Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧರ್ಮದ ಅರಿವಿನ ಕೊರತೆಯಿಂದ ಧರ್ಮಾಂಧತೆ: ...

ಧರ್ಮದ ಅರಿವಿನ ಕೊರತೆಯಿಂದ ಧರ್ಮಾಂಧತೆ: ಡಾ.ಎಂ.ಅಣ್ಣಯ್ಯ ಕುಲಾಲ್

ವಾರ್ತಾಭಾರತಿವಾರ್ತಾಭಾರತಿ27 Oct 2017 11:52 PM IST
share
ಧರ್ಮದ ಅರಿವಿನ ಕೊರತೆಯಿಂದ ಧರ್ಮಾಂಧತೆ:  ಡಾ.ಎಂ.ಅಣ್ಣಯ್ಯ ಕುಲಾಲ್

ಮಂಗಳೂರು, ಅ. 27: ಜನರಿಗೆ ಧರ್ಮದ ಬಗ್ಗೆ ಇರುವ ಅರಿವಿನ ಕೊರತೆಯೇ ಧರ್ಮಾಂಧತೆಗೆ ಕಾರಣವಾಗಿದೆ. ಆದ್ದರಿಂದ ಧರ್ಮವನ್ನು ಸಂಪೂರ್ಣವಾಗಿ ಅರ್ಥೈಸಿಕೊಳ್ಳುವುದು ಅಗತ್ಯವಾಗಿದೆ ಎಂದು ನಗರದ ಶ್ರೀನಿವಾಸ್ ಗ್ರೂಪ್ ಕಾಲೇಜಿನ ಮುಖ್ಯ ವೈದ್ಯಾಧಿಕಾರಿ ಹಾಗೂ ಪ್ರಾಚಾರ್ಯ ಡಾ.ಎಂ. ಅಣ್ಣಯ್ಯ ಕುಲಾಲ್ ಉಳ್ತೂರ್ ಹೇಳಿದ್ದಾರೆ.

ಅವರು ಯುನಿವೆಫ್ ಕರ್ನಾಟಕ ವತಿಯಿಂದ ನಗರದ ಶಾಂತಿ ನಿಲಯದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ‘ಧರ್ಮಾಚರಣೆಯಲ್ಲಿ ಧರ್ಮಾಂಧತೆ’ ವಿಷಯದ ಕುರಿತ ಚಾವಡಿ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಸ್ವಂತಕ್ಕಾಗಿ ಬದುಕುವುದು ಕರ್ಮವಾದರೆ, ಇತರರಿಗೆ ಬದುಕುವುದು ಧರ್ಮವಾಗಿದೆ. ತಮ್ಮ ತಮ್ಮ ಧರ್ಮವನ್ನು ಗೌರವಿಸುವುದರಿಂದ ಇತರ ಧರ್ಮಗಳ ಮೇಲೂ ಗೌರವ ಮತ್ತು ಪ್ರೀತಿಯಲ್ಲಿ ಬೆಳೆಸಿಕೊಳ್ಳಬೇಕು. ಇದರಿಂದ ಸೌಹಾರ್ದ ಸಮಾಜ ನಿರ್ಮಾಣ ಸಾಧ್ಯ ಎಂದರು.

ಸಾಮಾಜಿಕ ನೋವು-ನಲಿವುಗಳನ್ನು ನಾನು ಹತ್ತಿರದಿಂದ ಕಂಡವನು. ಜನರಿಗೆ ನೋವುಗಳಿಗೆ ಸ್ಪಂದಿಸುತ್ತಾ, ಅವರ ಕಷ್ಟಗಳಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆಯುವುದೇ ಧರ್ಮವಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಮಂಗಳೂರು ಎಂದರೆ ಹೊರಗಿನವರಿಗೆ ಭಯ ಉಂಟಾಗುತ್ತಿದೆ. ಪದೇ ಪದೇ ಸಂಭವಿಸುತ್ತಿರುವ ಕೋಮು ಸಂಘರ್ಷಗಳು ಮಂಗಳೂರಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ. ನಾನೋರ್ವ ಪ್ರಾಚಾರ್ಯ ಆಗಿರುವುದರಿಂದ ಹೊರಗಿನ ಜಿಲ್ಲೆಯ ಮಕ್ಕಳ ಹೆತ್ತವರು ‘‘ತನ್ನ ಮಕ್ಕಳನ್ನು ಮಂಗಳೂರಿನ ಶಾಲಾ ಕಾಲೇಜುಗಳಿಗೆ ಸೇರಿಸಬಹುದೇ’ಎಂದು ಭೀತಿಯಿ ಕೇಳುವ ಪರಿಸ್ಥಿತಿ ಉಂಟಾಗಿದೆ. ಇಂತಹ ವಾತಾವರಣ ಬದಲಾಗಬೇಕು ಎಂದರು.

ಜಾತಿಗಳ ನಡುವಿನ ಗೋಡೆ ಮುರಿಯೋಣ

ಎಲ್ಲ ಧರ್ಮ ಗ್ರಂಥಗಳೂ ಜನರ ಒಳಿತು ಸಹಿತ ಸಾಮಾಜಿ ಶಾಂತಿಯನ್ನೇ ಬಯುತ್ತದೆ. ಆದ್ದರಿಂದ ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತ ನಡುವಿನ ಗೋಡೆಯನ್ನು ಮುರಿದು, ಎಲ್ಲ ವರ್ಗದವರೂ ಐಕ್ಯತೆಯೊಂದಿಗೆ ಜೀವಿಸುವ ಸಮಾಜ ನಿರ್ಮಿಸೋಣ ಎಂದು ಜೆಪ್ಪು ಕರುಣಾಮಯ ಟ್ರಸ್ಟ್‌ನ ಅಧ್ಯಕ್ಷ ಎಲಿಯಾಸ್ ಕುವೆಲ್ಲೊ ಕರೆ ನೀಡಿದರು.

‘ವಾರ್ತಾಭಾರತಿ’ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ ಮಾತನಾಡಿ, ಸಾಮಾಜಿಕ ಸಮಸ್ಯೆಯನ್ನು ಗುರುತಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳುವುದು ಧರ್ಮವಾಗಿದೆ. ಸಂಕಷ್ಟದಲ್ಲಿರುವವನಿಗೆ ನೆರವು, ನೋವಿಗೆ ಸಂಪಾದನೆ, ದಾರಿದ್ರ, ಹಸಿವು ಹೋಗಲಾಡಿಸುವ ಜವಾಬ್ದಾರಿಯಾಗಬೇಕು. ಸಾಮಾಜಿಕ ಅಗತ್ಯಗಳನ್ನು ಗುರುತಿಸುವಲ್ಲಿ ನಮ್ಮನ್ನು ತಡೆಯುವುದಿದ್ದರೆ ಅದನ್ನು ಧರ್ಮ ಎಂದು ಸ್ವೀಕರಿಸಲು ಸಾಧ್ಯವಿಲ್ಲ ಎಂದರು.

ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ ಮಂಜುನಾಥ ಡಿ. ಮಾತನಾಡಿದರು. ಯುನಿವೆಫ್ ಕರ್ನಾಟಕದ ಅಧ್ಯಕ್ಷ ರಫೀವುದ್ದೀನ್ ಕುದ್ರೋಳಿ ಉಪಸ್ಥಿತರಿದ್ದರು.

ಯುನಿವೆಫ್ ಕರ್ನಾಟಕ ಇದರ ಪ್ರಧಾನ ಕಾರ್ಯದರ್ಶಿ ಯು.ಕೆ.ಖಾಲಿದ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾಧ್ಯಕ್ಷ ಸೈಫುದ್ದೀನ್ ಕುದ್ರೋಳಿ ಕುರ್‌ಆನ್ ವಾಚಿಸಿ ಕನ್ನಡಕ್ಕೆ ಅನುವಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X