ಕೆಪಿಸಿಸಿ ಸದಸ್ಯನಾಗಿ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆಯ್ಕೆ
ಬಂಟ್ವಾಳ, ಅ.25: ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ನಿಂದ ಕೆಪಿಸಿಸಿಗೆ ಸದಸ್ಯರನ್ನಾಗಿ ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಆದೇಶಿಸಿದ್ದಾರೆ.
ಈ ಹಿಂದೆ ಬಂಟ್ವಾಳ ಬ್ಲಾಕ್ ನಿಂದ ಸಚಿವ ರಮಾನಾಥ ರೈ ಅವರನ್ನು ಕೆಪಿಸಿಸಿಗೆ ಸದಸ್ಯರನ್ನಾಗಿ ಶಿಫಾರಸು ಮಾಡಲಾಗಿತ್ತು. ಇದೀಗ ಜಿಪಂ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ ಅವರನ್ನು ಕೆಪಿಸಿಸಿಗೆ ಸದಸ್ಯರನ್ನಾಗಿ ನಾಮ ನಿರ್ದೇಶನಗೊಳಿಸಿದೆ.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನಿಂದ ಮಂಗಳೂರು ವಿಧಾನ ಸಭಾ ಕ್ಷೇತ್ರಕ್ಕೊಳಪಟ್ಟ ಯು.ಕೆ.ಮೋನು ಅವರನ್ನು ಆಯ್ಕೆಗೊಳಿಸಲಾಗಿತ್ತು.
ಹಾಗೆಯೇ ಇತ್ತೀಚೆಗೆ ತಾಲೂಕಿನ ಜಿಪಂ ಸದಸ್ಯರಾದ ಎಂ.ಎಸ್. ಮಹಮ್ಮದ್, ಮಮತಾ ಗಟ್ಟಿ ಹಾಗೂ ಬಿ.ಸಿ.ರೋಡಿನ ವಕೀಲ ಅಶ್ವನಿ ಕುಮಾರ್ ರೈ ಅವರನ್ನು ಕೆಪಿಸಿಸಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು.
Next Story