Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ನವ ಭಾರತ ನಿರ್ಮಾಣ’ಕ್ಕೆ ಸೌಂದರ್ಯ ಲಹರಿ...

‘ನವ ಭಾರತ ನಿರ್ಮಾಣ’ಕ್ಕೆ ಸೌಂದರ್ಯ ಲಹರಿ ಪ್ರೇರಣೆ: ನರೇಂದ್ರ ಮೋದಿ

ವಾರ್ತಾಭಾರತಿವಾರ್ತಾಭಾರತಿ29 Oct 2017 8:02 PM IST
share
‘ನವ ಭಾರತ ನಿರ್ಮಾಣ’ಕ್ಕೆ ಸೌಂದರ್ಯ ಲಹರಿ ಪ್ರೇರಣೆ: ನರೇಂದ್ರ ಮೋದಿ

ಬೆಂಗಳೂರು, ಅ.29: ಸೌಂದರ್ಯ ಲಹರಿ ಪಠಣದಿಂದ ಜ್ಞಾನ, ಸ್ವಾಸ್ತ್ಯ, ಧನ ಎಲ್ಲವು ಸಿಗುತ್ತದೆ. ಇದೇ ಸಂಸ್ಕೃತಿಯನ್ನು ನಮ್ಮ ಸರಕಾರದ ‘ನವ ಭಾರತ’ದ ಕಲ್ಪನೆ ಯೊಂದಿಗೆ ಜೋಡಿಸಲಾಗಿದೆ. ಎಲ್ಲರನ್ನೂ ಜೊತೆಗೆ ಕರೆದೊಯ್ಯುವ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರದ ಮೇಲೆ ವಿಶ್ವಾಸವಿಟ್ಟಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ರವಿವಾರ ನಗರದ ಅರಮನೆ ಮೈದಾನದಲ್ಲಿ ಯಡತೋರೆ ಮಠದ ಶಂಕರ ಭಾರತಿ ಸ್ವಾಮಿ ನೇತೃತ್ವದಲ್ಲಿ ಆಯೋಜಿಸಿದ್ದ ‘ದಶಮ ಸೌಂದರ್ಯ ಲಹರಿ ಪಾರಾಯಣೋತ್ಸವ ಮಹಾ ಸರ್ಮಪಣೆ’ಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸೌಂದರ್ಯ ಲಹರಿಯ ಮಂತ್ರಗಳಲ್ಲಿ ಶಕ್ತಿ, ಭಾವವಿದೆ. ನಾನು ಅನೇಕ ವರ್ಷಗಳಿಂದ ನವರಾತ್ರಿಯನ್ನು ಆಚರಿಸುತ್ತಿದ್ದು, ಅದರಲ್ಲಿ ಸೌಂದರ್ಯ ಲಹರಿಗೂ ಒಂದು ಸ್ಥಾನವಿದೆ. ಸೌಂದರ್ಯ ಲಹರಿಗೆ 10 ವರ್ಷ ಪೂರೈಸುತ್ತಿರುವುದಕ್ಕೆ ನಿಮಗೆಲ್ಲ ಅಭಿನಂದನೆಗಳು ಎಂದು ಹೇಳಿದರು.

ಕೇದಾರನಾಥಕ್ಕೆ ನಾನು ಕಳೆದ 8-10 ದಿನಗಳ ಹಿಂದೆ ಹೋಗಿದ್ದೆ. ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ಅಲ್ಲಿಗೆ ಭೇಟಿ ನೀಡಲು ಕಷ್ಟವಾಗುತ್ತದೆ. ಆದರೆ, ಆದಿ ಶಂಕರಾಚಾರ್ಯರು ಈ ಸ್ಥಳಕ್ಕೆ ಸಾವಿರಾರು ವರ್ಷಗಳ ಹಿಂದೆ ಹೇಗೆ ಬಂದಿರಬಹುದು. ಬರಿಗಾಲಿನಲ್ಲಿ ದೇಶವನ್ನು ಮೂರು ಬಾರಿ ಸುತ್ತಿದ್ದಾರೆ. ದೇಶದ ನಾಲ್ಕು ಭಾಗಗಳಲ್ಲಿ ಮಠಗಳನ್ನು ನಿರ್ಮಿಸಿ, ದೇಶವನ್ನು ಒಂದುಗೂಡಿಸುವ ಪ್ರಯತ್ನ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಮ್ಮ ಸಂಸ್ಕೃತಿಯಲ್ಲಿ ಸೇರಿಕೊಂಡಿದ್ದ ತಪ್ಪು ಆಚರಣೆಗಳನ್ನು ಅವರು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದರು. ಅಲ್ಲದೆ, ಮುಂದಿನ ಪೀಳಿಗೆಯು ಆ ತಪ್ಪು ದಾರಿಯಲ್ಲಿ ಹೋಗುವುದನ್ನು ತಡೆಯಲು ಪ್ರಯತ್ನಿಸಿದ್ದರು. ಜನರನ್ನು ಜ್ಞಾನ, ಭಕ್ತಿಯ ಮಾರ್ಗದಲ್ಲಿ ನಡೆಸಲು ಪ್ರೇರೆಪಿಸಿದರು. ಅಲ್ಲದೆ, ಮುಂದಿನ ಪೀಳಿಗೆಗಾಗಿ ಸೌಂದರ್ಯ ಲಹರಿಯ ರಚನೆ ಮಾಡಿದರು ಎಂದು ಹೇಳಿದರು.

ಆದಿ ಶಂಕರಾಚಾರ್ಯರ ಸಂದೇಶವನ್ನು ಜನರಿಗೆ ತಲುಪಿಸುವಲ್ಲಿ ಶಂಕರ ಭಾರತಿ ಸ್ವಾಮಿ ತಮ್ಮ ಜೀವನವನ್ನು ಸಮರ್ಪಿಸಿದ್ದಾರೆ. ಇಡೀ ವಿಶ್ವವನ್ನು ಒಂದು ಕುಟುಂಬ ಎಂದು ಭಾವಿಸಿ, ಆತ್ಮಭಾವದಿಂದ ಶಂಕರಚಾರ್ಯರ ಸಂದೇಶವನ್ನು ವೇದಾಂತ ಭಾರತೀಯ ಮೂಲಕ ಜನರಿಗೆ ತಲುಪಿಸುತ್ತಿದ್ದಾರೆ ಎಂದು  ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶ್ವವು ಎದುರಿಸುತ್ತಿರುವ ಅನೇಕ ಜಟಿಲ ಸಮಸ್ಯೆಗಳಿಗೆ ನಮ್ಮ ಸಂಸ್ಕೃತಿ, ಪರಂಪರೆಯಲ್ಲಿ ಪರಿಹಾರವಿದೆ. ಯಾರು ಯಾರ ವಿರುದ್ಧವು ದ್ವೇಷ ಮಾಡಬಾರದು ಎಂಬುದು ನಮ್ಮ ಸಂಸ್ಕೃತಿ. ನಮ್ಮ ಪರಂಪರೆಯನ್ನು ನಾಶ ಮಾಡಲು ಪ್ರಯತ್ನಗಳು ನಡೆದವು. ಆದರೆ, ಸಾವಿರಾರು ವರ್ಷಗಳ ಈ ಭವ್ಯ ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಾಗಿಲ್ಲ ಎಂದರು.

ಇವತ್ತಿನ ಯುವಕರು ಮೊಬೈಲ್‌ನಲ್ಲಿ ಎಲ್ಲವನ್ನು ಓದುತ್ತಾರೆ. ಪುಸ್ತಕಗಳಲ್ಲಿ ಇರುವ ಜ್ಞಾನದ ಬಗ್ಗೆ ಅವರಿಗೆ ಹೇಗೆ ಗೊತ್ತಾಗಬೇಕು. ಶಾಲಾ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಭಾರತೀಯ ಸಂಸ್ಕೃತಿ, ಋಷಿ, ಮುನಿಗಳ ಪರಿಚಯಿಸುತ್ತಿರುವ ಶಂಕರ ಭಾರತಿ ಸೇವೆ ನಿಜಕ್ಕೂ ಶ್ಲಾಘನೀಯ ಎಂದು ತಿಳಿಸಿದರು.

‘ವಿವಿಧತೆಯಲ್ಲಿ ಏಕತೆ, ಭಾರತದ ವಿಶೇಷತೆ’ ಎನ್ನುತ್ತೇವೆ. ಆದರೆ, ನಾವು ಸಿಂಗಾಪುರದ ಬಗ್ಗೆ ತಿಳಿದುಕೊಂಡಷ್ಟು ಬಂಗಾಲದ ಬಗ್ಗೆ ಹಾಗೂ ದುಬೈ ಬಗ್ಗೆ ತಿಳಿದುಕೊಂಡಿರುವಷ್ಟು ಡೆಹ್ರಾಡೂನ್ ಬಗ್ಗೆ ತಿಳಿದು ಕೊಂಡಿರುವುದಿಲ್ಲ. ನಾವು ನಮ್ಮವರನ್ನೆ ಮರೆಯುತ್ತಿದ್ದೇವೆ. ಆದುದರಿಂದಲೇ, ನಮ್ಮ ಸರಕಾರ ‘ಏಕ್ ಭಾರತ್, ಶ್ರೇಷ್ಠ್ ಭಾರತ್’ ಅಭಿಯಾನವನ್ನು ಆರಂಭಿಸಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅನಂತ್‌ ಕುಮಾರ್, ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ
ನನ್ನ ಪ್ರೀತಿಯ ಮಾತಾ, ಭಗಿನೀಯರೆ, ಸಹೋದರರೇ, ಈ ಸೌಂದರ್ಯ ಲಹರಿಯ ಮಹಾ ಸಮರ್ಪಣೆ ಮಾಡಲು ಬಂದಿರುವ ನಿಮಗೆಲ್ಲ ನಮಸ್ಕಾರಗಳು, ಪೂಜ್ಯ ಸ್ವಾಮಿಗಳಿಗೆ ನನ್ನ ಪ್ರಣಾಮಗಳು’ ಎಂದು ಕನ್ನಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X