Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರ.: ಬಾಲಕನ ಸಾವಿಗೆ ಕಾರಣವಾಗಿ...

ಉ.ಪ್ರ.: ಬಾಲಕನ ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಕಾರು ಸಚಿವರದ್ದು!

ತನಿಖೆಯಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ1 Nov 2017 7:22 PM IST
share
ಉ.ಪ್ರ.: ಬಾಲಕನ ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಕಾರು ಸಚಿವರದ್ದು!

ಲಕ್ನೋ,ನ.1: ಗೊಂಡಾ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆ ಐದರ ಹರೆಯದ ಬಾಲಕನಿಗೆ ಢಿಕ್ಕಿ ಹೊಡೆದು ಆತ ಸ್ಥಳದಲ್ಲಿಯೇ ಸಾವನ್ನಪ್ಪಲು ಕಾರಣವಾಗಿ ಪರಾರಿಯಾಗಿದ್ದ ಕಾರು ಸಚಿವ ಓಂ ಪ್ರಕಾಶ ರಾಜಭರ್‌ಗೆ ಸೇರಿದ್ದು ಮತ್ತು ಅಪಘಾತ ಸಂಭವಿಸಿದಾಗ ಅವರು ಕಾರಿನಲ್ಲಿದ್ದರು ಎನ್ನುವುದು ಪೊಲೀಸರ ತನಿಖೆಯಿಂದ ಬಹಿರಂಗಗೊಂಡಿದ್ದು, ಇದು ಉತ್ತರ ಪ್ರದೇಶದ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರವನ್ನುಂಟು ಮಾಡಿದೆ.

ಗ್ರಾಮದ ರಸ್ತೆಬದಿಯಲ್ಲಿ ಆಟವಾಡುತ್ತಿದ್ದ ಬಾಲಕ ಶಿವ ಗೋಸ್ವಾಮಿಗೆ ಸಚಿವರು ಪ್ರಯಾಣಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿತ್ತು. ಆದರೆ ಅದು ಅಪಘಾತದ ಬಳಿಕ ಸಚಿವರ ಬೆಂಗಾವಲು ಕಾರುಗಳೊಂದಿಗೆ ಸ್ಥಳದಿಂದ ಪರಾರಿಯಾಗಿತ್ತು.

ಘಟನೆ ನಡೆದಾಗ ತಾನು ಆ ಸ್ಥಳದಿಂದ 25 ಕಿ.ಮೀ.ದೂರದಲ್ಲಿದ್ದೆ. ಘಟನಾ ಸ್ಥಳಕ್ಕೆ ಭೇಟಿ ನೀಡಲು ತಾನು ಬಯಸಿದ್ದೆನಾದರೂ ಪೊಲೀಸರು ಭದ್ರತೆಯ ಕಾರಣ ನೀಡಿ ತನ್ನನ್ನು ತಡೆದಿದ್ದರು ಎಂದು ರಾಜಭರ್ ಆಗ ಹೇಳಿಕೊಂಡಿದ್ದರು.

ಅಪಘಾತವೆಸಗಿದ್ದ ಕಾರಿನ ಮೇಲೆ ಹೂವಿನ ಎಸಳುಗಳಿದ್ದವು ಮತ್ತು ಸಚಿವರು ಕಾರುಗಳ ಪೈಕಿ ಒಂದರಲ್ಲಿದ್ದರು ಎಂದು ಬಾಲಕನ ಹೆತ್ತವರು ಹೇಳಿದ್ದರು. ಪೊಲೀಸರು ಸಚಿವರ ವಾಹನಗಳ ಸಾಲಿನಲ್ಲಿದ್ದ ಕಾರುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಿದಾಗ ಸಚಿವರು ಕುಳಿತಿದ್ದ ಕಾರು ಅಪಘಾತವೆಸಗಿದ್ದು ದೃಢಪಟ್ಟಿತ್ತು.

ಘಟನೆಯ ಬಳಿಕ ಬಂಧಿಸಲ್ಪಟ್ಟಿದ್ದ ಕಾರು ಚಾಲಕನೂ ಸಚಿವರು ಕಾರಿನಲ್ಲಿ ಇದ್ದರು ಎನ್ನುವುದನ್ನು ದೃಢಪಡಿಸಿದ್ದ. ಈ ಬಗ್ಗೆ ತನಿಖೆ ನಡೆಸುವಂತೆ ಮತ್ತು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪೊಲೀಸರಿಗೆ ಆದೇಶಿಸಿದ್ದರು.

ರಾಜಭರ್ ಈ ಹಿಂದೆ ಮಕ್ಕಳನ್ನು ಶಾಲೆಗೆ ಕಳುಹಿಸಲು ನಿರಾಕರಿಸುವ ಪೋಷಕರನ್ನು ಆಹಾರ ಮತ್ತು ನೀರೂ ಇಲ್ಲದೆ ಜೈಲಿನಲ್ಲಿ ಕೂಡಿಹಾಕುವುದಾಗಿ ಬೆದರಿಕೆಯೊಡ್ಡುವ ಮೂಲಕ ವಿವಾದವನ್ನು ಸೃಷ್ಟಿಸಿದ್ದರು. ಘಾಝಿಪುರ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಗೊಳಿಸದಿದ್ದರೆ ಸಂಪುಟಕ್ಕೆ ರಾಜೀನಾಮೆ ನೀಡುವುದಾಗಿಯೂ ಅವರು ಬೆದರಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X