Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಾಲಿ ವಿರುದ್ದ ಗೆಲುವಿನ ಮಾಲೆ ಧರಿಸಲು...

ಮಾಲಿ ವಿರುದ್ದ ಗೆಲುವಿನ ಮಾಲೆ ಧರಿಸಲು ಸ್ಪೇನ್ ಲಕ್ಷ್ಯ

ವಾರ್ತಾಭಾರತಿವಾರ್ತಾಭಾರತಿ24 Oct 2017 11:50 PM IST
share

ನವಿ ಮುಂಬೈ, ಅ.24: ಫಿಫಾ ಅಂಡರ್-17 ವಿಶ್ವಕಪ್‌ನಲ್ಲಿ ಬುಧವಾರ ನಡೆಯಲಿರುವ ಎರಡನೆ ಸೆಮಿ ಫೈನಲ್‌ನಲ್ಲಿ ಸ್ಪೇನ್ ತಂಡ 2015ರ ವಿಶ್ವಕಪ್‌ನ ರನ್ನರ್ಸ್‌ ಅಪ್ ಮಾಲಿ ತಂಡವನ್ನು ಎದುರಿಸಲಿದೆ.

ಕ್ವಾರ್ಟರ್ ಫೈನಲ್‌ನಲ್ಲಿ ಇರಾನ್ ವಿರುದ್ಧ 3-1 ಅಂತರದಿಂದ ಜಯ ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಸ್ಪೇನ್ ತಂಡ ಮಾಲಿ ವಿರುದ್ಧ ಗೆಲುವಿನ ಮಾಲೆ ಧರಿಸುವತ್ತ ಚಿತ್ತವಿರಿಸಿದೆ.

 ನವಿ ಮುಂಬೈನ ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಸ್ಪೇನ್‌ಗೆ ಆಫ್ರಿಕದ ಅಂಡರ್-17 ನೇಶನ್ಸ್ ಚಾಂಪಿಯನ್ ಮಾಲಿ ವಿರುದ್ಧ ಕಠಿಣ ಸವಾಲು ಎದುರಿಸಬೇಕಾಗಿದೆ. ಮಾಲಿ ತಂಡದ ಆಟಗಾರರು ದೈಹಿಕವಾಗಿ ಶಕ್ತಿಶಾಲಿಯಾಗಿದ್ದು, ಅತ್ಯಂತ ಚಾಣಾಕ್ಷತನದ ಆಟಕ್ಕೆ ಹೆಸರುವಾಸಿಯಾಗಿದ್ದಾರೆ.

ಸ್ಪೇನ್ ತಂಡ ಟೂರ್ನಿಯ ಮೊದಲ ಪಂದ್ಯದಲ್ಲಿ ಬ್ರೆಝಿಲ್ ವಿರುದ್ಧ ಸೋತಿತ್ತು. ಆನಂತರ ನೈಜರ್ ಹಾಗೂ ಕೊರಿಯಾ ವಿರುದ್ಧ ಜಯ ಸಾಧಿಸಿ ಡಿ ಗುಂಪಿನಲ್ಲಿ ಎರಡನೆ ಸ್ಥಾನ ಪಡೆದಿತ್ತು. ಅಂತಿಮ-16ರ ಸುತ್ತಿನ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ 2-1 ಅಂತರದಿಂದ ಜಯ ಸಾಧಿಸಿತ್ತು.

ಗ್ರೂಪ್ ಹಂತದಲ್ಲಿ ಪರಾಗ್ವೆ ವಿರುದ್ಧ ಸೋತಿರುವ ಮಾಲಿ ಆನಂತರ ನ್ಯೂಝಿಲೆಂಡ್ ಹಾಗೂ ಟರ್ಕಿ ವಿರುದ್ಧ ಜಯ ಸಾಧಿಸಿ ಗುಂಪಿನಲ್ಲಿ ಎರಡನೆ ಸ್ಥಾನ ಪಡೆದಿತ್ತು. ಅಂತಿಮ-16ರ ಸುತ್ತಿನಲ್ಲಿ ಇರಾಕ್‌ನ್ನು 5-1 ರಿಂದ ಹಾಗೂ ಕ್ವಾರ್ಟರ್ ಫೈನಲ್‌ನಲ್ಲಿ ಘಾನಾ ವಿರುದ್ಧ 2-1 ಅಂತರದಿಂದ ಜಯಭೇರಿ ಬಾರಿಸಿತ್ತು.

ಉಭಯ ತಂಡಗಳು ಸ್ಟ್ರೈಕರ್‌ಗಳನ್ನು ಹೆಚ್ಚು ಅವಲಂಬಿಸಿವೆ. ಸ್ಪೇನ್ ತಂಡ ವೆಲೆನ್ಸಿಯಾದ ಯುವ ಆಟಗಾರ ಅಬೆಲ್ ರುಯಿಝ್‌ರನ್ನು ನೆಚ್ಚಿಕೊಂಡಿದೆ. ಈತನಕ 4 ಗೋಲುಗಳನ್ನು ಬಾರಿಸಿರುವ ರುಯಿಝ್ ಟೂರ್ನಿಯ ಅಗ್ರ ಸ್ಕೋರರ್ ಎನಿಸಿಕೊಳ್ಳುವತ್ತ ಹೆಜ್ಜೆ ಇಟ್ಟಿದ್ದಾರೆ.

ಟೂರ್ನಮೆಂಟ್‌ನ ಅಗ್ರ-10 ಗೋಲ್‌ಸ್ಕೋರ್‌ಗಳ ಪೈಕಿ ಮಾಲಿ ತಂಡದ ಮೂವರು ಆಟಗಾರರಿದ್ದಾರೆ. ಲಾಸಾನಾ ಎನ್‌ಡಯಾಯಿ 5 ಗೋಲುಗಳನ್ನು ಬಾರಿಸಿದರೆ, ಜೆವೌಸ್ಸಾ ಟ್ರೊರ್ ಹಾಗೂ ಹಾಡ್ಜಿ ಡ್ರೇಮ್ ತಲಾ 3 ಗೋಲುಗಳನ್ನು ಬಾರಿಸಿದ್ದಾರೆ.

ಮಾಲಿ ತಂಡ ಮೂರು ಗ್ರೂಪ್ ಪಂದ್ಯಗಳಲ್ಲಿ 2 ಪಂದ್ಯಗಳನ್ನು ಮುಂಬೈನಲ್ಲಿ ಆಡಿದ್ದು, ಇಲ್ಲಿನ ವಾತಾವರಣಕ್ಕೆ ಚೆನ್ನಾಗಿ ಹೊಂದಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X