Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿ-ಸಂಘಪರಿವಾರದ ಚಿಂತನೆ ಕಪ್ಪುಹಣ,...

ಬಿಜೆಪಿ-ಸಂಘಪರಿವಾರದ ಚಿಂತನೆ ಕಪ್ಪುಹಣ, ಭ್ರಷ್ಟಾಚಾರಕ್ಕೆ ಪೂರಕ: ಶಿವಸುಂದರ್

ವಾರ್ತಾಭಾರತಿವಾರ್ತಾಭಾರತಿ29 Oct 2017 9:58 PM IST
share
ಬಿಜೆಪಿ-ಸಂಘಪರಿವಾರದ ಚಿಂತನೆ ಕಪ್ಪುಹಣ, ಭ್ರಷ್ಟಾಚಾರಕ್ಕೆ ಪೂರಕ: ಶಿವಸುಂದರ್

ಬೆಂಗಳೂರು, ಅ. 29: ಕಪ್ಪು ಹಣ, ನಕಲಿ ನೋಟು ಹಾಗೂ ಭ್ರಷ್ಟಾಚಾರದ ಪರವಾಗಿರುವವರು ಬಿಜೆಪಿ ಒಳಗೊಂಡಂತೆ ಸಂಘಪರಿವಾರದ ಸಂಘಟನೆಗಳು ಎಂಬುದನ್ನು ದೇಶದ ಜನತೆಗೆ ಮನವರಿಕೆ ಮಾಡುವ ಅಗತ್ಯವಿದೆ ಎಂದು ಚಿಂತಕ ಶಿವಸುಂದರ್ ಪ್ರತಿಪಾದಿಸಿದ್ದಾರೆ.

ರವಿವಾರ ಬಯಲು ಬಳಗ ನಗರದ ಸರಕಾರಿ ಕಲಾ ಕಾಲೇಜಿನಲ್ಲಿ ಆಯೋಜಿಸಿದ್ದ ‘ಭಾರತದ ಆರ್ಥಿಕತೆ: ಬಿಕ್ಕಟ್ಟುಗಳು ಮತ್ತು ಸವಾಲುಗಳು’ ಎಂಬ ವಿಷಯದ ಕುರಿತು ಮಾತನಾಡಿದ ಅವರು, ಬಿಜೆಪಿಯ ಮೂಲ ಸಿದ್ಧಾಂತವೇ ಕಪ್ಪುಹಣ ಹಾಗೂ ಭ್ರಷ್ಟಾಚಾರದ ಪರ. ಹೀಗಿರುವಾಗ ನೋಟು ನಿಷೇಧದಿಂದ ಕಪ್ಪುಹಣ ಪತ್ತೆ ಮಾಡುತ್ತೇವೆಂಬುದು ಹಾಸ್ಯಾಸ್ಪದ ಎಂದು ಟೀಕಿಸಿದರು.

ನೋಟು ನಿಷೇಧದಿಂದ ಸರಕಾರದ ಬೊಕ್ಕಸಕ್ಕೆ ನಷ್ಟವಾಯಿತೇ ವಿನಃ ಕಪ್ಪುಹಣ, ನಕಲಿ ನೋಟು ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಆಗಿರುವುದರ ಕುರಿತು ಇಲ್ಲಿಯವರೆಗೂ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಇದರ ಬದಲಾಗಿ ನೋಟು ನಿಷೇಧದಿಂದಾಗಿ ಆರ್‌ಬಿಐಗೆ ಆರ್ಥಿಕ ನಷ್ಟವಾಗಿರುವುದರ ಕುರಿತು ಕೇಂದ್ರ ಸರಕಾರವೇ ಬಹಿರಂಗ ಪಡಿಸಿದೆ ಎಂದು ಅವರು ಅಂಕಿ-ಅಂಶಗಳನ್ನು ನೀಡಿದರು. ದೇಶದಲ್ಲಿ 93ಲಕ್ಷ ಕೋಟಿ ರೂ. ಕಪ್ಪು ಹಣವಿದೆ. ಇಷ್ಟು ಮೊತ್ತದ ಹಣವನ್ನು ಕೇವಲ ನೋಟು ನಿಷೇಧದಿಂದ ಪತ್ತೆ ಮಾಡುತ್ತೇವೆ ಎಂದು ದೇಶದ ಜನತೆಗೆ ಸುಳ್ಳಿನ ಕಂತೆ ಕಟ್ಟಲಾಗುತ್ತಿದೆ. ಆ ಮೂಲಕ ಕಪ್ಪು ಹಣದ ಮೂಲಗಳ ಕುರಿತು ಜನತೆಗೆ ಸತ್ಯ ಮಾರೆ ಮಾಚಿಸಲು ಕೇಂದ್ರ ಸರಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದರು.

ದೇಶದಲ್ಲಿ ಶೇ.90ರಷ್ಟು ಮಂದಿ ಅಸಂಘಟಿತ ವಲಯದಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಇವರೆಲ್ಲರೂ ನಗದು ರೂಪದಲ್ಲಿಯೇ ವ್ಯವಹಾರ ಮಾಡುವವರು. ಇಷ್ಟು ದೊಡ್ಡ ಪ್ರಮಾಣದ ಜನಸಂಖ್ಯೆಯ ಕುರಿತು ಕಿಂಚಿತ್ತೂ ಯೋಚಿಸದ ಪ್ರಧಾನಿ ಮೋದಿ ನೋಟು ನಿಷೇಧ ಮಾಡುವ ಮೂಲಕ ದೇಶದ ಸಾಮಾನ್ಯ ಜನತೆಯನ್ನು ಉಪವಾಸಕ್ಕೆ, ನಿರುದ್ಯೋಗಿಗಳಾಗುವಂತೆ ಮಾಡಿದರು ಎಂದು ಕಿಡಿಕಾರಿದರು.

ಕಪ್ಪು ಹಣಕ್ಕೂ ದೇಶದಲ್ಲಿ ಪ್ರತಿವರ್ಷ ಹೆಚ್ಚಾಗುತ್ತಲೇ ಇರುವ ಹಗರಣಗಳಿಗೂ ನೇರವಾದ ಸಂಬಂಧವಿದೆ ಎಂಬುದು ಆರ್ಥಿಕ ತಜ್ಞರು ಪತ್ತೆ ಹಚ್ಚಿದ್ದಾರೆ. 1960ರಲ್ಲಿ ಕೇವಲ 2ಹಗರಣಗಳು ಮಾತ್ರ ನಡೆದಿತ್ತು. 1990ರಲ್ಲಿ 60 ಹಗರಣಗಳು ಪತ್ತೆಯಾದರೆ 2005ರ ನಂತರದಲ್ಲಿ 250ಹಗರಣಗಳು ನಡೆದಿವೆ. ಈ ಹಗರಣಗಳಲ್ಲಿ ಬಹುತೇಕವಾಗಿ ಬಂಡವಾಳಶಾಹಿಗಳು ಹಾಗೂ ಜನಪ್ರತಿನಿಧಿಗಳೇ ಪ್ರಮುಖ ಆರೋಪಿಗಳಾಗಿರುತ್ತಾರೆ. ಹೀಗಾಗಿ ಹಗರಣಗಳ ಕಡೆಗಿರುವ ಜನತೆಯ ಚಿಂತನೆಯನ್ನು ಬೇರೆ ಕಡೆಗೆ ಸೆಳೆಯಲು ‘ನೋಟು ನಿಷೇಧ’ ಎಂಬ ಮಾಯಾಜಾಲವನ್ನು ಸೃಷ್ಟಿಸಿದ್ದಾರೆಂದು ಲೇವಡಿ ಮಾಡಿದರು.

ಅಂಬಾನಿ, ಅದಾನಿ ಸೇರಿದಂತೆ ದೇಶದಲ್ಲಿರುವ ದೊಡ್ಡ-ದೊಡ್ಡ ಕಂಪೆನಿಗಳು ನ್ಯಾಯಯುತವಾಗಿ ದೇಶಕ್ಕೆ ಬರಬೇಕಾದ ತೆರಿಗೆಯನ್ನು ಕಾನೂನನ್ನು ಬಳಸಿಕೊಂಡೇ ವಂಚಿಸುತ್ತಿದ್ದಾರೆ. ಬಂಡವಾಳಶಾಹಿಗಳಿಗೆ ಪೂರಕವಾದ ಕಾನೂನುಗಳನ್ನು ಜಾರಿ ಮಾಡುವ ಮೂಲಕ ದೇಶದ ಸಂಪತ್ತನ್ನು ದೋಚಲಾಗುತ್ತಿದೆ. ಹೀಗಾಗಿ ಕಪ್ಪು ಹಣವೂ ಬಂಡವಾಳಶಾಹಿಗಳ ಬಳಿ ಬಿಳಿ ರೂಪದಲ್ಲಿಯೇ ಇದೆ. ಇದನ್ನು ಪತ್ತೆ ಮಾಡುವ ಬದಲು ಸಾಮಾನ್ಯ ಜನರ ಬದುಕಿನ ಮೇಲೆ ಬರೆ ಎಳೆಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ನಡೆಯುವ ಪ್ರತಿಯೊಂದು ಆರ್ಥಿಕ ನೀತಿಗಳ ಹಿಂದೆ ರಾಜಕೀಯ ಹಿತಾಸಕ್ತಿಗಳು ಅಡಗಿರುತ್ತವೆ. ಹೀಗಾಗಿ ಬಿಜೆಪಿಯ ರಾಜಕೀಯ ಹಿತಾಸಕ್ತಿ ಬಂಡವಾಳಶಾಹಿಗಳಿಗೆ, ಭ್ರಷ್ಟಾಚಾರಕ್ಕೆ, ವೈದಿಕ ಶಾಹಿಗಳಿಗೆ ಪೂರಕ. ಆ ಹಿನ್ನೆಲೆಯಲ್ಲಿ ನೋಡುವುದಾದರೆ ಕೇಂದ್ರ ಸರಕಾರದ ನೋಟು ನಿಷೇಧ, ಜಿಎಸ್ ಟಿ, ಡಿಜಿಟಲೀಕರಣ, ಖಾಸಗೀಕರಣಕ್ಕೆ ಪೂರಕ ಯೋಜನೆಗಳು ಬಂಡವಾಳಶಾಹಿ ಹಾಗೂ ಬ್ರಾಹ್ಮಣಶಾಹಿಗಳಿಗೆ ಪೂರಕ.
-ಶಿವಸುಂದರ್, ಪ್ರಗತಿಪರ ಚಿಂತಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X