Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಕನ್ನಡ ದೇಸಿ ಸಮ್ಮಿಲನದ ನುಡಿಗಳು

ಕನ್ನಡ ದೇಸಿ ಸಮ್ಮಿಲನದ ನುಡಿಗಳು

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ27 Oct 2017 12:04 AM IST
share
ಕನ್ನಡ ದೇಸಿ ಸಮ್ಮಿಲನದ ನುಡಿಗಳು

 ‘ಕನ್ನಡ ದೇಸಿ ಸಮ್ಮಿಲನದ ನುಡಿಗಳು’ ಪ್ರೊ. ಬಿ. ಎ. ವಿವೇಕ ರೈ ಅವರ ಭಾಷಣಗಳ ಬರಹದ ರೂಪ. ಸುಮಾರು ಇಪ್ಪತ್ತೈದು ವರ್ಷಗಳ ಹರಹಿನ ಅವರ ಭಾಷಣಗಳ ಸಂಗ್ರಹ ಇಲ್ಲಿವೆ. ಜಾನಪದ ಮತ್ತು ದೇಸಿ ಸಮ್ಮೇಳನಗಳ ಅಧ್ಯಕ್ಷ ಭಾಷಣಗಳಿಂದ ತೊಡಗಿ ಜಾನಪದ ಸಂಬಂಧಿಯಾದ ಇತರ ಹಲವು ಉಪನ್ಯಾಸಗಳು ಇಲ್ಲಿ ಒಟ್ಟು ಸೇರಿವೆ. ಇದರ ಜೊತೆಗೆ ಕನ್ನಡ ವಿಶ್ವವಿದ್ಯಾನಿಲಯ ಹಂಪಿಯಲ್ಲಿ ಅವರು ಕುಲಪತಿಯಾಗಿದ್ದ ಅವಧಿಯಲ್ಲಿ ನಡೆಸಿದ ಮೂರು ನುಡಿ ಹಬ್ಬಗಳ ಸ್ವಾತ ಭಾಷಣಗಳು, ಕನ್ನಡ ವಿಶ್ವವಿದ್ಯಾನಿಲಯದೊಳಗಿನ ಅವರ ಕೆಲಸಗಳನ್ನು ಮತ್ತು ಚಿಂತೆಗಳನ್ನು ದಾಖಲು ಮಾಡುತ್ತವೆ. ಇವುಗಳ ಜೊತೆಗೆ ಕನ್ನಡ ವಿವಿಶ್ವವಿದ್ಯಾನಿಲಯದ ಹಸ್ತಪ್ರತಿ ಸಮ್ಮೇಳನ, ದೇಸೀ ಸಮ್ಮೇಳನ ಮತ್ತು ಇತರ ವಿಚಾರಸಂಕಿರಣಗಳ ಮಾತುಗಳು ಬರಹ ರೂಪ ಪಡೆದಿವೆ. ತುಂಬ ಹಳೆಯ ಆದರೆ ನೆನಪಿನ ದೃಷ್ಟಿಯಿಂದ ಬಹಳ ಮಹತ್ವದ ಮಂಗಳೂರು ವಿವಿ 1988ರ ವಿಚಾರ ಸಂಕಿರಣದ ಮಾತುಗಳನ್ನೂ ಇಲ್ಲಿ ಜೋಡಿಸಲಾಗಿದೆ.

 ವಿವೇಕ ರೈ ಕನ್ನಡದ ಹಿರಿಯ ವಿದ್ವಾಂಸ. ಈ ನಾಡಿನ ಇತಿಹಾಸ ಮತ್ತು ವರ್ತಮಾನಗಳನ್ನು ವಿಮರ್ಶಾ ಕಣ್ಣುಗಳಿಂದ ನೋಡುತ್ತಾ, ಮಾತನಾಡುತ್ತಾ ಬಂದವರು. ಅಕಾಡಮಿ ಶಿಸ್ತಿನಿಂದ ಕನ್ನಡ ಚರಿತ್ರೆಯನ್ನು ಅಧ್ಯಯನ ಮಾಡಿದವರು. ಸಾವಿರಾರು ವಿದ್ಯಾರ್ಥಿಗಳನ್ನು ತಯಾರು ಮಾಡಿದವರು. ಕನ್ನಡ ಮತ್ತು ತುಳು ಜಾನಪದಗಳನ್ನು ವಿಶೇಷ ಆದ್ಯತೆಯಿಂದ ಬಗೆದವರು. ಮತ್ತು ಕನ್ನಡ - ತುಳು ಭಾಷೆಯ ನಡುವಿನ ಕೊಂಡಿಯಾಗಿ ಕೆಲಸ ಮಾಡಿದವರು. ಆದುದರಿಂದಲೇ, 80 ರ ದಶಕದಿಂದ ಅವರು ವಿವಿಧ ಸಮಾರಂಭಗಳಲ್ಲಿ ಆಡಿದ ಮಾತುಗಳು ದಾಖಲಾಗುವುದು ಅತ್ಯಗತ್ಯ. ಮುಂದಿನ ತಲೆಮಾರಿನ ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ, ಶಿಕ್ಷಕರಿಗೆ ಈ ಪುಸ್ತಕ ಮಾರ್ಗದರ್ಶಿ. ಜಾನಪದ ಸಮ್ಮೇಳನ, ದೇಸಿ ಸಮ್ಮೇಳನ ಮತ್ತು ಕನ್ನಡ ವಿಶ್ವವಿದ್ಯಾನಿಲಯ ಸಮ್ಮೇಳನಗಳು ಒಂದುಗೂಡಿರುವುದರಿಂದ ಈ ಕೃತಿಗೆ ‘ಕನ್ನಡ-ದೇಸಿ ಸಮ್ಮಿಲನದ ನುಡಿಗಳು’ ಎಂದು ಹೆಸರಿಟ್ಟಿರುವುದು ಅರ್ಥಪೂರ್ಣವಾಗಿದೆ.

ಆಕೃತಿ ಆಶಯ ಪಬ್ಲಿಕೇಶನ್ ಮಂಗಳೂರು ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 175. ಮುಖಬೆಲೆ 180 ರೂ. 

share
-ಕಾರುಣ್ಯ
-ಕಾರುಣ್ಯ
Next Story
X