Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ: ಕರ್ನಾಟಕ ಮೇಲುಗೈ

ರಣಜಿ ಟ್ರೋಫಿ: ಕರ್ನಾಟಕ ಮೇಲುಗೈ

ವಾರ್ತಾಭಾರತಿವಾರ್ತಾಭಾರತಿ25 Oct 2017 11:39 PM IST
share
ರಣಜಿ ಟ್ರೋಫಿ: ಕರ್ನಾಟಕ ಮೇಲುಗೈ

ಶಿವಮೊಗ್ಗ, ಅ.25: ಹೈದರಾಬಾದ್ ವಿರುದ್ಧ ರಣಜಿ ಟ್ರೋಫಿಯ ‘ಎ’ ಗುಂಪಿನ ಪಂದ್ಯದಲ್ಲಿ ಆತಿಥೇಯ ಕರ್ನಾಟಕ ಮೇಲುಗೈ ಸಾಧಿಸಿದೆ.

ಎರಡನೆ ದಿನವಾದ ಬುಧವಾರ ಕರ್ನಾಟಕ ತಂಡ 2ನೆ ಇನಿಂಗ್ಸ್‌ನಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 127 ರನ್ ಗಳಿಸಿದ್ದು, ಒಟ್ಟು 174 ರನ್ ಮುನ್ನಡೆಯಲ್ಲಿದೆ. ಐದನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 70 ರನ್ ಸೇರಿಸಿರುವ ಕರುಣ್ ನಾಯರ್(ಅಜೇಯ 37,75 ಎಸೆತ, 5 ಬೌಂಡರಿ) ಹಾಗೂ ಸ್ಟುವರ್ಟ್ ಬಿನ್ನಿ(ಅಜೇಯ 26,67 ಎಸೆತ, 4 ಬೌಂಡರಿ)ತಂಡಕ್ಕೆ ಆಸರೆಯಾಗಿದ್ದಾರೆ.

ಹೈದರಾಬಾದ್‌ನ ಎಡಗೈ ಸ್ಪಿನ್ನರ್ ಮೆಹದಿ ಹಸನ್(4-54) ದಾಳಿಗೆ ತತ್ತರಿಸಿದ ಕರ್ನಾಟಕ 57 ರನ್‌ಗೆ ಅಗ್ರ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಆಗ ಜೊತೆಯಾದ ನಾಯರ್-ಬಿನ್ನಿ ಜೋಡಿ ಬ್ಯಾಟಿಂಗ್‌ನ್ನು ಮೂರನೆ ದಿನಕ್ಕೆ ಕಾಯ್ದಿರಿಸಿದ್ದಾರೆ.

ಹೈದರಾಬಾದ್ 136 ರನ್‌ಗೆ ಆಲೌಟ್: ಇದಕ್ಕೆ ಮೊದಲು 5 ವಿಕೆಟ್‌ಗಳ ನಷ್ಟಕ್ಕೆ 111 ರನ್‌ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಹೈದರಾಬಾದ್ ನಿನ್ನೆಯ ಮೊತ್ತಕ್ಕೆ ಕೇವಲ 25 ರನ್ ಸೇರಿಸುವಷ್ಟರಲ್ಲಿ ಕೊನೆಯ 5 ವಿಕೆಟ್‌ಗಳನ್ನು ಕಳೆದುಕೊಂಡಿತು. ಜೀವನಶ್ರೇಷ್ಠ ಬೌಲಿಂಗ್ ಮಾಡಿದ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್(5-17) ಹೈದರಾಬಾದ್‌ನ ಕೊನೆಯ ಐದು ವಿಕೆಟ್‌ಗಳನ್ನು ಬಾಚಿಕೊಂಡರು.

 ಹೈದರಾಬಾದ್‌ನ ಪರ ಕರ್ನಾಟಕ ಮೂಲದ ವಿಕೆಟ್‌ಕೀಪರ್ ಕೆ. ಸುಮಂತ್ 150 ಎಸೆತಗಳಲ್ಲಿ 68 ರನ್ ಗಳಿಸಿ ಏಕಾಂಗಿ ಹೋರಾಟ ನೀಡಿದರು. ಆಕಾಶ್ ಭಂಡಾರಿ(24), ಅಕ್ಷತ್ ರೆಡ್ಡಿ(13)ಎರಡಂಕೆಯ ಸ್ಕೋರ್ ದಾಖಲಿಸಿದರು.

ಕರ್ನಾಟಕದ ಪರ ಎಸ್.ಗೋಪಾಲ್ ಯಶಸ್ವಿ ಬೌಲರ್ ಎನಿಸಿಕೊಂಡರು. ಕೆ.ಗೌತಮ್(3-56) ಮೂರು ವಿಕೆಟ್‌ಗಳನ್ನು ಕಬಳಿಸಿದರು.

ಭಾರತದ ಟೆಸ್ಟ್ ಕ್ರಿಕೆಟಿಗ ಕೆ.ಎಲ್. ರಾಹುಲ್(23) ಪಂದ್ಯದಲ್ಲಿ ಎರಡನೆ ಬಾರಿಯೂ ಬ್ಯಾಟಿಂಗ್‌ನಲ್ಲಿ ವಿಫಲರಾದರು. ರಾಹುಲ್ ಕರ್ನಾಟಕದ ಎರಡನೆ ಇನಿಂಗ್ಸ್‌ನಲ್ಲಿ ಔಟಾದ ಮೊದಲ ಬ್ಯಾಟ್ಸ್ ಮನ್ ಎನಿಸಿಕೊಂಡರು.

18.4ನೆ ಓವರ್‌ನಲ್ಲಿ ರಾಹುಲ್‌ಗೆ ಪೆವಿಲಿಯನ್ ಹಾದಿ ತೋರಿಸಿದ ಹಸನ್ 24.1 ಓವರ್‌ನಲ್ಲಿ ಆರ್.ಸಮರ್ಥ್(29) ವಿಕೆಟ್‌ನ್ನು ಉರುಳಿಸಿದರು. 22 ಎಸೆತಗಳನ್ನು ಎದುರಿಸಿದರೂ ಖಾತೆ ತೆರೆಯಲು ವಿಫಲವಾದ ಮಯಾಂಕ್ ಅಗರವಾಲ್ ಅವರು ಹಸನ್‌ಗೆ ಮೂರನೆ ಬಲಿಯಾದರು. ಮೂರು ಎಸೆತಗಳ ಬಳಿಕ ಕೆ. ಗೌತಮ್ ಕೂಡ ತನ್ನಖಾತೆಗೆ ಒಂದೂ ರನ್ ಸೇರಿಸದೇ ಹಸನ್ ಬೌಲಿಂಗ್‌ನಲ್ಲಿ ಕ್ಲೀನ್‌ಬೌಲ್ಡಾದರು.

ನಾಯರ್(ಅಜೇಯ 37) ಹಾಗೂ ಬಿನ್ನಿ(ಅಜೇಯ 26) ಕ್ರೀಸ್ ಕಾಯ್ದುಕೊಂಡಿದ್ದು, ಹೈದರಾಬಾದ್ ಬೌಲರ್ ಹಸನ್ ದಿನದ ಯಶಸ್ವಿ ಬೌಲರ್ ಎನಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X