Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾನು ಕರಾಟೆಪಟುವಾಗಿರಬಹುದು, ವಿಕೃತ...

ನಾನು ಕರಾಟೆಪಟುವಾಗಿರಬಹುದು, ವಿಕೃತ ಮನೋಭಾವ ನನ್ನಲ್ಲಿಲ್ಲ!

ಹಲ್ಲೆ ಪ್ರಕರಣದ ಬಗ್ಗೆ ಮೇಯರ್ ಮರು ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ31 Oct 2017 7:13 PM IST
share
ನಾನು ಕರಾಟೆಪಟುವಾಗಿರಬಹುದು, ವಿಕೃತ ಮನೋಭಾವ ನನ್ನಲ್ಲಿಲ್ಲ!

ಮಂಗಳೂರು, ಅ.31: ತಾನು ವಾಸಿಸುತ್ತಿರುವ ಫ್ಲಾಟ್‌ನ ವಾಚ್‌ ಮ್ಯಾನ್ ಪತ್ನಿ ಹಾಗೂ ಮಗುವಿನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಸ್ಪಷ್ಟನೆ ನೀಡಿರುವ ಮೇಯರ್ ಕವಿತಾ ಸನಿಲ್, ತಾನು ಹಲ್ಲೆ ನಡೆಸಿಲ್ಲ, ಮಗುವನ್ನು ಎಸೆದಿಲ್ಲ ಎಂಬುದನ್ನು ಪ್ರಮಾಣ ಮಾಡಿ ಹೇಳುತ್ತೇನೆ. ಯಾವ ಕ್ಷೇತ್ರದಲ್ಲಿಯೂ ಪ್ರಮಾಣ ಮಾಡಲು ಸಿದ್ಧ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಇಂದು ನಡೆದ ಸಾಮಾನ್ಯ ಸಭೆಯ ಬಳಿಕ ಮಾತನಾಡಿದ ಮೇಯರ್ ಕವಿತಾ ಸನಿಲ್, ನಾಲ್ಕನೆ ತರಗತಿಯಲ್ಲಿ ಓದುತ್ತಿರುವ ನನ್ನ ಮಗಳನ್ನು ರಾತ್ರಿ ಹೊತ್ತು ವಾಚ್‌ ಮ್ಯಾನ್ ಪತ್ನಿ ಅಟ್ಟಾಡಿಸಿಕೊಂಡು ಓಡಿಸಿ, ಬೆದರಿಸಿದ ಬಗ್ಗೆ ಮರುದಿನ ನಾನು ಅವರ ರೂಂಗೆ ಹೋಗಿ ಪ್ರಶ್ನಿಸಿದ್ದು ಹೌದು. ಆದರೆ ಕೇವಲ ನಾಲ್ಕೈದು ನಿಮಿಷಗಳ ಅಂತರದಲ್ಲಿ ನಾನು ರೂಂನಿಂದ ಹೊರ ಬಂದಿದ್ದೇನೆ. ನನ್ನ ಬೆನ್ನಿಗೇ ವಾಚ್‌ ಮ್ಯಾನ್ ಪತ್ನಿ ಹಾಗೂ ಇತರರು ಹೊರ ಬಂದಿದ್ದಾರೆ ಈ ಬಗ್ಗೆ ಸಿಸಿ ಕ್ಯಾಮೆರಾದಲ್ಲಿ ದಾಖಲೆ ಇದೆ ಎಂದರು.

ನಾನು ಹೋದಾಗ ರೂಂನ ಬಾಗಿಲು ಮುಚ್ಚಿದ್ದರಿಂದ ಬಾಗಿಲು ಬಡಿದಿದ್ದೇನೆ. ವಾಚ್‌ ಮ್ಯಾನ್ ಬಂದು ಬಾಗಿಲು ತೆರೆದಿದ್ದಾರೆ. ನಾನು ಆತನ ಪತ್ನಿಯೆಂದು ಕೇಳಿದಾಗ ಆಕೆ ಮತ್ತು ಇತರ ಇಬ್ಬರು ಅಲ್ಲೇ ಬದಿಯಲ್ಲಿದ್ದರು. ನೀನು ಯಾಕೆ ಮಗುವನ್ನು ಓಡಿಸಿದ್ದಿ, ನಿನ್ನ ಮೇಲೆ ಕಂಪ್ಲೇಟ್ ಮಾಡುತ್ತೇನೆ ಎಂದು ಹೇಳಿ ನನ್ನ ಕೆಲಸದ ನಿಮಿತ್ತ ಹೋಗಿದ್ದೇನೆ. ಇದಾಗಿ ಎರಡು ನಿಮಿಷದಲ್ಲೇ ವಾಚ್‌ ಮ್ಯಾನ್ ಪತ್ನಿ ಹೊರಬಂದಿದ್ದಾರೆ. ಬಳಿಕ 15 ನಿಮಿಷಗಳ ಅವಧಿಯಲ್ಲಿ ಮಕ್ಕಳು ಹಾಗೂ ಅವರ ಮನೆಯವರೆಲ್ಲರೂ ಹೊರಗಡೆ ಟೇಬಲ್ ಬಳಿ ಸಂತಸದಿಂದ ಆಡುತ್ತಿರುವ ದೃಶ್ಯವೆಲ್ಲಾ ಸಿಸಿ ಕ್ಯಾಮರಾದಲ್ಲಿದೆ. ನಾನು ಹೊಡೆದಿದ್ದರೆ ಅಷ್ಟೊಂದು ಬೇಗ ಅವರೆಲ್ಲಾ  ಖುಷಿಯಲ್ಲಿ ಇರಲು ಸಾಧ್ಯವೇ? ಮಗುವಿಗೆ ಹಲ್ಲೆ ನಡೆಸಿದ್ದರೆ ಭಯಗೊಂಡಿರಬಹುದಾಗಿದ್ದ ಮಗು ಅಷ್ಟು ಸುಲಭವಾಗಿ ಹೊರಗೆ ಬಂದು ಆಡಲು ಸಾಧ್ಯವೇ? ನಾನು ಈಗಲೂ ಹೇಳುತ್ತಿದ್ದೇನೆ. ನನ್ನನ್ನೂ ತಾಯಿಯ ಸ್ಥಾನದಲ್ಲಿದ್ದು ನೋಡಲಿ. ನಾನು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಬಳಿಕ  ವೆನ್ಲಾಕ್ ನ ಎಮರ್ಜೆನ್ಸಿಗೆ ಮಹಿಳೆಯನ್ನು ಕರೆದೊಯ್ದು ದಾಖಲಿಸಲು ಹೇಳಲಾಗಿದೆ. ಆದರೆ ಅವರು ಏನೂ ಇಲ್ಲ ಎಂದು ವಾಪಾಸು ಕಳುಹಿಸಿದ್ದಾರೆ. ನಾನು ಕರಾಟೆ ಪಟು ಆಗಿರಬಹುದು. ಆದರೆ ಮಗುವನ್ನು ಎಸೆಯುವಂತಹ, ಪಂಚ್ ಮಾಡುವಂತಹ ವಿಕೃತ ಮನಸ್ಸು ಹೊಂದಿಲ್ಲ. ಇಂದು ಮನಪಾ ಸಭೆಯ ವೇಳೆಯೂ ವಿಪಕ್ಷದವರ ಆರೋಪದ ವೇಳೆ ನನ್ನ ಮಗಳ ಸ್ಥಿತಿಯನ್ನು ನೆನೆದು ನನಗೆ ಅಳು ತಡೆಯಲಾಗಲಿಲ್ಲ ಎಂದು ಮೇಯರ್ ವಿವರ ನೀಡಿದರು.

ಈ ಸಂದರ್ಭ ಉಪಸ್ಥಿತರಿದ್ದ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ, ಇಂದು ನಡೆದ ಘಟನೆ ಬೇಸರದ ಸಂಗತಿ, ವೈಯಕ್ತಿಕ ಘಟನೆಯ ಕುರಿತು ಸಾರ್ವಜನಿಕ ಸಮಸ್ಯೆ ಬಗೆಹರಿಸುವ ವೇದಿಕೆಯಲ್ಲಿ ಪ್ರಸ್ತಾಪಿಸಿದ್ದೇ ತಪ್ಪು. ಅದರಲ್ಲೂ ಪ್ರತಿಪಕ್ಷದ ನಾಯಕರಿಗೆ ಪ್ರಕರಣದ ಬಗ್ಗೆ ಮಾತನಾಡಲು ಕಾಲಾವಕಾಶ ನೀಡಲಾ ಗಿತ್ತು. ಆದರೆ ಮೇಯರ್ ಮೇಲಿನ ಆರೋಪಕ್ಕೆ ಅವರಿಗೆ ಸ್ಪಷ್ಟೀಕರಣ ನೀಡಲು ಅವಕಾಶ ನೀಡದೆ ಗೂಂಡಾವರ್ತನೆ ತೋರಲಾಗಿದೆ. ಇದು ಮನಪಾ ಸದಸ್ಯರಿಗೆ ಶೋಭೆ ತರುವಂತದ್ದು ಅಲ್ಲ ಎಂದರು.

ಉಪ ಮೇಯರ್ ರಜನೀಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಬಿತಾ ಮಿಸ್ಕಿತ್ ಹಾಗೂ ಆಡಳಿತ ಪಕ್ಷದ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X