‘ಕುಮಾರಪರ್ವ’ ಜೆಡಿಎಸ್ ಸಮಾರಂಭ ಮುಂದೂಡಿಕೆ
ಬೆಂಗಳೂರು, ಅ.31: ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಲಿಂಗದೇವರಕೊಪ್ಪಲು ಎದುರು ಇರುವ ಆವರಣದಲ್ಲಿ ನ.3ರಂದು ಬೆಳಗ್ಗೆ 10.30ಕ್ಕೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ವತಿಯಿಂದ ಏರ್ಪಡಿಸಿದ್ದ ‘ಕುಮಾರಪರ್ವ-ಹೊಸ ಮನ್ವಂತರದ ಶುಭಾರಂಭ’ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ.
ಜೆಡಿಎಸ್ ಹಿರಿಯ ಉಪಾಧ್ಯಕ್ಷ, ಎಚ್.ಡಿ.ಕೋಟೆ ಕ್ಷೇತ್ರದ ಶಾಸಕ ಚಿಕ್ಕಮಾದು ಅನಾರೋಗ್ಯದಿಂದ ಬಳಲುತ್ತಿದ್ದು, ಆರೋಗ್ಯದ ಸ್ಥಿತಿ ಗಂಭೀರವಾಗಿರುವುದರಿಂದ ನ.3ರಂದು ಏರ್ಪಡಿಸಿದ್ದ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





