Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಳೆ ಕಾನ್ಪುರದಲ್ಲಿ ಅಂತಿಮ ಏಕದಿನ ಪಂದ್ಯ

ನಾಳೆ ಕಾನ್ಪುರದಲ್ಲಿ ಅಂತಿಮ ಏಕದಿನ ಪಂದ್ಯ

ಸರಣಿ ಗೆಲುವಿಗೆ ಭಾರತ - ಕಿವೀಸ್‌ಹೋರಾಟ

ವಾರ್ತಾಭಾರತಿವಾರ್ತಾಭಾರತಿ28 Oct 2017 11:54 PM IST
share

ಕಾನ್ಪುರ, ಅ.28: ಭಾರತ ಮತ್ತು ನ್ಯೂಝಿಲೆಂಡ್ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಅಂತಾರಾಷ್ಟ್ರಿಯ ಸರಣಿಯ ಮೂರನೆ ಮತ್ತು ಅಂತಿಮ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ರವಿವಾರ ನಡೆಯಲಿದೆ. ಉಭಯ ತಂಡಗಳು ಸರಣಿಯಲ್ಲಿ ತಲಾ ಒಂದು ಪಂದ್ಯಗಳಲ್ಲಿ ಜಯ ಗಳಿಸಿ 1-1 ಸಮಬಲ ಸಾಧಿಸಿದ್ದು, ಸರಣಿ ವಶಪಡಿಸಿಕೊಳ್ಳಲು ಅಂತಿಮ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿವೆೆ. ಮೊದಲ ಏಕದಿನ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಭಾರತ ಎರಡನೆ ಏಕದಿನ ಪಂದ್ಯದಲ್ಲಿ ಜಯ ಗಳಿಸುವ ಮೂಲಕ ನ್ಯೂಝಿಲೆಂಡ್‌ಗೆ ತಿರುಗೇಟು ನೀಡಿತ್ತು.

ಉಭಯ ತಂಡಗಳು ಗುರುವಾರ ಆಗಮಿಸಿ ತಂಪಾದ ವಾತಾವರಣದಲ್ಲಿ ಪಂದ್ಯಕ್ಕೆ ಅಭ್ಯಾಸ ನಡೆಸಿದೆ. ಪುಣೆಯಲ್ಲಿ ಭಾರತದ ವೇಗಿಗಳಾದ ಭುವನೇಶ್ವರ ಕುಮಾರ್ (45ಕ್ಕೆ 3)ಮತ್ತು ಜಸ್‌ಪ್ರೀತ್ ಬುಮ್ರಾ (38ಕ್ಕೆ 2)ಅವರು ಕಿವೀಸ್‌ನ್ನು ಕಡಿಮೆ ಮೊತ್ತಕ್ಕೆ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

 ಮುಂಬೈಯಲ್ಲಿ ಮೊದಲ ಪಂದ್ಯದಲ್ಲಿ ಕೈ ಸುಟ್ಟುಕೊಂಡಿದ್ದ ಭಾರತದ ಸ್ಪಿನ್ನರ್‌ಗಳು ಎರಡನೆ ಪಂದ್ಯದಲ್ಲಿ ಯಶಸ್ಸು ಗಳಿಸಿದ್ದರು. ಯಜುವೇಂದ್ರ ಚಹಾಲ್ ಮೊದಲ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದ್ದರೂ, ಎರಡನೆ ಪಂದ್ಯದಲ್ಲಿ 36ಕ್ಕೆ 2 ವಿಕೆಟ್ ಉಡಾಯಿಸಿದ್ದರು. ಕುಲ್‌ದೀಪ್ ಯಾದವ್ ಬದಲಿಗೆ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಅಕ್ಷರ್ ಪಟೇಲ್ ಅವರು ವಿಕೆಟ್ ಕೀಪರ್ ಲಥಾಮ್‌ರನ್ನು ಪೆವಿಲಿಯನ್‌ಗೆ ಅಟ್ಟಿದ್ದರು. ಪಾರ್ಟ್ ಟೈಮ್ ಬೌಲರ್ ಕೇದಾರ್ ಜಾಧವ್ 8 ಓವರ್‌ಗಳ ಬೌಲಿಂಗ್ ನಡೆಸಿ ಕೇವಲ 31 ರನ್ ನೀಡಿದ್ದರು. ಆದರೆ ಅವರಿಗೆ ವಿಕೆಟ್ ಸಿಗಲಿಲ್ಲ. ತವರಿನಲ್ಲಿ ಯಾದವ್‌ಗೆ ಅಂತಿಮ ಪಂದ್ಯದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ. ಭಾರತದ ಪರ ಬ್ಯಾಟಿಂಗ್‌ನಲ್ಲಿ ದಿನೇಶ್ ಕಾರ್ತಿಕ್ ನಂ.4 ಸರದಿಯಲ್ಲಿ ಬ್ಯಾಟಿಂಗ್ ನಡೆಸಿ ಔಟಾಗದೆ 64 ರನ್ ಗಳಿಸಿದ್ದರು. 2015ರ ವಿಶ್ವಕಪ್ ಬಳಿಕ ನಂ.4 ಕ್ರಮಾಂಕದಲ್ಲಿ 11 ಆಟಗಾರರನ್ನು ಆಡಿಸಿದೆ. ಆದರೆ ಯಾರಿಗೂ ಈ ತನಕ ಈ ಸ್ಥಾನ ಖಾಯಂ ಆಗಿಲ್ಲ. ಕಾರ್ತಿಕ್ ಈ ಸ್ಥಾನವನ್ನು ಭದ್ರ ಪಡಿಸುವ ಸಾಧ್ಯತೆ ಇದೆ. ಮೊದಲ ಪಂದ್ಯದಲ್ಲಿ ಅವರು ನಂ.5 ಸರದಿಯಲ್ಲಿ ಆಡಿದ್ದರು. ಆದರೆ ಅವರಿಗೆ ನಂ.4 ಆಡಲು ಹೆಚ್ಚು ಸೂಕ್ತವಾಗಿದೆ.

  ಶಿಖರ್ ಧವನ್ ನಾಲ್ಕು ಏಕದಿನ ಪಂದ್ಯಗಳ ಇನಿಂಗ್ಸ್‌ಗಳಲ್ಲಿ ವೈಫಲ್ಯದ ಬಳಿಕ ಐದನೆ ಇನಿಂಗ್ಸ್‌ನಲ್ಲಿ 50ಕ್ಕಿಂತ ಹೆಚ್ಚು ರನ್ ಗಳಿಸಿ ಮತ್ತೆ ಫಾರ್ಮ್‌ಗೆ ಮರಳಿದ್ದಾರೆ. ಅವರು 68 ರನ್ ಗಳಿಸಿದ್ದಾರೆ. ಮೊದಲ ಪಂದ್ಯದಲ್ಲಿ 9ರನ್ ಗಳಿಸಿ ಔಟಾಗಿದ್ದರು. ಅಂತಿಮ ಪಂದ್ಯದಲ್ಲಿ ಧವನ್ ಅವರಿಂದ ಉತ್ತಮ ಕೊಡುಗೆ ನಿರೀಕ್ಷಿಸಲಾಗಿದೆ. ಧವನ್ ಅವರೊಂದಿಗೆ ಇನಿಂಗ್ಸ್ ಆರಂಭಿಸಿದ್ದ ರೋಹಿತ್ ಶರ್ಮ ಎರಡು ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಅವರು ಮೊದಲ ಪಂದ್ಯದಲ್ಲಿ 20 ರನ್ ಮತ್ತು ಎರಡನೆ ಪಂದ್ಯದಲ್ಲಿ 7 ರನ್ ಗಳಿಸಿದ್ದರು. ನ್ಯೂಝಿಲೆಂಡ್ ತಂಡ ಭಾರತದ ನೆಲದಲ್ಲಿ ಸರಣಿ ಗೆಲುವಿನ ಇತಿಹಾಸ ಬರೆಯಲು ಹೋರಾಟ ನಡೆಸಲಿದೆ. ರಾಸ್ ಟೇಲರ್ ಮತ್ತು ಲಥಾಮ್ ಮೊದಲ ಪಂದ್ಯದಲ್ಲಿ 200 ರನ್‌ಗಳ ಜೊತೆಯಾಟ ನೀಡಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಈ ಜೋಡಿಗೆ ತಳವೂರಲು ಅವಕಾಶ ನೀಡಿದರೆ ಭಾರತದ ಸರಣಿ ಗೆಲುವಿನ ಕನಸಿಗೆ ಅಡ್ಡಿಯಾಗುವ ಸಾಧ್ಯತೆ ಇದೆ.

ಪಂದ್ಯದ ಸಮಯ

ಮಧ್ಯಾಹ್ನ 1:30 ಗಂಟೆಗೆ

           

share
ವಾರ್ತಾಭಾರತಿ
ವಾರ್ತಾಭಾರತಿ
Next Story
X