Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಹಾಲಿವುಡ್ ನಿರ್ದೇಶಕನ ಚಿತ್ರದಲ್ಲಿ...

ಹಾಲಿವುಡ್ ನಿರ್ದೇಶಕನ ಚಿತ್ರದಲ್ಲಿ ನಟರಾಜ್

ವಾರ್ತಾಭಾರತಿವಾರ್ತಾಭಾರತಿ27 Oct 2017 11:15 PM IST
share
ಹಾಲಿವುಡ್ ನಿರ್ದೇಶಕನ ಚಿತ್ರದಲ್ಲಿ ನಟರಾಜ್

ವಿಭಿನ್ನ ಕಥಾವಸ್ತುವಿನ ‘ರಾಮಾರಾಮಾ ರೇ’ ಚಿತ್ರದ ಮೂಲಕ ಡಿ. ಸತ್ಯಪ್ರಕಾಶ್ ನಿರ್ದೇಶಕರಾಗಿ ಸ್ಯಾಂಡಲ್‌ವುಡ್ ಪ್ರವೇಶಿಸಿದ್ದರು. ಇದೇ ಚಿತ್ರದಲ್ಲಿ ಅವರು ನಟರಾಜ್ ಎಂಬ ಅಪ್ಪಟ ಪ್ರತಿಭಾವಂತ ನಟನನ್ನು ಕನ್ನಡಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಇದೀಗ ನಟರಾಜ್ ಜನಪ್ರಿಯತೆ ಹಾಲಿವುಡ್‌ವರೆಗೂ ತಲುಪಿದೆ. ಹೌದು. ನಟರಾಜ್‌ಗೆ ಹಾಲಿವುಡ್ ನಿರ್ದೇಶಕರೊಬ್ಬರು ತನ್ನ ಚಿತ್ರದಲ್ಲಿ ನಟಿಸುವಂತೆ ಆಫರ್ ನೀಡಿದ್ದಾರೆ.

ಇಂಟರ್‌ನೆಟ್‌ನ ಚಲನಚಿತ್ರ ವೀಕ್ಷಣಾ ವೆಬ್‌ಸೈಟ್ ನೆಟ್‌ಫ್ಲಿಕ್ಸ್‌ನಲ್ಲಿ ರಾಮಾ ರಾಮಾ ರೇ ಚಿತ್ರ ವೀಕ್ಷಿಸಿದ್ದ ಹಾಲಿವುಡ್ ನಿರ್ದೇಶಕ ಸ್ಯಾಂಡಿ ಸಾಯಿ ಅವರು ನಟರಾಜ್ ಅಭಿನಯವನ್ನು ತುಂಬಾನೇ ಮೆಚ್ಚಿಕೊಂಡಿದ್ದಾರಂತೆ. ಆ ಚಿತ್ರದಲ್ಲಿ ಗಲ್ಲಿಗೇರಿಸುವವನ ಪಾತ್ರದಲ್ಲಿ ನಟರಾಜ್ ಅಭಿನಯ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮುಕ್ತಕಂಠದ ಪ್ರಶಂಸೆಗೆ ಪಾತ್ರವಾಗಿತ್ತು. ಮೂಲತಃ ಭಾರತೀಯರಾಗಿರುವ ಸ್ಯಾಂಡಿ ಸಾಯಿ ಕಳೆದ 14 ವರ್ಷಗಳಿಂದ ಅಮೆರಿಕದಲ್ಲಿದ್ದು, ತನ್ನದೇ ಆದ ಚಿತ್ರ ನಿರ್ಮಾಣ ಸಂಸ್ಥೆಯನ್ನು ಹೊಂದಿದ್ದಾರೆ. ತನ್ನ ಸಂಸ್ಥೆಯ ಬ್ಯಾನರ್‌ನಲ್ಲಿ ಕೆಲವು ಕಥಾಚಿತ್ರಗಳು ಹಾಗೂ ಸಾಕ್ಷಚಿತ್ರಗಳನ್ನು ನಿರ್ಮಿಸಿದ್ದಾರಂತೆ.

ತನ್ನ ಚಿತ್ರ ನಿರ್ಮಾಣ ಸಂಸ್ಥೆಯ ಮೂಲಕ ಕನ್ನಡ ಚಿತ್ರವೊಂದನ್ನು ನಿರ್ಮಿಸಲು ಸ್ಯಾಂಡಿ ಸಾಯಿ ಆಸಕ್ತರಾಗಿದ್ದಾರೆ. ಅಷ್ಟೇ ಅಲ್ಲ ಆ ಚಿತ್ರಕ್ಕೆ ತಾನೇ ನಿರ್ದೇಶನ ಮಾಡಲು ಇಚ್ಛಿಸಿದ್ದಾರೆ. ಡಿಸೆಂಬರ್‌ನಲ್ಲಿ ಸ್ಯಾಂಡಿ ಭಾರತಕ್ಕೆ ಬರಲಿದ್ದು, ಆ ಬಳಿಕ ತನ್ನ ಮಹತ್ವಾಕಾಂಕ್ಶೆಯ ಚಿತ್ರಕ್ಕೆ ಚಾಲನೆ ನೀಡಲಿದ್ದಾರಂತೆ.

 ಈ ಮಧ್ಯೆ ನಟರಾಜ್ ತನ್ನ ಮುಂದಿನ ಸ್ಯಾಂಡಲ್‌ವುಡ್ ಚಿತ್ರ ‘ಕಲ್ಲುಬೆಟ್ಟದ ದರೋಡೆಕೋರರು’ ಚಿತ್ರದ ಬಗ್ಗೆ ಭಾರೀ ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಅನುಶ್ ಶೆಟ್ಟಿ ಅವರ ಕಾದಂಬರಿಯನ್ನು ಆಧರಿಸಿದ ಈ ಚಿತ್ರಕ್ಕೆ ದೀಪಕ್ ಮಧುವನಳ್ಳಿ ನಿರ್ದೇಶಕರು.

  ‘ಕಲ್ಲುಬೆಟ್ಟದ ದರೋಡೆಕೋರರು’ ಚಿತ್ರದ ಶೇ.60ರಷ್ಟು ಪೂರ್ಣಗೊಂಡಿದ್ದು ಅಂತಿಮ ಶೆಡ್ಯೂಲ್ ಮುಂದಿನವಾರ ಆರಂಭಗೊಳ್ಳಲಿದೆ. ಆನಂತರ ತನ್ನ ಮೂರನೇ ಚಿತ್ರಕ್ಕೂ ಬಣ್ಣ ಹಚ್ಚಲು ನಟರಾಜ್ ತಯಾರಿ ನಡೆಸಲಿದ್ದಾರೆ. ರಾಮಾರಾಮಾ ರೇ ನಿರ್ದೇಶಕ ಸತ್ಯಪ್ರಕಾಶ್ ಆ ಚಿತ್ರಕ್ಕೆ ಸ್ಕ್ರಿಪ್ಟ್ ಹಾಗೂ ಸಂಭಾಷಣೆ ಬರೆಯಲಿದ್ದಾರೆ. ಆದರೆ ಈ ಚಿತ್ರವನ್ನು ರಾಮಾ ರಾಮಾ ರೇಯಲ್ಲಿ ನಟಿಸಿದ್ದ ಕಲಾವಿದರೊಬ್ಬರು ನಿರ್ದೇಶಿಸಲಿದ್ದಾರೆ ಎಂದು ನಟರಾಜ್ ತಿಳಿಸಿದ್ದಾರೆ. ಆದರೆ ಅವರ್ಯಾರೆಂಬುದನ್ನು ಮಾತ್ರ ಗುಟ್ಟಾಗಿಟ್ಟಿದ್ದಾರೆ.ಒಟ್ಟಿನಲ್ಲಿ ನಟರಾಜ್‌ಗೆ ಸ್ಯಾಂಡಲ್‌ವುಡ್‌ನಲ್ಲಿ ಅವಕಾಶಗಳ ಹೆಬ್ಬಾಗಿಲೇ ತೆರೆದಿರುವುದಂತೂ ನಿಜ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X