ತುಳು ಸಾಹಿತ್ಯ ಸಮ್ಮೇಳನ: ಸಮಾಲೋಚನಾ ಸಭೆ
ಬಂಟ್ವಾಳ, ಅ. 25: ಡಿಸೆಂಬರ್ 10ರಂದು ಬಂಟ್ವಾಳ ತಾಲೂಕು ಮಟ್ಟದ ತುಳು ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಬಂಟ್ವಾಳ ಸ್ಪರ್ಶ ಕಲಾಮಂದಿರದಲ್ಲಿ ಸಮಾಲೋಚನಾ ಸಭೆ ನಡೆಯಿತು.
'ಅಕಾಡಮಿ ನಡಿಗೆ ಜನರ ಕಡೆಗೆ' ಎಂಬ ತುಳು ಸಾಹಿತ್ಯ ಅಕಾಡಮಿಯ ಯೋಚನೆಯಂತೆ ಈ ಸಮ್ಮೇಳನ ನಡೆಯಲಿದೆ. ತುಳು ಕೂಟ ಬಂಟ್ವಾಳ ಇದಕ್ಕೆ ಸಾಥ್ ನೀಡಲಿದೆ. ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಕರ್ನಾಟಕತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ಎ.ಸಿ.ಭಂಡಾರಿ ಹೇಳಿದರು .
ತುಳು ಭಾಷೆಯನ್ನು 8 ನೇ ಪರಿಚ್ಚೇದ ಸೇರಿಸುವ ನಿಟ್ಟಿನಲ್ಲಿ ಅ.29 ರಂದು ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಅಗಮಿಸುವ ವೇಳೆ ಧರ್ಮಸ್ಥಳ ಧಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಮೂಲಕ ಮನವಿ ಸಲ್ಲಿಸಲಾಗುವುದು ಇದಕ್ಕೆ ಮನ್ನಣೆ ದೊರಕುವ ಆಶಾಭಾವನೆ ಇದೆ ಎಂದು ಎ.ಸಿ.ಭಂಡಾರಿ ಹೇಳಿದರು. ಇದೇ ವೇಳೆ ಸಮ್ಮೇಳನದ ಯಶಸ್ವಿಗಾಗಿ ವಿವಿಧ ಉಪಸಮಿತಿಯನ್ನು ರಚಿಸಲಾಯಿತು.
ಸ್ವಾಗತ, ಉದ್ಘಾಟನೆ, ಚರ್ಚಾಗೋಷ್ಠಿ, ಕವಿಗೋಷ್ಠಿ, ಹಾಸ್ಯಗೋಷ್ಠಿ, ತುಳು ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ತುಳು ಲಿಪಿ ಕಲಿತವರಿಗೆ ಸ್ಪರ್ಧೆ, ಅಜ್ಜಿಕಥೆ, ಪ್ರಬಂಧ ಸ್ಪರ್ಧೆ ಹೀಗೆ ಅನೇಕ ಕಾರ್ಯಕ್ರಮದ ಸ್ವರೂಪದ ಬಗ್ಗೆ ಚರ್ಚಿಸಲಾಯಿತು.
ತುಳುಕೂಟ ತಾಲೂಕು ಅಧ್ಯಕ್ಷ ಸುದರ್ಶನ ಜೈನ್ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ಸದಸ್ಯರಾದ ಗೋಪಾಲ ಅಂಚನ್, ವಿಜಯಾ ಶೆಟ್ಟಿ ಸಾಲೆತ್ತೂರು, ವಿದ್ಯಾಶ್ರೀ ಎಸ್, ಸುಧಾ ನಾಗೇಶ , ಹಿರಿಯ ನಾಟಕಕಾರ ಶಿವಾನಂದ ಕರ್ಕೇರ, ಕಸಾಪ ತಾಲೂಕು ಅಧ್ಯಕ್ಷ ಮೋಹನ ರಾವ್, ಸರಪಾಡಿ ಅಶೋಕ ಶೆಟ್ಟಿ, ಸುಭಾಶ್ಚಂದ್ರ ಜೈನ್, ಡಿ.ಎಂ.ಕುಲಾಲ್, ಬಿ.ತಮ್ಮಯ್ಯ, ಕೆ.ಗಂಗಾಧರ ಭಟ್, ರಮೇಶ್ ನಾಯಕ್ ರಾಯಿ, ಮಂಜು ವಿಟ್ಲ, ಜಯಾನಂದ ಪೆರಾಜೆ, ತಾರಾನಾಥ ಕೊಟ್ಟಾರಿ, ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಪ್ರಭಾಕರ ಪ್ರಭು ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭ ತುಳು ಕೂಟ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕಲಾವಿದ ಎಚ್.ಕೆ.ನಯನಾಡು ಕಾರ್ಯಕ್ರಮ ನಿರೂಪಿಸಿದರು.