Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳ...

ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳ ದಾರಿಯಲ್ಲಿ ಬದುಕು ರೂಪಿಸಿಕೊಳ್ಳಬೇಕು: ಆತ್ಮಜ್ಞಾನಂದಜೀ ಮಹಾರಾಜ್

ವಾರ್ತಾಭಾರತಿವಾರ್ತಾಭಾರತಿ28 Oct 2017 10:40 PM IST
share
ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳ ದಾರಿಯಲ್ಲಿ ಬದುಕು ರೂಪಿಸಿಕೊಳ್ಳಬೇಕು: ಆತ್ಮಜ್ಞಾನಂದಜೀ ಮಹಾರಾಜ್

ದಾವಣಗೆರೆ, ಅ.28: ವಿದೇಶದಿಂದ ಭಾರತಕ್ಕೆ ಬಂದು ಭಾರತಕ್ಕಾಗಿ ದುಡಿದ ಏಕೈಕ ಮಹಿಳೆ ಸೋದರಿ ನಿವೇದಿತಾ ಎಂದು ಮೈಸೂರಿನ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಆತ್ಮಜ್ಞಾನಂದಜೀ ಮಹಾರಾಜ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಶ್ರೀಗುರು ಬಕ್ಕೇಶ್ವರ ಕಲ್ಯಾಣ ಮಂಟಪದಲ್ಲಿ ಸೋದರಿ ನಿವೇದಿತಾರ 150ನೆ ಜನ್ಮ ವರ್ಷಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸೋದರಿ ನಿವೇದಿತಾ ವಿದೇಶದಿಂದ ಭಾರತಕ್ಕೆ ಬಂದು ಭಾರತದ ನೆಲ, ಜಲ, ಸಂಸ್ಕೃತಿಯನ್ನೇ ಮೈಗೂಡಿಸಿಕೊಂಡು ಅಪ್ಪಟ ಭಾರತೀಯರಿಗಾಗಿ  ದೇಶಸೇವೆ ಮಾಡಿದವರು. ಶಾಲೆಯನ್ನೇ ಕಾಣದ ಅದೆಷ್ಟೋ ಸ್ತ್ರೀ ಸಂಕುಲಕ್ಕೆ ಶಾಲೆ ಆರಂಭಿಸುವ ಮೂಲಕ ಅಕ್ಷರಜ್ಞಾನ ಬಿತ್ತಿದ್ದರು. ಎಲ್ಲರಿಗೂ ಸ್ವತಂತ್ರವಾಗಿ ಆಲೋಚಿಸುವ ಶಕ್ತಿ ತುಂಬಿದವರು ನಿವೇದಿತಾ ಎಂದ ಅವರು, ಭಾರತೀಯರಲ್ಲಿ ಸ್ವಾಭಿಮಾನ, ಆತ್ಮಸ್ಸೈರ್ಯ, ಭಾಷಾಭಿಮಾನ ಮೂಡಿಸುವ ಜೊತೆಗೆ ತನ್ನನ್ನು ತಾನು ಗುರುತಿಸಿಕೊಳ್ಳುವ, ಅಸ್ತಿತ್ವ ಕಂಡುಕೊಳ್ಳುವ ಬಗೆ ಮೂಡಿಸಿದರು ಎಂದು ಹೇಳಿದರು.

ವಿದ್ಯಾರ್ಥಿಗಳು ಆದರ್ಶನೀಯ ವ್ಯಕ್ತಿಗಳು ಹಾಕಿಕೊಟ್ಟ ದಾರಿಯಲ್ಲಿ ಬದುಕು ರೂಪಿಸಿಕೊಳ್ಳಬೇಕು ಎಂದು ಇದೇ ವೇಳೆ ಕರೆ ನೀಡಿದರು.

ಹರಿಹರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಶಾದದೇಶಾನಂದರು ಮಾತನಾಡಿ, ಆತ್ಮವಿಶ್ವಾಸ, ತಾಳ್ಮೆ, ಸಹನೆ, ನಿಸ್ವಾರ್ಥತೆ, ಛಲವಿಲ್ಲದಿದ್ದರೆ ಎಂದಿಗೂ ಸಾಧನೆ ಅಸಾಧ್ಯ. ಇಂದಿನ ಮಕ್ಕಳಲ್ಲಿ ಆತ್ಮವಿಶ್ವಾಸವೇ ಇಲ್ಲದಂತಾಗಿದೆ. ತಮ್ಮಲ್ಲಿರುವ ಶಕ್ತಿ, ಪ್ರತಿಭೆ ಬಗ್ಗೆ ತಮಗೆ ಗೊತ್ತಿರುವುದಿಲ್ಲ. ಇಂತಹ ಸುಪ್ತ ಪ್ರತಿಭೆಯನ್ನು ಗುರುತಿಸಿ, ಹೊರಗೆಡವಿ ಭಾರತೀಯರಿಗೆ ಹೊಸ ಜೀವನ ಕಲ್ಪಿಸಿಕೊಟ್ಟವರು ನಿವೇದಿತಾ. 40ನೆ ವರ್ಷಕ್ಕೆ ಭಾರತಕ್ಕೆ ಬಂದು ಕೇವಲ 8 ವರ್ಷಗಳಲ್ಲಿ ಆಕೆ ಮಾಡಿದ ಸೇವೆ ಅಪಾರ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಹಲಸೂರಿನ ರಾಮಕೃಷ್ಣ ಮಠದ ತ್ಯಾಗೀಶ್ವರಾನಂದಜೀ ಪ್ರಾಸ್ತಾವಿಕ ಮಾತನಾಡಿದರು. ದಾವಣಗೆರೆ ಆಶ್ರಮದ ಅಧ್ಯಕ್ಷ ಆರ್.ಆರ್. ರಮೇಶ್ ಬಾಬು ಅಧ್ಯಕ್ಷತೆ ವಹಿಸಿದ್ದರು.

ಇದಕ್ಕೂ ಮೊದಲು ಸೋದರಿ ನಿವೇದಿತಾರ 150ನೆ ಜನ್ಮದಿನದಂಗವಾಗಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯು ವಿದ್ಯಾನಗರ ಸರ್ಕಲ್, ಸಂಗೊಳ್ಳಿ ರಾಯಣ್ಣ ಸರ್ಕಲ್, ದುರ್ಗಾಂಬಿಕಾ ದೇವಸ್ಥಾನ, ಜಯದೇವ ವೃತ್ತದಿಂದ ಏಕಕಾಲದಲ್ಲಿ ಆರಂಭಗೊಂಡು ಮೆರವಣಿಗೆ ಮೂಲಕ ಬಕ್ಕೇಶ್ವರ ಕಲ್ಯಾಣ ಮಂಟಪಕ್ಕೆ ತಲುಪಿತು.

ಹೇಮಂತಕುಮಾರ್, ಪಲ್ಲಾಗಟ್ಟೆ ರಾಜಶೇಖರ್, ಕು. ಪೂಜಾ ಹಾಗೂ ಕೀರ್ತನಾ ಮತ್ತಿತರರಿದ್ದರು. ಆರ್. ವಿರೇಶ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X