Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್‌ನಲ್ಲಿ ಜಾತಿ ಸಮ್ಮಿಶ್ರಣ...

ಗುಜರಾತ್‌ನಲ್ಲಿ ಜಾತಿ ಸಮ್ಮಿಶ್ರಣ ಪ್ರಯತ್ನ ತಿರುಗುಬಾಣವಾದೀತು: ಕಾಂಗ್ರೆಸ್‌ಗೆ ಬಿಜೆಪಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ29 Oct 2017 6:39 PM IST
share
ಗುಜರಾತ್‌ನಲ್ಲಿ ಜಾತಿ ಸಮ್ಮಿಶ್ರಣ ಪ್ರಯತ್ನ ತಿರುಗುಬಾಣವಾದೀತು: ಕಾಂಗ್ರೆಸ್‌ಗೆ ಬಿಜೆಪಿ ಎಚ್ಚರಿಕೆ

ಹೊಸದಿಲ್ಲಿ, ಅ.29: ಗುಜರಾತ್‌ನಲ್ಲಿ ಜಾತಿ ಸಮ್ಮಿಶ್ರಣದ ಮೂಲಕ ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಬಹುದು ಎಂದು ಕಾಂಗ್ರೆಸ್ ಲೆಕ್ಕಾಚಾರ ಹಾಕಿಕೊಂಡಿದೆ. ಆದರೆ ಈ ಪ್ರಯತ್ನ ಕಾಂಗ್ರೆಸ್‌ಗೆ ತಿರುಗುಬಾಣವಾದೀತು ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

ಗುಜರಾತ್‌ನಲ್ಲಿ ಒಬಿಸಿ (ಇತರ ಹಿಂದುಳಿದ ಜಾತಿ) ಮತ್ತು ಪಾಟಿದಾರ್(ಪಟೇಲ್ ಸಮುದಾಯ) - ಈ ಎರಡು ಸಮುದಾಯದ ಮತದಾರರು ರಾಜ್ಯದಲ್ಲಿರುವ ಒಟ್ಟು ಮತದಾರರ ಸಂಖ್ಯೆಯ ಅರ್ಧಾಂಶಕ್ಕೂ ಹೆಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಎರಡೂ ಸಮುದಾಯದ ಮುಖಂಡರನ್ನು ತನ್ನ ತೆಕ್ಕೆಗೆ ಸೆಳೆದುಕೊಂಡು ಮತದಾರರನ್ನು ಓಲೈಸಲು ಕಾಂಗ್ರೆಸ್ ಮುಂದಾಗಿದೆ. ಆದರೆ ಈ ಎರಡೂ ಸಮುದಾಯವೂ ತನ್ನದೇ ಆದ ಹಿತಾಸಕ್ತಿ ಹಾಗೂ ಮಹಾತ್ವಾಕಾಂಕ್ಷೆಯನ್ನು ಹೊಂದಿರುವ ಕಾರಣ ಈ ಪ್ರಯತ್ನ ವಿರೋಧಾಭಾಸವಾಗಿದೆ ಎಂದು ಬಿಜೆಪಿ ಮುಖಂಡರು ಟೀಕಿಸಿದ್ದಾರೆ.

ಪಟೇಲ್ ಸಮುದಾಯದವರಿಗೆ ಮೀಸಲಾತಿ ವಿಷಯದ ಕುರಿತು ತನ್ನ ಬದ್ಧತೆಯನ್ನು ನವೆಂಬರ್ 3ರ ಒಳಗೆ ಘೋಷಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಟೇಲ್ ಮೀಸಲಾತಿ ಚಳವಳಿಯ ಮುಖಂಡ ಹಾರ್ದಿಕ್ ಪಟೇಲ್ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿರುವುದು ಈ ವಿರೋದಾಭಾಸದ ಸ್ಪಷ್ಟ ಉದಾಹರಣೆಯಾಗಿದೆ ಎಂದು ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ. ಒಬಿಸಿ ಮೀಸಲಾತಿ ಚಳವಳಿಯ ಮುಖಂಡ ಅಲ್ಪೇಶ್ ಠಾಕೂರ್‌ರನ್ನು ಕಾಂಗ್ರೆಸ್ ಇತ್ತೀಚೆಗೆ ಪಕ್ಷಕ್ಕೆ ಸೇರಿಸಿಕೊಂಡಿದೆ. ಆದರೆ ಹಾಲಿ ಒಬಿಸಿ ಕೋಟಾದಲ್ಲಿ ಪಟೇಲ್ ಸಮುದಾಯವನ್ನು ಸೇರಿಸಿಕೊಳ್ಳಬೇಕು ಎಂಬ ಬೇಡಿಕೆಗೆ ಅಲ್ಪೇಶ್ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ಕಾಂಗ್ರೆಸ್‌ಗೆ ಉಭಯಸಂಕಟವಾಗಿದೆ ಎಂದು ಬಿಜೆಪಿ ಹೇಳುತ್ತಿದೆ.

 ಸಂವಿಧಾನಾತ್ಮಕವಾಗಿ ಮೀಸಲಾತಿ ಕೋಟಾವನ್ನು ಶೇ.50ಕ್ಕೆ ನಿಗದಿಗೊಳಿಸಿರುವ ಕಾರಣ ಪಟೇಲ್ ಸಮುದಾಯಕ್ಕೆ ಪ್ರತ್ಯೇಕ ಮೀಸಲಾತಿ ಖಾತರಿಪಡಿಸುವುದು ಯಾವುದೇ ಪಕ್ಷಕ್ಕೆ ಅಸಾಧ್ಯವಾದ ಮಾತಾಗಿದೆ. ಈ ಸಮುದಾಯವನ್ನು ಒಬಿಸಿ ಗುಂಪಿಗೆ ಸೇರಿಸುವ ಪ್ರಯತ್ನವನ್ನು ನಡೆಸುವ ಪಕ್ಷ, ರಾಜ್ಯದ ಮತದಾರರಲ್ಲಿ ಶೇ.40ರಷ್ಟು ಪ್ರಾತಿನಿಧ್ಯ ಹೊಂದಿರುವ ಹಿಂದುಳಿದ ಜಾತಿಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ, ಹಾರ್ದಿಕ್ ಬೇಡಿಕೆಯನ್ನು ಈಡೇರಿಸುವುದು ಸುಲಭಸಾಧ್ಯವಲ್ಲ ಎನ್ನಲಾಗಿದೆ.

1995ರಿಂದಲೂ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿನ ಸಿಹಿಯನ್ನೇ ಉಣ್ಣುತ್ತಿರುವ ಬಿಜೆಪಿ, ಈ ಬಾರಿ ಹಿಂದುತ್ವ ಹಾಗೂ ವಿಕಾಸ(ಅಭಿವೃದ್ಧಿ)- ಈ ಎರಡು ಅಜೆಂಡಾದೊಂದಿಗೆ ಮತದಾರರ ಓಲೈಕೆಗೆ ಮುಂದಾಗಿದೆ. ಪಟೇಲ್ ಸಮುದಾಯದ ಒಂದು ವರ್ಗ ಬಿಜೆಪಿಯನ್ನು ವಿರೋಧಿಸುತ್ತಿದ್ದರೂ , ಈ ಸಮುದಾಯದ ಬೆಂಬಲವನ್ನು ಬಿಜೆಪಿ ಪ್ರಮುಖವಾಗಿ ನೆಚ್ಚಿಕೊಂಡಿದೆ. ಪಟೇಲ್ ಸಮುದಾಯದ ಯುವಮುಖಂಡ ಹಾರ್ದಿಕ್ ಪಟೇಲ್ ನಿರೀಕ್ಷಿಸಿದಷ್ಟು ಮತಗಳನ್ನು ಬಿಜೆಪಿಯಿಂದ ಸೆಳೆದುಕೊಳ್ಳಲು ಶಕ್ತರಾಗಲಿಕ್ಕಿಲ್ಲ ಎಂದು ಬಿಜೆಪಿ ಭಾವಿಸಿದೆ. ಕಳೆದ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ, ಪಟೇಲ್ ಸಮುದಾಯದ ಪ್ರಭಾವೀ ಹಿರಿಯ ಮುಖಂಡ ಕೇಶುಭಾಯ್ ಪಟೇಲ್ , ಗುಜರಾತ್ ಪರಿವರ್ತನ್ ಪಾರ್ಟಿ(ಜಿಪಿಪಿ) ಎಂಬ ಪಕ್ಷ ಕಟ್ಟಿ ಬಿಜೆಪಿ ವಿರುದ್ಧ ಸೆಣಸಿದರೂ, ಅವರ ಪಕ್ಷ ಕೇವಲ 2 ಸ್ಥಾನ ಗೆಲ್ಲಲು ಶಕ್ತವಾಗಿತ್ತು. ಬಳಿಕ ಜಿಪಿಪಿ ಬಿಜೆಪಿ ಜೊತೆ ವಿಲೀನವಾಗಿತ್ತು .

 ಆದರೆ , ಹಾರ್ದಿಕ್ ಪಟೇಲ್ ಮತ್ತು ಕೇಶುಭಾಯ್ ಪಟೇಲ್ ಚಿಂತನೆಯಲ್ಲಿ ಸಾಕಷ್ಟು ವ್ಯತ್ಯಾಸವಿದೆ. ಕೇಶುಭಾಯ್ ಪಟೇಲ್ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಟೀಕಾಸ್ತ್ರವನ್ನು ಪ್ರಚಾರ ಕಾರ್ಯದಲ್ಲಿ ಪ್ರಮುಖವಾಗಿ ಬಳಸಿದ್ದರು. ಆದರೆ ಹಾರ್ದಿಕ್, ಪಟೇಲ್ ಸಮುದಾಯದ ಮೀಸಲಾತಿ ವಿಷಯದಲ್ಲಿ ಬಿಜೆಪಿಯ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ. ಇದು ಮತದಾರರ ಮೇಲೆ ಹೆಚ್ಚಿನ ಪ್ರಭಾವ ಬೀರಬಹುದು ಎಂದು ನಿರೀಕ್ಷಿಸಲಾಗಿದೆ.

 2012ರ ಚುನಾವಣೆಯಲ್ಲಿ ಬಿಜೆಪಿ 116 ಸ್ಥಾನ ಗಳಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ 150 ಸ್ಥಾನ ಗಳಿಸುವ ಗುರಿಯನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪಕ್ಷದ ಮುಖಂಡರಿಗೆ ನೀಡಿದ್ದಾರೆ. ಪ್ರಧಾನಿ ಮೋದಿಯ ವರ್ಚಸ್ಸು, ಸಂಘಟನಾ ಶಕ್ತಿ ಈ ಬಾರಿಯೂ ಪಕ್ಷದ ಗೆಲುವಿಗೆ ಪೂರಕವಾಗಲಿದೆ ಎಂದು ಬಿಜೆಪಿ ಮುಖಂಡರು ವಿಶ್ವಾಸದಲ್ಲಿದ್ದಾರೆ. ಕಾಂಗ್ರೆಸ್ ಮುಖಂಡ ಶಂಕರ್‌ಸಿಂಗ್ ವೇಲಾ ಪಕ್ಷದಿಂದ ಹೊರಬಂದು ತನ್ನದೇ ಪಕ್ಷ ಸ್ಥಾಪಿಸಿರುವುದು ಕೂಡಾ ಬಿಜೆಪಿ ಗೆಲುವನ್ನು ಸುಗಮಗೊಳಿಸಲಿದೆ ಎಂಬ ಲೆಕ್ಕಾಚಾರ ಬಿಜೆಪಿಯದ್ದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X