ಅ.29ಕ್ಕೆ ತುಳುವೆರೆ ಜನಪದ ಕೂಟದ ಸಭೆ
ಮಡಿಕೇರಿ, ಅ.26: ನಗರದಲ್ಲಿ ಸುಮಾರು 7 ಸಾವಿರಕ್ಕಿಂತಲೂ ಅಧಿಕ ಮಂದಿ ತುಳು ಭಾಷಿಕರಿದ್ದು, ಇವರೆಲ್ಲರನ್ನು ಒಂದೆಡೆ ಸಂಘಟಿಸುವ ಉದ್ದೇಶದಿಂದ ತುಳುವೆರೆ ಜನಪದ ಕೂಟದ ಮಡಿಕೇರಿ ನಗರ ಘಟಕವನ್ನು ರಚನೆ ಮಾಡಲು ನಿರ್ಧಾರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರ ಸಮಿತಿ ರಚನಾ ಸಭೆಯು ಅ.29 ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ಜಿಲ್ಲಾ ತುಳುವೆರೆ ಜನಪದ ಕೂಟದ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊಡಗು ಜಿಲ್ಲಾ ತುಳುವೆರೆ ಜನಪದ ೂಟವು ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ತುಳು ಭಾಷಿಕರ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ತುಳು ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸುವ ನಿಟ್ಟಿನಲ್ಲಿ ಸಂಘಟನೆಯನ್ನು ಆಸ್ತಿತ್ವಕ್ಕೆ ತರಲಾಗಿದೆ ಎಂದ ಅವರು, ಅ.29ರಂದು ಕೂಟದ ತಾಲೂಕು ಅಧ್ಯಕ್ಷ ಪ್ರಭು ರೈ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆಯುವ ಸಭೆಯಲ್ಲಿ ತುಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಪ್ರಭು ರೈ ಅಧ್ಯಕ್ಷರು:7829131743, ಎಂ.ಡಿ.ಸುರೇಶ್, ಉಪಾಧ್ಯಕ್ಷರು:9448895962, ಬಿ.ಎನ್.ಜಯಪ್ಪಕಾರ್ಯದರ್ಶಿ:9449050430ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.





