Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದರೋಡೆ ಪ್ರಕರಣದ ಆರೋಪಿಗಳ ಬಂಧನ : 15.25...

ದರೋಡೆ ಪ್ರಕರಣದ ಆರೋಪಿಗಳ ಬಂಧನ : 15.25 ಲಕ್ಷ ನಗದು ವಶ

ವಾರ್ತಾಭಾರತಿವಾರ್ತಾಭಾರತಿ1 Nov 2017 10:26 PM IST
share
ದರೋಡೆ ಪ್ರಕರಣದ ಆರೋಪಿಗಳ ಬಂಧನ : 15.25 ಲಕ್ಷ ನಗದು ವಶ

ಮಂಡ್ಯ, ನ.1: ಮಳವಳ್ಳಿ ಪಟ್ಟಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳು ಹೊತ್ತೊಯ್ಯುತ್ತಿದ್ದ ಹಣ ಬೆಂಗಳೂರಿನಲ್ಲಿ ದರೋಡೆ ಮಾಡಿದ್ದ ಹಣ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಮಳವಳ್ಳಿ ಪಟ್ಟಣದಲ್ಲಿ ಅ.31ರಂದು ಬೆಳಗಿನ ಜಾವ ಅನುಮಾನಾಸ್ಪದವಾಗಿ ಹಣದ ಬ್ಯಾಗ್ ಹೊತ್ತು, ಗಸ್ತಿನಲ್ಲಿದ್ದ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಆರೋಪಿ ನಿತೀಶ್, ವಿಚಾರಣೆ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಬಾಯಿಬಿಟ್ಟಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ರಾಧಿಕಾ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಂಗಳೂರಿನ ಬಾಗಲುಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಜಾಲಹಳ್ಳಿ ಕ್ರಾಸ್ ಬಳಿ ಎಟಿಎಂಗೆ ಹಣ ತುಂಬಲು ತೆರಳುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಆರೋಪಿ ನಿತೀಶ್ ಮತ್ತೊಬ್ಬ ಆರೋಪಿ ರಾಕೇಶ್ ಜೊತೆ ಸೇರಿ ದರೋಡೆ ನಡೆಸಿದ್ದಾಗಿ ಅವರು ವಿವರಿಸಿದರು.

ಆರೋಪಿ ನಿತೀಶ್ ಬೆಂಗಳೂರಿನ ನಂದಿನಿ ಬಡಾವಣೆಯಲ್ಲಿ ವಾಸವಿದ್ದು, ಮೂಲತಃ ಮಳವಳ್ಳಿ ತಾಲೂಕಿನ ಬಾಣಗನಹಳ್ಳಿ ನಿವಾಸಿ. ಹಾಲಿ ಕಾರ್ ಚಾಲಕ. ಮತ್ತೊಬ್ಬ ಆರೋಪಿ ರಾಕೇಶ್ ನಂದಿನಿ ಬಡಾವಣೆಯಲ್ಲಿಯೇ ವಾಸವಾಗಿದ್ದು, ಮೂಲತಃ ನಾಗಮಂಗಲ ತಾಲೂಕು ಬೊಚ್ಚಿಕೊಪ್ಪಲು ನಿವಾಸಿ. ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಎಟಿಎಂಗೆ ಹಣ ತುಂಬುವ ಕೆಲಸ ಮಾಡುತ್ತಿದ್ದ.

ಅ.30ರಂದು ದರೋಡೆ ನಡೆಸಿ 31ರಂದು ಮಳವಳ್ಳಿಯಲ್ಲಿ ಸಿಕ್ಕಿಬಿದ್ದಿದ್ದ ನಿತೀಶ್, ಹಣದ ಮೊತ್ತ ಎಷ್ಟು ಹಾಗೂ ಅದರ ಮೂಲ ಯಾವುದು ಎಂಬ ಪೊಲೀಸರ ಪ್ರಶ್ನೆಗೆ ಸೂಕ್ತ ಉತ್ತರ ನೀಡಲಿಲ್ಲ. ಆತ ಹಣದ ಮೊತ್ತ ಎಷ್ಟಿದೆ ಎಂಬುದಕ್ಕೆ ನೀಡಿದ ಉತ್ತರ ಹಾಗು ಪೊಲೀಸರು ಎಣಿಸಿದ ನಂತರ ಗೊತ್ತಾದ ಹಣದ ಮೌಲ್ಯಕ್ಕೂ ಅಜಗಜಾಂತರ ವ್ಯತ್ಯಾಸ ಕಂಡುಬಂದಾಗ ಪ್ರಕರಣ ಬಯಲಿಗೆ ಬಂತೆಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ದರೋಡೆಗೊಳಗಾದ ಮೊತ್ತ 18,50,000 ರೂ.ಗಳಾಗಿದ್ದು, ಮಳವಳ್ಳಿಯಲ್ಲಿ ಬಂಧಿತರಾದ ಆರೋಪಿಗಳಿಂದ ವಶಪಡಿಸಿಕೊಂಡ ಮೊತ್ತ 15,25,800 ರೂ.ಗಳಾಗಿದೆ. ಮಳವಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇತರ ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಮಾರ್ಗದರ್ಶನದಲ್ಲಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸ್ ಇನ್ಸ್‍ಪೆಕ್ಟರ್ ಎಸ್.ಗಂಗಾಧರ್, ಸಿಬ್ಬಂದಿ ನಿಂಗಣ್ಣ, ಚಲುವಯ್ಯ, ಕೆ.ಎನ್.ಸಿದ್ದರಾಜು, ಅಂಜನಮೂರ್ತಿ, ಎಂ.ಡಿ.ಸತೀಶ್, ಎಸ್.ಡಿ.ಹರ್ಷವರ್ಧನ್, ಭಾನುಪ್ರಕಾಶ್, ಪ್ರಶಾಂತ್ ಕುಮಾರ್, ಸುನಿಲ್‍ಕುಮಾರ್ ಅವರನ್ನು ರಾಧಿಕಾ ಅವರು ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X