Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳೆ ಕೈಗೆ ಬಂದ ರೈತನಿಗಾದ ಸಂತೋಷ...

ಬೆಳೆ ಕೈಗೆ ಬಂದ ರೈತನಿಗಾದ ಸಂತೋಷ ನನಗಾಗಿದೆ: ಕೃಷ್ಣ ಯಾಜಿ ಬಳ್ಕೂರು

ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ30 Oct 2017 10:13 PM IST
share
ಬೆಳೆ ಕೈಗೆ ಬಂದ ರೈತನಿಗಾದ ಸಂತೋಷ ನನಗಾಗಿದೆ: ಕೃಷ್ಣ ಯಾಜಿ ಬಳ್ಕೂರು

ಉಡುಪಿ, ಅ.30: ‘ರೈತನೊಬ್ಬನಿಗೆ ಬೆವರು ಸುರಿಸಿ ದುಡಿದ ಬೆಳೆ ಕೈಗೆ ಬಂದಾಗ ಆಗುವಷ್ಟೇ ಸಂತೋಷ ಇಂದು ನನಗಾಗಿದೆ’ ಎಂದು ಯಕ್ಷಗಾನ ಕ್ಷೇತ್ರದ ನಾಲ್ಕು ದಶಕಗಳ ಕಲಾಸೇವೆಗಾಗಿ ಇಂದು ರಾಜ್ಯ ಸರಕಾರದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಯಕ್ಷಗಾನ ಕಲಾವಿದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು ವಾಲ್ಗಳ್ಳಿಯ ಕೃಷ್ಣ ಯಾಜಿ ಬಳ್ಕೂರು ಹೇಳಿದ್ದಾರೆ.

ಪ್ರಶಸ್ತಿ ಪಡೆದಿರುವುದಕ್ಕಾಗಿ ದೂರವಾಣಿ ಮೂಲಕ ಸಂಪರ್ಕಿಸಿ ಅಭಿನಂದಿಸಿದಾಗ ತನಗೆ ಪ್ರಶಸ್ತಿಯಿಂದ ಅತ್ಯಂತ ಖುಷಿಯಾಗಿದೆ ಎಂದರು. ನನ್ನ ನಾಲ್ಕು ದಶಕಗಳ ಕಲಾ ಸೇವೆಯನ್ನು ಗುರುತಿಸಿರುವುದಕ್ಕಾಗಿ ರಾಜ್ಯ ಸರಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಆಭಾರಿ ಎಂದರು.

61ರ ಹರೆಯದ (ಹುಟ್ಟಿದ್ದು 1956 ಹೊನ್ನಾವರದ ಬಳ್ಕೂರಿನಲ್ಲಿ) ಕೃಷ್ಣ ಯಾಜಿ ಅವರನ್ನು ಯಕ್ಷಗಾನಕ್ಕೆ ಕರೆ ತಂದವರು ಖ್ಯಾತ ಕಲಾವಿದ ಕೆರೆಮನೆ ಮಹಾಬಲ ಹೆಗಡೆ. ಎಸೆಸೆಲ್ಸಿ ಮುಗಿಸಿದ ತಾನು ಅವರ ಪ್ರೇರಣೆಯಿಂದ ಯಕ್ಷಗಾನಕ್ಕೆ ಬಂದೆ. ಅನಂತರ ನಾನು ಕೆರೆಮನೆಯ ಕುಟುಂಬದ ಎಲ್ಲಾ ಖ್ಯಾತನಾಮರೊಂದಿಗೆ ಮಾತ್ರವಲ್ಲ ಚಿಟ್ಟಾಣಿ, ಗೋಡೆ, ಶೇಣಿ, ಕುಂಬ್ಳೆ, ಗೋವಿಂದ ಭಟ್, ಜಲವಳ್ಳಿ ಅವರೊಂದಿಗೆ ವೇಷ ಮಾಡಿ ಕುಣಿದಿದ್ದೇನೆ. ಇದು ನನಗೆ ತೃಪ್ತಿ ತಂದ ನನ್ನ ಸಾಧನೆ ಎಂದರು.

ನಾಲ್ಕು ದಶಕಗಳ ಯಕ್ಷಗಾನದ ಬದುಕಿನಲ್ಲಿ 29 ವರ್ಷಗಳ ಕಾಲ ತಾನು ಸಾಲಿಗ್ರಾಮ ಮೇಳವೊಂದರಲ್ಲೇ ದುಡಿದೆ. ಇದು ಸಾಧ್ಯವಾಗಿರುವುದು ಸಾಲಿಗ್ರಾಮ ಮೇಳದ ಯಜಮಾನರಾದ ಪಳ್ಳಿ ಸೋಮನಾಥ ಹೆಗ್ಡೆ ಹಾಗೂ ಈಗಿನ ಯಜಮಾನರಾದ ಕಿಶನ್ ಹೆಗ್ಡೆಯವರಿಂದ. ಉಳಿದಂತೆ ಕೌಟುಂಬಿಕ ಹಾಗೂ ಆರೋಗ್ಯದ ಕಾರಣಕ್ಕಾಗಿ ಮನೆಯಲ್ಲೇ ಇದ್ದು ಯಾರಾದರೂ ಕರೆದಾಗ, ಆರೋಗ್ಯ ಸರಿಯಿದ್ದಾಗ ಹೋಗಿ ವೇಷ ಮಾಡಿ ಬರುತಿದ್ದೇನೆ ಎಂದರು.

ಈಗಲೂ ಆರೋಗ್ಯ ಸರಿಯಿದ್ದಾಗ ತಾನು ಯಾರು ಕರೆದರೂ ಹೋಗಿ ಕುಣಿದು ಬರುತ್ತಿದ್ದೇನೆ. ಜನರಿಂದ ಈಗಲೂ ಸಿಗುತ್ತಿರುವ ಪ್ರೀತಿಯೇ ನನಗೆ ಕ್ಷೇತ್ರದಲ್ಲಿ ಮುಂದುವರಿಯಲು ಪ್ರೇರಣೆಯಾಗಿದೆ ಎಂದು ಕೃಷ್ಣ ಯಾಜಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X