ಕಾರು ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು
ಕಾಪು, ಅ.25: ಮೂಡಬೆಟ್ಟು ಜುಮಾದಿ ಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.24ರಂದು ಸಂಜೆ 4:30ರ ಸುಮಾರಿಗೆ ಕಾರೊಂದು ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಹರಿಶ್ಚಂದ್ರ ಸುವರ್ಣ ಎಂದು ಗುರುತಿಸಲಾಗಿದೆ. ಇವರು ತನ್ನ ಸ್ಕೂಟರ್ನಲ್ಲಿ ಕಾಪು ಕಡೆಯಿಂದ ಕಟಪಾಡಿ ಕಡೆಗೆ ಹೋಗುವಾಗ ಹಿಂದಿನಿಂದ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆ ಯಿತು. ಇದರಿಂದ ಸ್ಕೂಟರ್ ಸಮೇತ ರಸ್ತೆ ಬಿದ್ದು ಗಂಭೀರವಾಗಿ ಗಾಯ ಗೊಂಡ ಹರಿಶ್ಚಂದ್ರ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story