Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಸಾಲ ಮನ್ನಾ ಮಾಡಿಸುವಲ್ಲಿ ಬಿಜೆಪಿ...

ರೈತರ ಸಾಲ ಮನ್ನಾ ಮಾಡಿಸುವಲ್ಲಿ ಬಿಜೆಪಿ ಸಂಸದರು ವಿಫಲ: ಮಧುಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ29 Oct 2017 11:23 PM IST
share
ರೈತರ ಸಾಲ ಮನ್ನಾ ಮಾಡಿಸುವಲ್ಲಿ ಬಿಜೆಪಿ ಸಂಸದರು ವಿಫಲ: ಮಧುಬಂಗಾರಪ್ಪ

ಸೊರಬ, ಅ.29: ಸಂಸದ ಬಿ.ಎಸ್.ಯಡಿಯೂರಪ್ಪಸೇರಿದಂತೆ ರಾಜ್ಯದ ಬಿಜೆಪಿ ಸಂಸದರು ರೈತರ ಸಂಪೂರ್ಣ ಸಾಲ ಮನ್ನಾ ಮಾಡಿಸುವಲ್ಲಿ ವಿಫಲರಾಗಿದ್ದು, ಪ್ರಧಾನಿ ಮುಂದೆ ಹಕ್ಕೊತ್ತಾಯ ಮಾಡುವ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದ್ದಾರೆ ಎಂದು ಶಾಸಕ ಮಧುಬಂಗಾರಪ್ಪಲೇವಡಿ ಮಾಡಿದ್ದಾರೆ.

ಪಟ್ಟಣದ ಬಂಗಾರಧಾಮದಲ್ಲಿ ಶನಿವಾರ ಸಂಜೆ ನಡೆದ ನ.5ರಿಂದ 8ರವರೆಗೆ ತಾಲೂಕಿನ ಕುಬಟೂರಿನಿಂದ ಶಿವಮೊಗ್ಗದವರೆಗಿನ ನೀರಾವರಿ ಯೋಜನೆಗಾಗಿ ಹಮ್ಮಿಕೊಂಡಿರುವ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ ರಾಜ್ಯ ಸರಕಾರ ರೈತರ 50 ಸಾವಿರ ರೂ.ವರೆಗಿನ ಸಾಲಮನ್ನಾ ಮಾಡಿದೆ. ಇನ್ನುಳಿದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಂಪೂರ್ಣ ರೈತರ ಸಾಲವನ್ನು ಕೇಂದ್ರದ ಮೇಲೆ ಒತ್ತಡ ಹೇರಿ ಸಾಲಮನ್ನಾ ಮಾಡಿಸುವಲ್ಲಿ ರಾಜ್ಯದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಸಾಕಷ್ಟು ನೀರಾವರಿ ಸಮಸ್ಯೆಗಳನ್ನು ಹೊಂದಿರುವ ಶಿಕಾರಿಪುರ ಕ್ಷೇತ್ರದಲ್ಲಿ ಗಮನಹರಿಸುವುದನ್ನು ಬಿಟ್ಟು, ಸಂಸದ ಯಡಿಯೂರಪ್ಪ, ತಾಲೂಕಿನ ಜನರನ್ನು ಮುಳುಗಿಸುವ ದಂಡಾವತಿ ಯೋಜನೆಗೆ ಮುಂದಾಗಿರುವು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು.

ಈ ಹಿಂದೆ ಆನವಟ್ಟಿ ಭಾಗದ ಮುಳುಗಡೆಗೆ ಮುಂದಾಗಿದ್ದ ಬ್ಯಾತನಾಳ ಯೋಜನೆಯನ್ನು ವಿರೋಧಿಸಿದ್ದ ಬಂಗಾರಪ್ಪನವರು ರೈತರ ಜಮೀನುಗಳನ್ನು ಮುಳುಗಿಸದೆ ಮೂಡಿ, ಮೂಗೂರು, ಕಚವಿ ಏತನೀರಾವರಿ ಯೋಜನೆಗಳಿಗೆ ಅಂದೇ ಮಂಜೂರು ಮಾಡಿಸಿದ್ದರು. ಈಗ ಈ ಯೋಜನೆಗಳ ಗಾತ್ರ ಹೆಚ್ಚಿಸಿ ಹಲವು ಕೆರೆಗಳನ್ನು ತುಂಬಿಸುಲು ಸುಮಾರು 45 ಕೋಟಿ ರೂ. ಆವಶ್ಯಕತೆಯಿದ್ದು, ಹಣ ಬಿಡುಗಡೆಗಾಗಿ ಸರಕಾರದ ಮೇಲೆ ಒತ್ತಡ ಹೇರುವ ದೃಷ್ಟಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಾದಯಾತ್ರೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಭದ್ರಾವತಿ ಶಾಸಕ ಅಪ್ಪಾಜಿಗೌಡ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕಾ, ಜಿಲ್ಲಾಧ್ಯಕ್ಷ ನಿರಂಜನ್, ಶಿಕಾರಿಪುರದ ಎಚ್.ಟಿ.ಬಳಿಗಾರ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಜೆಡಿಎಸ್ ಬ್ಲಾಕ್ ಅಧ್ಯಕ್ಷ ಎಚ್.ಗಣಪತಿ, ಕೆ.ಪಿ.ರುದ್ರಗೌಡ, ವಕ್ತಾರ ಎಂ.ಡಿ.ಶೇಖರ್, ಜಿಪಂ ಸದಸ್ಯ ವೀರೇಶ್ ಕೊಟಗಿ, ತಾಪಂ ಉಪಾಧ್ಯಕ್ಷ ಸುರೇಶ್, ಸದಸ್ಯರಾದ ನಾಗರಾಜ್ ಚಂದ್ರಗುತ್ತಿ, ಸುನೀಲ್ ಗೌಡ, ಎಪಿಎಂಸಿ ಅಧ್ಯಕ್ಷ ರಾಜು ಕುಪ್ಪಗಡ್ಡೆ, ಉಪಾದ್ಯಕ್ಷ ಜಯಶೀಲ ಗೌಡ, ಪಪಂ ಅಧ್ಯಕ್ಷೆ ಬೀಬಿ ಝುಲೇಖಾ, ಉಪಾಧ್ಯಕ್ಷೆ ರತ್ನಮ್ಮ, ಸದಸ್ಯರಾದ ಡಿ.ಆರ್.ಶ್ರೀಧರ್, ಪ್ರಶಾಂತ್ ಮೇಸ್ತಿ, ಮಂಚಿ ಹನುಮಂತಪ್ಪ, ಮೆಹಬೂಬಿ, ನೇತ್ರಾವತಿ ಪ್ರಮುಖರಾದ ಮಂಡಗಳಲೆ ಹುಚ್ಚಪ್ಪ, ಆಶೋಕ್ ಬರದಳ್ಳಿ, ಬರಗಿ ಬಾಸ್ಕರ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X