Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೇಜಾವರ ಶ್ರೀ ಮಡೆಸ್ನಾನದಂತಹ ಅವೈಜ್ಞಾನಿಕ...

ಪೇಜಾವರ ಶ್ರೀ ಮಡೆಸ್ನಾನದಂತಹ ಅವೈಜ್ಞಾನಿಕ ಪದ್ಧತಿ ನಿಲ್ಲಿಸಲಿ

ವಿರಕ್ತಮಠದ ಗುರುಬಸವ ಸ್ವಾಮೀಜಿ ಸವಾಲು

ವಾರ್ತಾಭಾರತಿವಾರ್ತಾಭಾರತಿ29 Oct 2017 7:10 PM IST
share
ಪೇಜಾವರ ಶ್ರೀ ಮಡೆಸ್ನಾನದಂತಹ ಅವೈಜ್ಞಾನಿಕ ಪದ್ಧತಿ ನಿಲ್ಲಿಸಲಿ

ಚಿಕ್ಕಮಗಳೂರು, ಅ.29: ‘ಹಿಂದೂ ಧರ್ಮದಲ್ಲಿರುವ ಮಡೆಸ್ನಾನದಂತಹ ಅವೈಜ್ಞಾನಿಕ ಪದ್ಧತಿಗಳನ್ನು ಪೇಜಾವರ ಶ್ರೀ ಮೊದಲು ನಿಲ್ಲಿಸಬೇಕು. ಅಲ್ಲಿಯವರೆಗೂ ಲಿಂಗಾಯತ ಧರ್ಮದ ಬಗ್ಗೆ ಅವರು ಮಾತನಾಡಬಾರದು’ ಎಂದು ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಸವಾಲು ಹಾಕಿದ್ದಾರೆ.

ನಗರದ ವಿರಕ್ತಮಠ ಬಸವಮಂದಿರದಲ್ಲಿ ರವಿವಾರ ನಡೆದ ಸ್ವತಂತ್ರ ಲಿಂಗಾಯತ ಧರ್ಮ ವಿಷಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಲಿಂಗಾಯತ ಧರ್ಮದ ಬಗ್ಗೆ ಮಾತನಾಡುವುದಕ್ಕೆ ಪೇಜಾವರ ಶ್ರೀಗೆ ಯಾವುದೇ ನೈತಿಕತೆ ಇಲ್ಲ. ಮೊದಲು ಅವರ ಧರ್ಮವನ್ನು ಅವರು ಸರಿಪಡಿಸಲಿ ಎಂದು ಹೇಳಿದರು.

ಹಿಂದೂ ಧರ್ಮ ಧರ್ಮವಲ್ಲ ಅದೊಂದು ಸಂಸ್ಕೃತಿ. ವೀರಶೈವ ಧರ್ಮ ಹಿಂದೂ ಧರ್ಮವನ್ನು ಅವಲಂಬಿತವಾಗಿ ವೈದಿಕ ಮಾರ್ಗ ಮತ್ತು ಸಂಸ್ಕೃತ ವನ್ನು ಅನುಸರಿಸುತ್ತಿರುವುದರಿಂದ ಲಿಂಗಾಯತರು ಆ ಎರಡೂ ಧರ್ಮಗಳಿಗೆ ಸೇರಿದವರಲ್ಲ. ಈ ಹಿನ್ನೆಲೆಯಲ್ಲಿ ಹಿಂದೂಗಳೇ ಬೇರೆ, ವೀರಶೈವರೇ ಬೇರೆ,  ಹಾಗೂ ಲಿಂಗಾಯಿತರೇ ಬೇರೆ ಎಂದು ತಿಳಿಸಿದರು.

ಭಕ್ತಿ ಭಂಡಾರಿ ಬಸವಣ್ಣ ಅವರಿಂದ ಸ್ವತಂತ್ರ ಧರ್ಮವಾಗಿಯೇ ಸ್ಥಾಪನೆಯಾಗಿರುವಂತಹ ಲಿಂಗಾಯತ ಧರ್ಮದ ಅನುಯಾಯಿಗಳು ನಾವು ಎಂಬುದನ್ನು ಲಿಂಗಾಯತರು ಅರ್ಥ ಮಾಡಿಕೊಳ್ಳಬೇಕು. ದ್ವಂದ್ವವನ್ನು ಬಿಟ್ಟು ಆ ಧರ್ಮದ ಅಡಿಯಲ್ಲೇ ಸಾಗಬೇಕು ಎಂದು ಕರೆ ನೀಡಿದರು.

ಕರಡಿಗವಿ ಮಠದ ಶಂಕರಾನಂದ ಸ್ವಾಮೀಜಿ ಮಾತನಾಡಿ, ಲಿಂಗಾಯತರು ಬಸವಧರ್ಮ, ಬಸವ ತತ್ವದವರು. ಅವರಿಗೆ ಯಾವುದೇ ಧರ್ಮದ ಹಂಗಿಲ್ಲ. ಲಿಂಗಾಯತರು ಬಸವ ಧರ್ಮದಡಿಯೇ ಸಾಗಬೇಕು. ಜೈನ, ಬೌದ್ದ, ಸಿಖ್, ಕ್ರಿಶ್ಚಿಯನ್ ಸೇರಿದಂತೆ ಅನೇಕ ಧರ್ಮಗಳು ಸ್ವತಂತ್ರ ಧರ್ಮವಾಗಿರುವಾಗ ಲಿಂಗಾಯತ ಧರ್ಮವೇಕೆ ಸ್ವತಂತ್ರ ಧರ್ಮವಾಗಬಾರದು ಎಂದು ಪ್ರಶ್ನಿಸಿದ ಅವರು, ಲಿಂಗಾಯತರ ಅಭಿವೃದ್ಧಿಗಾಗಿ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಲೇಬೇಕು ಎಂದು ಪ್ರತಿಪಾದಿಸಿದರು.

ಸಾಹಿತಿ ಬಾಣೂರು ಚೆನ್ನಪ್ಪ ಮಾತನಾಡಿ, ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗುವುದರಿಂದ ಲಿಂಗಾಯತರು ಅಲ್ಪಸಂಖ್ಯಾತರಾಗುತ್ತಾರೆ. ಅದರಿಂದಾಗಿ ಅಲ್ಪಸಂಖ್ಯಾತರಿಗೆ ಸಿಗುವ ಸರಕಾರದ ಎಲ್ಲ ಸವಲತ್ತುಗಳೂ ದೊರೆಯುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಡಾಳು ನಿರಂಜನಪೀಠದ ರುದ್ರಮುನಿ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಬಸವ ತತ್ವ ಪ್ರಚಾರಕ ಜಿ.ಎನ್. ಬಸವರಾಜಪ್ಪ, ಕಾಂತಪ್ಪ, ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು. ಶೋಭಾ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಮಂಜುನಾಥ್ ಸ್ವಾಗತಿಸಿದರು. ಜಯಚನ್ನೇಗೌಡ ವಂದಿಸಿದರು.

ಸ್ವತಂತ್ರ ಧರ್ಮವಾಗುವುದಕ್ಕೆ ಇರಬೇಕಾದ ಎಲ್ಲ ರೀತಿಯ ಅರ್ಹತೆಗಳು ಲಿಂಗಾಯತ ಧರ್ಮಕ್ಕೆ ಇರುವುದರಿಂದ ಆ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆಯನ್ನು ನೀಡಬೇಕು. ಅದಕ್ಕಾಗಿ ಬಸವ ಧರ್ಮೀಯರೆಲ್ಲರೂ ಹೋರಾಟ ನಡೆಸಬೇಕು.
- ಗುರುಬಸವ ಸ್ವಾಮೀಜಿ, ವಿರಕ್ತಮಠ, ಪಾಂಡೋಮಟ್ಟಿ


‘ಲಿಂಗಾಯತ ವಿಶ್ವಧರ್ಮ’
ಲಿಂಗಾಯತ ಧರ್ಮದಲ್ಲಿ ಬ್ರಾಹ್ಮಣರಿಂದ ಹಿಡಿದು ದಲಿತರವರೆಗೆ ಮಹಿಳೆಯರು ಸೇರಿದಂತೆ ಎಲ್ಲ ವರ್ಗದವರೂ ಇರುವುದರಿಂದ ಅದು ವಿಶ್ವಧರ್ಮವಾಗಿದೆ. ಧರ್ಮಗಳು ಮತ್ತು ಜಾತಿಗಳ ನಡುವಿನ ಕಾದಾಟದಿಂದ ಬೇಸತ್ತ ಭಕ್ತಿ ಭಂಡಾರಿ ಬಸವಣ್ಣನವರು ಜಾತಿ ಪದ್ಧತಿಯನ್ನು ತೊಡೆದು ಹಾಕಲು ಸ್ವತಂತ್ರ ಧರ್ಮವಾಗಿ ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ಈ ಹಿನ್ನೆಲೆಯಲ್ಲಿ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ದೊರೆಯಬೇಕು.     

-ಜಯಬಸವಾನಂದ ಸ್ವಾಮೀಜಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X