Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೇಶ್ವೆಗಳಿಗಿಂತಲೂ ಘೋರವಾಗಿದೆ ಬಿಜೆಪಿ...

ಪೇಶ್ವೆಗಳಿಗಿಂತಲೂ ಘೋರವಾಗಿದೆ ಬಿಜೆಪಿ ಆಡಳಿತ ವ್ಯವಸ್ಥೆ: ಜ್ಞಾನಪ್ರಕಾಶ್ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ25 Oct 2017 8:59 PM IST
share
ಪೇಶ್ವೆಗಳಿಗಿಂತಲೂ ಘೋರವಾಗಿದೆ ಬಿಜೆಪಿ ಆಡಳಿತ ವ್ಯವಸ್ಥೆ: ಜ್ಞಾನಪ್ರಕಾಶ್ ಸ್ವಾಮೀಜಿ

ಬೆಂಗಳೂರು, ಅ.25: ದಲಿತನೊಬ್ಬ ವಾಚ್ ಕಟ್ಟಿದರೆ ಕೈಯನ್ನೇ ಕಡಿಯಲಾಗುತ್ತಿದೆ. ಮೀಸೆ ಬಿಟ್ಟರೆ ಬೆನ್ನಿಗೆ ಚೂರಿ ಹಾಕುವಂತಹ ಪರಿಸ್ಥಿತಿಯನ್ನು ಗಮನಿಸಿದರೆ ದೇಶದಲ್ಲಿ ಪೇಶ್ವೆಗಳಿಗಿಂತಲೂ ಬಿಜೆಪಿ ಆಡಳಿತ ವ್ಯವಸ್ಥೆ ಅತ್ಯಂತ ಘೋರವಾಗಿದೆ ಎಂದು ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ.

ಬುಧವಾರ ಸಮೃದ್ಧಿ ಎಜುಕೇಷನಲ್ ಆ್ಯಂಡ್ ಕಲ್ಚರಲ್ ಟ್ರಸ್ಟ್ ನಗರದ ಎನ್‌ಜಿಒ ಸಭಾಂಗಣದಲ್ಲಿ ಆಯೋಜಿಸಿದ್ದ ಲೇಖಕ ಮದನ್ ಪಟೇಲ್‌ರವರ ‘ತಮಟೆ ಸಮಾಜದ ದನಿ’ ಕಾದಂಬರಿಯ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಬಡವರು, ದಲಿತರು, ಹಿಂದುಳಿದವರು ಸೇರಿದಂತೆ ಸಾಮಾನ್ಯ ಜನತೆ ಸಹಜವಾಗಿ, ತಮ್ಮ ಸ್ವ ಇಚ್ಛೆಗೆ ಅನುಗುಣವಾಗಿ ಬದುಕುವುದೇ ದೊಡ್ಡ ಸವಾಲಿನ ಸಂಗತಿಯಾಗಿದೆ ಎಂದು ವಿಷಾದಿಸಿದರು.

ದೇಶದಲ್ಲಿ ದಲಿತ ಸಮುದಾಯ ಮೇಲೆ ಹಲ್ಲೆಗಳು ನಿರಂತರವಾಗಿದೆ. ದಲಿತ ಮಹಿಳೆಯರ ಮೇಲಿನ ಅತ್ಯಾಚಾರಗಳು ಯಥಾಪ್ರಕಾರ ಮುಂದುವರೆದಿದೆ. ಈ ಘಟನೆಗಳ ಕುರಿತು ಬಾಯಿ ಬಿಡದ ಪ್ರಧಾನಿ ಮೋದಿ ನಗದು ರಹಿತ ಸಮಾಜವನ್ನು ನಿರ್ಮಿಸಲು ಉತ್ಸಾಹ ತೋರಿಸುತ್ತಾರೆಯೇ ವಿನಃ ಜಾತಿ ರಹಿತ ಸಮಾಜದ ಕುರಿತು ಯಾವುದೇ ಕಾರ್ಯಕ್ರಮಗಳಿಲ್ಲ ಎಂದು ಕಿಡಿಕಾರಿದರು.

ಚರ್ಮ ಸಂಸ್ಕೃತಿ: ದ್ರಾವಿಡ ಸಮುದಾಯದ್ದು ಚರ್ಮ ಸಂಸ್ಕೃತಿ. ಚರ್ಮವೊಂದು ಕಲೆಯಾಗಿಯೂ, ಸಂಸ್ಕೃತಿಯಾಗಿಯೂ, ಬದುಕಾಗಿಯೂ ರೂಪಗೊಂಡಿದೆ. ದೇವರ ಉತ್ಸವಗಳಲ್ಲಿ ಚರ್ಮ ವಾದ್ಯಗಳು ಬಹುಮುಖ್ಯ ಭಾಗವಾಗಿದ್ದವು. ಚರ್ಮದ ತಮಟೆಗಳನ್ನು ಬಾರಿಸದೆ ಉತ್ಸವಗಳು ಪ್ರಾರಂಭವಾಗುವುದೇ ಇಲ್ಲವೆಂದು ಹೇಳಿದರು.

ಕೃತಿಕಾರ ಮದನ್‌ ಪಟೇಲ್ ಮಾತನಾಡಿ, ನಾನು ಬರೆದಿರುವ ‘ತಮಟೆ ಸಮಾಜದ ದನಿ’ ಕಾದಂಬರಿಯಲ್ಲಿ ತಮಟೆ ಬಾರಿಸುವ ದಲಿತನೊಬ್ಬನನ್ನು ಸಮಾಜ ಹೇಗೆ ನಡೆಸಿಕೊಳ್ಳುತ್ತದೆ. ಹಾಗೂ ಆತನ ತವಕ, ತಲ್ಲಣಗಳನ್ನು ದಾಖಲಿಸಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ಹಿರಿಯ ಕವಿ ಸಿದ್ದಲಿಂಗಯ್ಯ, ಕತೆಗಾರ ಕುಂ.ವೀರಭದ್ರಪ್ಪ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X