ್ಞಾನ ಸಂಸ್ಥೆಗೆ ಜೆ ಎನ್ ಟಾಟಾ ಅವರ ಹೆಗ್ಗುರುತು ಇದ್ದು, ಇದು ಒಂದು ವಿಜ್ಞಾನದ ಆವಿಷ್ಕಾರದ ಒಂದು ಕೇಂದ್ರ ಬಿಂದು ಆಗಿ ನಿಂತಿದೆ ಎಂದರು.

ಇಂದು ನಾವು ನ್ಯಾನೋ ಟೆಕ್ನಾಲಜಿ, ಜೈವಿಕ ವಿಜ್ಞಾನ, ಜೆನರಿಕ್ ಔಷಧಿ ಹಾಗೂ ಲಸಿಕೆಗಳು ಮುಂತಾದವುಗಳಲ್ಲಿ ಅಪಾರ ಸಾಧನೆ ಮಾಡಿದ್ದೇವೆ. ವಿಜ್ಞಾನಿಗಳಿಗೆ ಯಾವಾಗಲೂ ವಿಜ್ಞಾನದ ಹಸಿವಿದ್ದು, ಹೊಸ ಆವಿಷ್ಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಇಂದು ಭಾರತ ಬಡತನ, ಅನಾರೋಗ್ಯ, ಆಹಾರ ಮತ್ತು ಇಂಧನ ಶಕ್ತಿಗಳಲ್ಲಿ ಕೊರತೆಯನ್ನು ಅನುಭವಿಸುತ್ತಿದೆ. ಇದನ್ನು ಮೆಟ್ಟಿನಿಂತು ನಾವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರಬೇಕು ಎಂದು ಅಭಿಪ್ರಾಯಪಟ್ಟರು.

ಸರ್ ಸಿ.ವಿ. ರಾಮನ್, ಎಸ್. ಚಂದ್ರಶೇಖರ್, ಅಬ್ದುಲ್ ಕಲಾಂ, ಸಿ.ಎನ್.ಆರ್. ರಾವ್, ಅವರ ಹೆಸರುಗಳನ್ನು ಪ್ರಸ್ತಾಪಿಸಿದ ಅವರು, ವಿಜ್ಞಾನಿಗಳೇ ದೇಶದ ಬೆನ್ನೆಲುಬು. ಅವರಿಂದಲೇ ದೇಶ ಸುಧಾರಣೆಯತ್ತ ಮುಖ ಮಾಡಲು ಸಾಧ್ಯ. ಬೆಂಗಳೂರು ಸಹ ಮಾಹಿತಿ ತಂತ್ರಜ್ಞಾನದ ತವರೂರು ಎಂದರು.

ಇಸ್ರೋ, ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಮುಖ ವಿಜ್ಞಾನಿಗಳು ವಿಷಯ ಮಂಡನೆ ಮಾಡಿ ವಸ್ತು ವಿಜ್ಞಾನ, ಅಣು ವಿಜ್ಞಾನ, ಜೈವಿಕ ವಿಜ್ಞಾನ, ಬಾಹ್ಯಾಕಾಶಯಾನ ಮುಂತಾದವುಗಳಲ್ಲಾದ ಹೊಸ ಬೆಳವಣಿಗೆಗಳನ್ನು ಪ್ರಸ್ತುತಪಡಿಸಿದರು.

ಸಂವಾದದಲ್ಲಿ ಕರ್ನಾಟಕ ರಾಜ್ಯಪಾಲ ವಿ.ಆರ್.ವಾಲಾ, ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಶ್‌ಚಂದ್ರ ಕುಂಟಿಆ, ಭಾರತೀಯ ವಿಜ್ಞಾನ ಸಂಸ್ಥೆಯ ಹಿರಿಯ ವಿಜ್ಞಾನಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X