Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರ: ಎನ್‌ಎಚ್‌ಪಿಸಿ ದಾಖಲೆಗಳ...

ಜಮ್ಮು-ಕಾಶ್ಮೀರ: ಎನ್‌ಎಚ್‌ಪಿಸಿ ದಾಖಲೆಗಳ ಬಹಿರಂಗಕ್ಕೆ ಸಿಐಸಿ ನಕಾರ

ವಾರ್ತಾಭಾರತಿವಾರ್ತಾಭಾರತಿ31 Oct 2017 6:18 PM IST
share
ಜಮ್ಮು-ಕಾಶ್ಮೀರ: ಎನ್‌ಎಚ್‌ಪಿಸಿ ದಾಖಲೆಗಳ ಬಹಿರಂಗಕ್ಕೆ ಸಿಐಸಿ ನಕಾರ

ಹೊಸದಿಲ್ಲಿ,ಅ.31: ಜಮ್ಮು-ಕಾಶ್ಮೀರದಲ್ಲಿಯ ಏಳು ರಾಷ್ಟ್ರೀಯ ಜಲವಿದ್ಯುತ್ ನಿಗಮ(ಎನ್‌ಎಚ್‌ಪಿಸಿ) ಯೋಜನೆಗಳನ್ನು ರಾಜ್ಯ ಸರಕಾರಕ್ಕೆ ಹಸ್ತಾಂತರಿಸಬೇಕೆಂಬ ಬೇಡಿಕೆಯ ಕುರಿತು ಚರ್ಚೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಆರ್‌ಟಿಐ ಅರ್ಜಿಯನ್ನು ಕೇಂದ್ರ ಮಾಹಿತಿ ಆಯೋಗ(ಸಿಐಸಿ)ವು ತಿರಸ್ಕರಿಸಿದೆ. ತನ್ನ ನಿರಾಕರಣೆಗೆ ‘ವಾಣಿಜ್ಯಿಕ ಗೋಪ್ಯತೆ’ ಮತ್ತು ‘ಥರ್ಡ್ ಪಾರ್ಟಿ ಅಥವಾ ಅನ್ಯ ವ್ಯಕ್ತಿ’ ವಿನಾಯಿತಿ ನಿಬಂಧನೆಗಳನ್ನು ಅದು ಉಲ್ಲೇಖಿಸಿದೆ.

ಜಲವಿದ್ಯುತ್ ಯೋಜನೆಗಳ ಮರುಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರಕಾಗಳ ನಡುವಿನ ಮಾತುಕತೆಗಳ ವಿವರ, ಪ್ರಸ್ತಾವದ ಕಾರ್ಯಸಾಧ್ಯತೆ ಮತ್ತು ಕಡತ ಟಿಪ್ಪಣಿಗಳನ್ನು ಕೋರಿ ಆರ್‌ಟಿಐ ಕಾರ್ಯಕರ್ತ ವೆಂಕಟೇಶ ನಾಯಕ್ ಎನ್ನುವವರು ಸಲ್ಲಿಸಿದ್ದ ಅರ್ಜಿಗೆ ಈ ಪ್ರಕರಣವು ಸಂಬಂಧಿಸಿದೆ.

ಜಮ್ಮು-ಕಾಶ್ಮೀರ ಸರಕಾರವು 2000ನೇ ಸಾಲಿನಲ್ಲಿ ಕೇಂದ್ರದೊಂದಿಗೆ ಒಡಂಬಡಿ ೆಯೊಂದಕ್ಕೆ ಸಹಿ ಮಾಡಿದ್ದು, ಹಣಕಾಸು ಪೂರೈಕೆ, ಕಾರ್ಯಾರಂಭ ಮತ್ತು ನಿರ್ವಹಣೆಗಾಗಿ 10 ವರ್ಷಗಳ ಅವಧಿಗೆ ಎನ್‌ಎಚ್‌ಪಿಸಿಗೆ ರಾಜ್ಯದಲ್ಲಿಯ ಏಳು ಜಲ ವಿದ್ಯುತ್ ಯೋಜನೆಗಳ ಹಸ್ತಾಂತರವನ್ನು ಅದರಲ್ಲಿ ಉಲ್ಲೇಖಿಸಲಾಗಿತ್ತು ಎಂದು ನಾಯಕ್ ತಿಳಿಸಿದರು.

 ಪ್ರಕರಣದ ವಿವರಗಳನ್ನು ನೀಡಿದ ಅವರು, ಈ ಯೋಜನೆಗಳನ್ನು ರಾಜ್ಯಕ್ಕೆ ಮರಳಿಸಲು ಪರಸ್ಪರ ಸ್ವೀಕಾರಾರ್ಹ ವಿಧಿವಿಧಾನಗಳನ್ನು ರೂಪಿಸಲು ಉಭಯ ಸರಕಾರಗಳು ಒಪ್ಪಿಕೊಂಡಿದ್ದವು ಎಂದರು.

ನಾಯಕ್ ಅವರು ಕೇಂದ್ರ ವಿದ್ಯುತ್ ಸಚಿವಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಸಾರ್ವಜನಿಕ ಕ್ಷೇತ್ರದ ಉದ್ಯಮವಾಗಿರುವ ಎನ್‌ಎಚ್‌ಪಿಸಿಗೆ ವರ್ಗಾಯಿಸಲಾಗಿತ್ತು ಮತ್ತು ಅದು ಅಪೇಕ್ಷಿತ ಮಾಹಿತಿಗಳನ್ನು ಒದಗಿಸಲು ನಿರಾಕರಿಸಿತ್ತು. ಎನ್‌ಎಚ್‌ಪಿಸಿ ಶೇರು ವಿನಿಮಯ ಕೇಂದ್ರಗಳಲ್ಲಿ ನೋಂದಾಯಿತ ಕಂಪನಿಯಾಗಿದ್ದು, ಈ ದಾಖಲೆಗಳ ಬಹಿರಂಗವು ಶೇರುದಾರರಲ್ಲಿ ಅನಗತ್ಯ ಊಹಾಪೋಹ ಮತ್ತು ಗೊಂದಲಗಳಿಗೆ ಕಾರಣವಾಗುತ್ತದೆ ಮತ್ತು ಕಂಪನಿಯ ವಾಣಿಜ್ಯಿಕ ಗೋಪ್ಯತೆಯ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ ಎಂದು ಉತ್ತರದಲ್ಲಿ ತಿಳಿಸಲಾಗಿತ್ತು.

ಇದೇ ಕಾರಣದಿಂದ ವಾಣಿಜ್ಯಿಕ ಗೋಪ್ಯತೆ ಮತ್ತು ಥರ್ಡ್ ಪಾರ್ಟಿಗೆ ಸಂಬಂಧಿತ ಆರ್‌ಟಿಐ ಕಾಯ್ದೆಯ ಕಲಮ್‌ಗಳಡಿ ಅರ್ಜಿಯಲ್ಲಿ ಕೋರಲಾಗಿರುವ ವಿವರಗಳು ಬಹಿರಂಗಗೊಳಿಸುವುದರಿಂದ ವಿನಾಯಿತಿ ಹೊಂದಿವೆ ಎಂದು ಕೇಂದ್ರ ಮಾಹಿತಿ ಆಯಕ್ತ ಸುಧೀರ ಭಾರ್ಗವ ತಿಳಿಸಿದ್ದಾರೆ.

 ಸಿಐಸಿಯ ನಿರ್ಧಾರವನ್ನು ಪ್ರಶ್ನಿಸಿದ ನಾಯಕ್, ತನ್ನ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯ ಮೂಲಕ ಆರ್‌ಟಿಐ ಅಡಿ ಅರ್ಜಿಯನ್ನು ಸ್ವೀಕರಿಸುವ ಮತ್ತು ಅದರ ಕುರಿತು ನಿರ್ಧಾರ ಕೈಗೊಳ್ಳುವ ಸರಕಾರಿ ಪ್ರಾಧಿಕಾರವು ‘ಸೆಕೆಂಡ್ ಪಾರ್ಟಿ’ಯಾಗಿರು ವುದರಿಂದ ‘ಥರ್ಡ್ ಪಾರ್ಟಿ’ನಿಬಂಧನೆಯು ಇಲ್ಲಿ ಅನ್ವಯಿಸುವುದಿಲ್ಲ. ಅಂತಹ ಅಧಿಕಾರಿಯನ್ನು ಥರ್ಡ್ ಪಾರ್ಟಿ ಎಂದು ಪರಿಗಣಿಸುವ ಪ್ರವೃತ್ತಿ ಮುಂದುವರಿದರೆ ಸರಕಾರಿ ಕಚೇರಿಯ ಯಾವುದೇ ಹಿರಿಯ ಅಧಿಕಾರಿಯು ಪ್ರತಿ ಆರ್‌ಟಿಐ ಅರ್ಜಿಗೂ ತಾನು ಥರ್ಡ್ ಪಾರ್ಟಿ ಎಂದು ಪ್ರತಿಪಾದಿಸಬಹುದು ಮತ್ತು ದಾಖಲೆಗಳನ್ನು ಬಹಿರಂಗಗೊಳಿಸಲು ತಡೆಯೊಡ್ಡಬಹುದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X