Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಳಿವಿನಂಚಿನಲ್ಲಿ ಜಾನಪದ ಸಾಹಿತ್ಯ: ಮೋಹನ್...

ಅಳಿವಿನಂಚಿನಲ್ಲಿ ಜಾನಪದ ಸಾಹಿತ್ಯ: ಮೋಹನ್ ವಿಷಾದ

ವಾರ್ತಾಭಾರತಿವಾರ್ತಾಭಾರತಿ29 Oct 2017 11:21 PM IST
share

ಬಣಕಲ್, ಅ.29: ಜಾನಪದ ಸಾಹಿತ್ಯವು ಅನುಭವಿಸಿ ಹಾಡುವ ಕಲೆಯಾಗಿದೆ. ಪುರಾತನ ಕಾಲದಿಂದ ಜನರು ಒಂದೆಡೆ ಸೇರಿ ಜಾನಪದ ಸಾಹಿತ್ಯವನ್ನು ಸರ್ವರಿಗೂ ಉಣ ಬಡಿಸುತ್ತಿದ್ದರು. ಆದರೆ, ಆಧುನಿಕ ಭರಾಟೆಯಲ್ಲಿ ಜಾನಪದ ಸಾಹಿತ್ಯ ಅಳಿವಿನಂಚಿನಲ್ಲಿರುವುದು ವಿಷಾದಕರ ಸಂಗತಿಯಾಗಿದೆ ಎಂದು ಬಣಕಲ್ ಕಸಾಪ ಹೋಬಳಿ ಅಧ್ಯಕ್ಷ ಮೋಹನ್‌ಕುಮಾರ್‌ಶೆಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ.

ಬಣಕಲ್‌ನ ಚೇಗು ಗ್ರಾಮದ ಸಮುದಾಯಭವನದಲ್ಲಿ ಯೋಜಿಸಲಾಗಿದ್ದ ‘ಮನೆಯಂಗಳದಲ್ಲಿ ತಿಂಗಳ ಸಾಹಿತ್ಯ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಾನಪದ ಸಾಹಿತ್ಯ ಕಲಾ ಪ್ರಕಾರಗಳಾದ ಶೋಭಾನೆ ಪದ, ಗೀಗೀ ಪದಗಳು, ಕೋಲಾಟ, ನಾಟಿ ಹಾಡು ಮೊದಲಾದವುಗಳು ಪುರಾತನ ಸೊಗಡಿನ ಜಾನಪದ ಕಲೆಯನ್ನು ಜನರು ಜೀವನದಲ್ಲಿ ಅನುಭವಿಸಿದ್ದನ್ನು ಹಾಡಿನ ಮುಖಾಂತರ ಹಾಡಿ ಮನರಂಜಿಸುತ್ತಿದ್ದರು ಎಂದು ತಿಳಿಸಿದರು.

ಪಿಎಂಜಿಆರ್‌ವೈ ಕೇಂದ್ರ ಸಲಹಾ ಸಮಿತಿಯ ಸದಸ್ಯ ದೀಪಕ್ ದೊಡ್ಡಯ್ಯ ಮಾತನಾಡಿ, ಜಾನಪದ ಕಲೆಗೆ ಯಾವುದೇ ಪಂಥವಿಲ್ಲ. ಕೆಳವರ್ಗ, ಮೇಲ್ವರ್ಗ ಎಂಬ ಜಾತಿ ತಾರತಮ್ಯವಿಲ್ಲ. ಆಧುನಿಕತೆಯಿಂದ ಜನರು ಮೊಬೈಲ್, ದೃಶ್ಯ ಮಾಧ್ಯಮಗಳತ್ತ ಒಲವು ತೋರುತ್ತಿದ್ದು, ಸಂಸ್ಕಾರವನ್ನು ಮರೆಯುತ್ತಿದ್ದಾರೆ. ಪೋಷಕರು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸದ ಜೊತೆಗೆ ಸಂಸ್ಕಾರ ಕಲಿಸಿಕೊಡುವುದನ್ನು ಮರೆಯಬಾರದು ಎಂದು ಸಲಹೆ ನೀಡಿದರು.

ಕಸಾಪ ತಾಲೂಕು ಅಧ್ಯಕ್ಷ ಮಗ್ಗಲಮಕ್ಕಿ ಗಣೇಶ್ ಮಾತನಾಡಿ, ಕನ್ನಡ ಭಾಷೆ ಸುಲಭದ ಭಾಷೆಯಾಗಿದೆ.ಅದರಲ್ಲೂ ಕನ್ನಡ ಜಾನಪದ ಹಾಡಿನ ಸೊಗಡು ಕೇಳಲು ಸ್ವಾರಸ್ಯಮಯವಾಗಿದೆ. ಆದರೆ, ಜನಪದ ಕಲೆ ಅಳಿಯುವ ಹಂತದಲ್ಲಿರುವುದು ವಿಷಾದದ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ಜಾನಪದ ಸಾಹಿತ್ಯ ಪರಿಷತ್ ಅಧ್ಯಕ್ಷ ಬಕ್ಕಿ ಮಂಜುನಾಥ್ ಮತ್ತು ಸಂಗಡಿಗರಿಂದ ಹಾಗೂ ಚೇಗು ಗ್ರಾಮದ ಮಕ್ಕಳಿಂದ ಹಾಡು ಮತ್ತು ವಿವಿಧ ಮನೋರಂಜನಾ ಕಾರ್ಯಕ್ರಮ ನಡೆದವು.

ಈ ಸಂದರ್ಭದಲ್ಲಿ ಬಣಕಲ್ ಗ್ರಾಪಂ ಸದಸ್ಯೆ ಭಾರತಿ, ಶಿಕ್ಷಕ ಜೈಪಾಲ್, ನಾಗರಾಜ್, ವಸಂತ್, ಭಕ್ತೇಶ್, ಶೇಖರಪ್ಪ, ಪದ್ಮನಾಭ ಪೂಜಾರಿ, ಶೀನ, ಮುತ್ತಪ್ಪ, ಜಗದೀಶ್, ಸುನಂದ, ಭಾಗ್ಯಾಶ್ರೀ, ಸಂಗೀತಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X