Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರೊಹಿಂಗ್ಯಾ ಜಮೀನುಗಳ ಭತ್ತ ಕಟಾವು ಮಾಡಲು...

ರೊಹಿಂಗ್ಯಾ ಜಮೀನುಗಳ ಭತ್ತ ಕಟಾವು ಮಾಡಲು ಮ್ಯಾನ್ಮಾರ್ ಸರಕಾರ ನಿರ್ಧಾರ

ನಿರಾಶ್ರಿತರ ವಾಪಸಾತಿ ಬಗ್ಗೆ ಹೆಚ್ಚಿನ ಕಳವಳ

ವಾರ್ತಾಭಾರತಿವಾರ್ತಾಭಾರತಿ28 Oct 2017 9:53 PM IST
share
ರೊಹಿಂಗ್ಯಾ ಜಮೀನುಗಳ ಭತ್ತ ಕಟಾವು ಮಾಡಲು ಮ್ಯಾನ್ಮಾರ್ ಸರಕಾರ ನಿರ್ಧಾರ

ಯಾಂಗನ್ (ಮ್ಯಾನ್ಮಾರ್), ಅ. 28: ಮ್ಯಾನ್ಮಾರ್‌ನ ಹಿಂಸಾಗ್ರಸ್ತ ಉತ್ತರ ರಖೈನ್ ರಾಜ್ಯದ ಪರಿತ್ಯಕ್ತ ಕೃಷಿ ಭೂಮಿಯಲ್ಲಿ ಮ್ಯಾನ್ಮಾರ್ ಸರಕಾರ ಭತ್ತ ಕಟಾವು ಮಾಡಲಿದೆ ಎಂದು ಸರಕಾರಿ ಮಾಧ್ಯಮ ಶನಿವಾರ ವರದಿ ಮಾಡಿದೆ.

ಇದು ಸೇನಾ ದೌರ್ಜನ್ಯಕ್ಕೆ ಬೆದರಿ ಇಲ್ಲಿಂದ ಬಾಂಗ್ಲಾದೇಶಕ್ಕೆ ಪಲಾಯನಗೈದಿರುವ ಆರು ಲಕ್ಷಕ್ಕೂ ಅಧಿಕ ರೊಹಿಂಗ್ಯಾ ಮುಸ್ಲಿಮ್ ನಿರಾಶ್ರಿತರ ವಾಪಸಾತಿ ಸಾಧ್ಯತೆ ಬಗ್ಗೆ ಸಂಶಯಗಳನ್ನು ಹುಟ್ಟುಹಾಕಿದೆ.

ಆಗಸ್ಟ್ ಬಳಿಕ, ಗಡಿ ವಲಯವು ಅಲ್ಲಿನ ಮುಸ್ಲಿಮ್ ನಿವಾಸಿಗಳಿಂದ ಬಹುತೇಕ ಮುಕ್ತವಾಗಿದೆ. ಇಲ್ಲಿ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆ ಬರ್ಬರ ಕಾರ್ಯಾಚರಣೆ ನಡೆಸಿತ್ತು. ಸೈನಿಕರು ಎದುರಿಗೆ ಸಿಕ್ಕ ಪುರುಷರನ್ನು ಕೊಂದು ಬಿಸಾಡಿದ್ದಾರೆ ಹಾಗೂ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಬಾಂಗ್ಲಾದೇಶದಲ್ಲಿ ಆಶ್ರಯ ಪಡೆದಿರುವ ರೊಹಿಂಗ್ಯಾ ಮುಸ್ಲಿಮರು ಆರೋಪಿಸಿದ್ದಾರೆ.

ಮ್ಯಾನ್ಮಾರ್ ಸೇನೆಯು ರಖೈನ್ ರಾಜ್ಯದಲ್ಲಿ ಜನಾಂಗೀಯ ನಿರ್ಮೂಲನೆಯಲ್ಲಿ ತೊಡಗಿದೆ ಎಂದು ವಿಶ್ವಸಂಸ್ಥೆಯ ಆರೋಪಿಸಿರುವುದನ್ನು ಸ್ಮರಿಸಬಹುದಾಗಿದೆ.

ಜಾಗತಿಕ ಒತ್ತಡಕ್ಕೆ ಮಣಿದ ಮ್ಯಾನ್ಮಾರ್, ರಖೈನ್‌ನಲ್ಲಿನ ತಮ್ಮ ವಾಸ್ತವ್ಯವನ್ನು ಸಾಬೀತುಪಡಿಸಬಲ್ಲ ನಿರಾಶ್ರಿತರನ್ನು ವಾಪಸ್ ಕರೆಸಿಕೊಳ್ಳಲು ಒಪ್ಪಿದೆ.

ಆದರೆ, ನಿರಾಶ್ರಿತರನ್ನು ವಾಪಸ್ ಕರೆಸಿಕೊಳ್ಳುವ ಯೋಜನೆಯ ವಿವರಗಳು ಅಸ್ಪಷ್ಟವಾಗಿವೆ.

ಹಿಂಸಾಚಾರದಿಂದ ಅತಿ ಹೆಚ್ಚಿನ ಹಾನಿಗೆ ಒಳಗಾಗಿರುವ ರೊಹಿಂಗ್ಯಾ ಬಾಹುಳ್ಯದ ಪ್ರದೇಶ ಮಾಂಗ್‌ಡಾವ್‌ನಲ್ಲಿ 71,000 ಎಕರೆ ಪ್ರದೇಶದಲ್ಲಿ ಭತ್ತ ಕಟಾವು ಮಾಡಲು ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸರಕಾರಿ ಮಾಧ್ಯಮ ಶನಿವಾರ ವರದಿ ಮಾಡಿದೆ.

ಕೃಷಿ ಕೆಲಸಕ್ಕಾಗಿ ಕಾರ್ಮಿಕರನ್ನು ದೇಶದ ಇತರ ಭಾಗಗಳಿಂದ ಕರೆದುಕೊಂಡು ಬರಲಾಗುವುದು ಎಂದು ‘ಗ್ಲೋಬಲ್ ನ್ಯೂ ಲೈಟ್ ಆಫ್ ಮ್ಯಾನ್ಮಾರ್’ನ ವರದಿಯೊಂದು ತಿಳಿಸಿದೆ.

‘‘ಸದ್ಯಕ್ಕೆ, ಭತ್ತ ಕಟಾವು ಮಾಡಿ, ಒಣಗಿಸಿ, ದಾಸ್ತಾನಿಡುವ ಕೆಲಸವನ್ನು ನಮಗೆ ಒದಗಿಸಲಾಗಿದೆ’’ ಎಂದು ಮಾಂಗ್‌ಡಾವ್ ಪಟ್ಟಣದ ಕೃಷಿ ಇಲಾಖೆಯ ಮುಖ್ಯಸ್ಥ ತೆನ್ ವಾಯ್ ತಿಳಿಸಿದರು.

ರೊಹಿಂಗ್ಯಾ ಶಿಬಿರಗಳಲ್ಲಿ ಜನನ ನಿಯಂತ್ರಣ ಜಾರಿಗೆ ಮುಂದಾದ ಬಾಂಗ್ಲಾ

ತನ್ನಲ್ಲಿರುವ ಕಿಕ್ಕಿರಿದ ರೊಹಿಂಗ್ಯಾ ನಿರಾಶ್ರಿತ ಶಿಬಿರಗಳಲ್ಲಿ ಸ್ವಯಂಪ್ರೇರಿತ ಜನನ ನಿಯಂತ್ರಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಬಾಂಗ್ಲಾದೇಶ ಚಿಂತಿಸುತ್ತಿದೆ.

ಆಗಸ್ಟ್ 25ರಂದು ರೊಹಿಂಗ್ಯಾ ಬಂಡುಕೋರರು ಸೇನೆ ಮತ್ತು ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ ಬಳಿಕ, ಸೇನೆ ನಡೆಸಿದ ಪ್ರತೀಕಾರಾತ್ಮಕ ಹಿಂಸೆಗೆ ಬೆದರಿ ಮ್ಯಾನ್ಮಾರ್‌ನ ರಖೈನ್ ರಾಜ್ಯದಿಂದ 6 ಲಕ್ಷಕ್ಕೂ ಅಧಿಕ ರೊಹಿಂಗ್ಯಾ ನಿರಾಶ್ರಿತರು ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ.

ಶಿಬಿರಗಳಲ್ಲಿ ಸ್ಥಳಾವಕಾಶಕ್ಕಾಗಿ ನಿರಾಶ್ರಿತರು ಪರದಾಡುತ್ತಿದ್ದಾರೆ. ಅವರಿಗೆ ಸೀಮಿತ ಆಹಾರ, ಶೌಚ ಮತ್ತು ಆರೋಗ್ಯ ಸೌಲಭ್ಯಗಳು ಲಭಿಸುತ್ತಿವೆ.

ಸರಿಯಾದ ಕುಟುಂಬ ಯೋಜನೆಯಿಲ್ಲದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂಬ ಭೀತಿಯನ್ನು ಸ್ಥಳೀಯ ಅಧಿಕಾರಿಗಳು ಹೊಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X