Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಆರ್ಥಿಕ ಅಭಿವೃದ್ಧಿಯಲ್ಲಿ...

ರೈತರ ಆರ್ಥಿಕ ಅಭಿವೃದ್ಧಿಯಲ್ಲಿ ಪಶುವೈದ್ಯರ ಪಾತ್ರ ಮುಖ್ಯ: ಡಾ.ಮುಹಮ್ಮದ್ ಜಫರುಲ್ಲಾಖಾನ್

ವಾರ್ತಾಭಾರತಿವಾರ್ತಾಭಾರತಿ25 Oct 2017 11:51 PM IST
share
ರೈತರ ಆರ್ಥಿಕ ಅಭಿವೃದ್ಧಿಯಲ್ಲಿ ಪಶುವೈದ್ಯರ ಪಾತ್ರ ಮುಖ್ಯ: ಡಾ.ಮುಹಮ್ಮದ್ ಜಫರುಲ್ಲಾಖಾನ್

ತುಮಕೂರು, ಅ.25: ರೈತರ ಆರ್ಥಿಕತೆಯಲ್ಲಿ ಪಶುವೈದ್ಯಕೀಯ ಇಲಾಖೆಯ ಪ್ರಮುಖ ಪಾತ್ರವಿದೆಯೆಂದು ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ನಿರ್ದೇಶಕ ಡಾ.ಮುಹಮ್ಮದ್ ಜಫರುಲ್ಲಾಖಾನ್ ಕಿವಿಮಾತು ಹೇಳಿದರು.

ನಗರದ ಎಸ್‌ಎಸ್‌ಐಟಿಯ ಎಂಬಿಎ ಸೆಮಿನಾರ್ ಹಾಲ್‌ನಲ್ಲಿ ಕರ್ನಾಟಕ ಪಶುವೈದ್ಯಕೀಯ ಸಂಘ, ತುಮಕೂರು ಶಾಖೆ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘ ಆಯೋಜಿಸಿದ್ದ ‘ಪಶು ರೋಗಗಳ ನಿಯಂತ್ರಣ ಕುರಿತ ಯೋಜನೆಗಳು ಮತ್ತು ಪಶು ರಕ್ಷಣಾ ಕಾನೂನು’ ಕುರಿತ ತಾಂತ್ರಿಕ ವಿಚಾರ ಸಂಕಿರಣ ಹಾಗೂ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಾ, ಪಶುಗಳು ರೋಗಗಳಿಗೆ ತುತ್ತಾಗದಂತೆ ಪಶುಪಾಲಕರಿಗೆ ಅರಿವು ಮೂಡಿಸಿದರೆ ರೈತರು ಆರ್ಥಿಕತೆಯಲ್ಲಿ ಬಲಾಢ್ಯಗೊಳ್ಳುತ್ತಾನೆ ಎಂದರು.

ಪಶುವೈದ್ಯರ ನಿರಂತರ ಪ್ರಯತ್ನದ ಫಲವಾಗಿ ರಾಜ್ಯದ ಪಶು ಸಂಪತ್ತಿಗೆ ಕಂಟಕವಾಗಿದ್ದ ಕಾಲುಬಾಯಿ ರೋಗವು ಶೇ.98ರಷ್ಟು ಹತೋಟಿಗೆ ಬಂದಿದೆ. ರೈತರಿಗೆ ಪಶುವೈದ್ಯರು ಮತ್ತು ಸಿಬ್ಬಂದಿ ಈ ರೋಗಕ್ಕೆ ಲಸಿಕೆ ಹಾಕುವ ಬಗ್ಗೆ ತಿಳಿ ಹೇಳುವ ಮೂಲಕ ಪ್ರೇರೇಪಿಸಬೇಕಾಗಿದೆ ಎಂದು ತಿಳಿಸಿದರು.

ಪ್ರಾಣಿ ರಕ್ಷಣಾ ಕಾನೂನುಗಳ ಬಗ್ಗೆ ನಾವು ಸಾಕಷ್ಟು ಎಚ್ಚರಿಕೆ ವಹಿಸಬೇಕಾಗಿದೆ. ಪಶು ವೈದ್ಯರು ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕು.ಬಿಡಾಡಿ ಜಾನುವಾರುಗಳ ಬಗ್ಗೆಯೂ ಕಾಳಜಿ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದ ಪಶುವೈದ್ಯಕೀಯ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ವಿ.ಸಿ.ರುದ್ರಪ್ರಸಾದ್, ನ.1ರಿಂದ ರಾಜ್ಯದಲ್ಲಿ 12ನೆ ಸುತ್ತಿನ ಕಾಲುಬಾಯಿ ಜ್ವರದ ವಿರುದ್ದ ಲಸಿಕೆ ಕಾರ್ಯಕ್ರಮ ಆರಂಭವಾಗಲಿದೆ. ಗೋಹತ್ಯೆ ನಿಷೇದ ಕಾನೂನು ಜಾರಿಯ ನಂತರ ಇರುವ ಗೊಂದಲಗಳ ನಿವಾರಣೆ ಕುರಿತು ವಿಚಾರ ಸಂಕಿರಣದಲ್ಲಿ ವಿವರ ನೀಡಲಿದ್ದು, ಇದರ ಲಾಭ ಪಡೆಯುವಂತೆ ತಿಳಿಸಿದರು.

ಈ ಸಂದರ್ಭ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಭಿವೃದ್ದಿ ವಿಭಾಗದ ಅಪರ ನಿರ್ದೇಶಕ ಡಾ.ಎನ್.ಎಸ್.ಪರಮೇಶ್ವರಪ್ಪ, ಶಿಕ್ಷಣ ಮತ್ತು ತರಬೇತಿ ಇಲಾಖೆಯ ಅಪರ ನಿರ್ದೇಶಕ ಡಾ.ಆರ್.ಕೆ.ಚೆಲುವಯ್ಯ, ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ನಿರ್ದೇಶಕ ಡಾ.ಎಸ್.ಎಂ.ಭೈರೇಗೌಡ, ಪಶುವೈದ್ಯಕೀಯ ಇಲಾಖೆಯ ಬೆಂಗಳೂರು ವಿಭಾಗದ ಜಂಟಿ ನಿರ್ದೇಶಕ ಡಾ.ಜಯಣ್ಣ, ಜಿಲ್ಲಾ ಸಂಘದ ಕಾರ್ಯದರ್ಶಿ ಡಾ.ಎ.ಸಿ.ದಿವಾಕರ್, ಉಪಾಧ್ಯಕ್ಷ ಡಾ.ಎಸ್.ಶಶಿಕಾಂತ್ ಭೂದಿಹಾಳ್, ಜಂಟಿ ಕಾರ್ಯದರ್ಶಿ ಡಾ.ನಂಜೇಗೌಡ, ಖಜಾಂಚಿ ಡಾ ನಾಗಭೂಷಣ್, ಡಾ.ಎಚ್. ಶಶಿಕಲಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X