Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಜಾಲತಾಣ’ಗಳಲ್ಲಿ ಕನ್ನಡ ಸದ್ಬಳಕೆ...

‘ಜಾಲತಾಣ’ಗಳಲ್ಲಿ ಕನ್ನಡ ಸದ್ಬಳಕೆ ಆಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ31 Oct 2017 9:18 PM IST
share

ಬೆಂಗಳೂರು, ಅ. 31: ಕನ್ನಡ ಎಲ್ಲ ಹಂತಗಳಲ್ಲೂ ಅನುಷ್ಠಾನಗೊಳ್ಳಬೇಕು. ಬಹಳ ಮುಖ್ಯವಾಗಿ ಜಾಲತಾಣಗಳಲ್ಲಿ ಕನ್ನಡ ಬಳಕೆ ಹೆಚ್ಚುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸಲ್ಲಿಸಲಾಗಿರುವ ವರದಿಯನ್ನು ರಾಜ್ಯೋತ್ಸವದ ಸಂದರ್ಭದಲ್ಲಿ ಅಂಗೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಾಧಿಕಾರದಿಂದ ಸರಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ ಕುರಿತು ವರದಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಈ ವರದಿಯ ಶಿಫಾರಸ್ಸುಗಳ ಅನುಷ್ಠಾನಕ್ಕೆ ಸರಕಾರ ಬದ್ಧ ಎಂದು ಘೋಷಿಸಿದರು.

ಆಧುನಿಕ ತಂತ್ರಜ್ಞಾನದ ಅರಿವು ಬಹಳ ಮುಖ್ಯವಾಗಿದ್ದು, ಆಡಳಿತದಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಬಳಕೆ ಮಾಡುವುದರಿಂದ ಜನರಿಗೆ ಹೆಚ್ಚು ಪ್ರಯೋಜನವಾಗುತ್ತದೆ ಎಂದ ಅವರು, ಒಂದು ವರ್ಷದೊಳಗೆ ಸರಕಾರದ ಎಲ್ಲ ಜಾಲತಾಣಗಳು ಸಂಪೂರ್ಣ ಕನ್ನಡದಲ್ಲಿರಬೇಕು. ಆ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಅವರು ಆಶಯವನ್ನು ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಯಾವುದೇ ಭಾಷೆಯ ಪ್ರಗತಿ ಹೊಸ ಜ್ಞಾನಶಾಖೆಗಳಿಗೆ ತೆರೆದುಕೊಂಡಾಗ ಮಾತ್ರ ಸಾಧ್ಯ. ಸರಕಾರವು ಜನಸ್ನೇಹಿಯಾಗಿ ತಂತ್ರಾಂಶವನ್ನು ಬಳಕೆ ಮಾಡುವುದರಿಂದ ಸರಕಾರದ ಯೋಜನೆಗಳು ನೇರವಾಗಿ ಜನರಿಗೆ ತಲುಪಿಸಲು ಉಪಯುಕ್ತ ಎಂದರು.

ಪ್ರಾಧಿಕಾರದ ವತಿಯಿಂದ ಕರ್ನಾಟಕ ಸರಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ ಕುರಿತ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಹೊಸ ಜ್ಞಾನ ಶಾಖೆಗೆ ಇಂದು ಬಿಡುಗಡೆಯಾಗಿರುವ ಕಂಪ್ಯೂಟರ್ ಪದವಿವರಣ ಕೋಶ ಅತ್ಯಂತ ಉಪಯುಕ್ತ. ಇದು ಹೊಸತನಕ್ಕೆ ತೆರೆದುಕೊಳ್ಳುತ್ತಿರುವ ಯುವಜನತೆಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ನುಡಿದರು.

ಈ ವೇಳೆ ಕಂಪ್ಯೂಟರ್ ಪದವಿವರಣ ಕೋಶ ಕೃತಿಯನ್ನು ಸಿಎಂ ಲೋಕಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಜಯಚಂದ್ರ, ಕೆ.ಜೆ.ಜಾರ್ಜ್, ಪ್ರಿಯಾಂಕ ಖರ್ಗೆ, ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ಕುವೆಂಪು ಭಾಷಾ ಭಾರತಿ ಅಧ್ಯಕ್ಷ ಡಾ.ಕೆ.ಮರುಳಸಿದ್ಧಪ್ಪ, ಸಾಹಿತ್ಯ ಅಕಾಡಮಿ ಅಧ್ಯಕ್ಷ ಡಾ.ಅರವಿಂದ ಮಾಲಗತ್ತಿ, ಕಸಾಪ ಅಧ್ಯಕ್ಷ ಮನುಬಳಿಗಾರ್, ಸಾಹಿತಿಗಳಾದ ಪ್ರೊ. ಚಂದ್ರಶೇಖರ ಪಾಟೀಲ, ಡಾ. ಸಿದ್ಧಲಿಂಗಯ್ಯ, ಡಾ.ಬಿ.ಟಿ.ಲಲಿತಾ ನಾಯಕ್, ಜಿ.ಎನ್. ನರಸಿಂಹ ಮೂರ್ತಿ, ತಂತ್ರಾಂಶ ತಜ್ಞ ಬೇಳೂರು ಸುದರ್ಶನ, ಶ್ರೀನಿಧಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X