Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆಯ ಕೊಲೆ : ನಾಲ್ವರು ಆರೋಪಿಗಳ ಬಂಧನ

ಮಹಿಳೆಯ ಕೊಲೆ : ನಾಲ್ವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ2 Nov 2017 6:22 PM IST
share
ಮಹಿಳೆಯ ಕೊಲೆ : ನಾಲ್ವರು ಆರೋಪಿಗಳ ಬಂಧನ

ಸೊರಬ,ನ.2: ಮಹಿಳೆಯೋರ್ವಳ ಕೊಲೆಗೆ ಸಂಬಂಧಿಸಿದಂತೆ ನಾಲ್ವರನ್ನು ಸೊರಬ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಲತಾ (43) ಕೊಲೆಯಾದ ದುರ್ದೈವಿ. ಕೊಲೆಗೆ ಸಂಬಂಧಿಸಿದಂತೆ ಆನವಟ್ಟಿಯ ದ್ವಿಚಕ್ರ ವಾಹನದ ಶೋ ರೂಂ ಮಾಲೀಕ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಹೆಚ್.ಸಿ.ಬಸವರಾಜ (45), ತಲ್ಲೂರು ಗ್ರಾಮದ ನಂದೀಶ್ವರ ನಾಯ್ಕ್ (40), ಹಾನಗಲ್ ತಾಲ್ಲೂಕಿನ ಇನಾಂಲಕ್ಮಾಪುರ ಗ್ರಾಮದ ಬಸವರಾಜ (29), ಹಾಗೂ ಎಣ್ಣೆಕೊಪ್ಪ ಗ್ರಾಮದ ಅರುಣ ಕುಮಾರ (35) ಬಂಧಿತ ಕೊಲೆ ಆರೋಪಿಗಳು.

ಆರೋಪಿಗಳ ವಿರುದ್ಧ ಸೆಕ್ಷನ್ 301 ಹಾಗೂ 201ರ ಅಡಿಯಲ್ಲಿ ಕೇಸ್ ದಾಖಲಿಸಿ, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 
ಕೃತ್ಯಕ್ಕೆ ಬಳಸಿದ ವಾಹನಗಳು ಹಾಗೂ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ.

ಕಳೆದ ಅಕ್ಟೋಬರ್ 8 ರಂದು ಸಂಪಗೋಡು ಅರಣ್ಯದ ಪ್ರದೇಶದಲ್ಲಿ ಕೊಲೆಗೀಡಾದ ಮಹಿಳೆಯೋರ್ವರ ಶವ ಪತ್ತೆಯಾಗಿತ್ತು. ಮೃತರ ವಿವರಗಳು ಪೊಲೀಸರಿಗೆ ಲಭ್ಯವಾಗಿರಲಿಲ್ಲ. ಕೊಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದಾಗ, ಕೊಲೆಗೀಡಾದ ಮಹಿಳೆಯು ಆನವಟ್ಟಿ ಸಮೀಪದ ವಿಠಲಾಪುರ ಗ್ರಾಮದ ನಿವಾಸಿ ಲತಾ (43) ಎಂಬುವುದು ಬೆಳಕಿಗೆ ಬಂದಿತ್ತು. 

ಸಿದ್ದಾಪುರ ತಾಲೂಕಿನ ಯುವಕನೋರ್ವನೊಂದಿಗೆ ಲತಾರವರ ವಿವಾಹವಾಗಿತ್ತು. ಆದರೆ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಪತಿ ತೊರೆದು ಬಂದಿದ್ದ ಲತಾ, ಮತ್ತೆ ವಿಠಲಾಪುರ ಗ್ರಾಮದಲ್ಲಿಯೇ ವಾಸಿಸುತ್ತಿದ್ದಳು. ಈ ನಡುವೆ ಅವರಿಗೆ ಗುತ್ತಿಗೆದಾರ, ಆನವಟ್ಟಿಯ ಬೈಕ್ ಶೋ ರೂಂ ಮಾಲೀಕ ಬಸವರಾಜ್‍ರವರ ಪರಿಚಯವಾಗಿತ್ತು. ಇಬ್ಬರ ನಡುವೆ ಅನೈತಿಕ ಸಂಬಂಧ ಏರ್ಪಟ್ಟಿತ್ತು. 

ಇತ್ತೀಚೆಗೆ ಲತಾಳು, ಹಣ-ಆಸ್ತಿಪಾಸ್ತಿ ಕೊಡುವಂತೆ ಬಸವರಾಜ್‍ಗೆ ಒತ್ತಾಯಿಸುತ್ತಿದ್ದಳು. ಇಲ್ಲದಿದ್ದರೆ ನಿಮ್ಮ ಮನೆಗೆ ಆಗಮಿಸಿ ವಾಸಿಸುವುದಾಗಿ, ನಮ್ಮಿಬ್ಬರ ನಡುವಿನ ಸಂಬಂಧ ಎಲ್ಲರಿಗೂ ತಿಳಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಇದರಿಂದ ಆಕ್ರೋಶಗೊಂಡ ಬಸವರಾಜ್, ಲತಾಳ ಹತ್ಯೆ ನಡೆಸುವ ನಿರ್ಧಾರ ಮಾಡಿದ್ದ. 

ಸುಫಾರಿ: ಅದರಂತೆ ಬಸವರಾಜ್‍ನು ಸುಫಾರಿ ಹಂತಕರಾದ ನಂದೀಶ್‍ನಾಯ್ಕ್ ಹಾಗೂ ಅರುಣ್‍ಕುಮಾರ್‍ರವರನ್ನು ಭೇಟಿಯಾಗಿ ಲತಾಳ ಹತ್ಯೆ ನಡೆಸುವುದಕ್ಕೆ ಸುಫಾರಿ ಕೊಟ್ಟಿದ್ದ. ಹಂತಕರಿಗೆ 2 ಲಕ್ಷ ರೂ. ಪಾವತಿಸಿದ್ದ. ಪೂರ್ವ ನಿರ್ಧರಿತ ಸಂಚಿನಂತೆ ಬಸವರಾಜ್‍ನು ಅಕ್ಟೋಬರ್ 6 ರಂದು ಲತಾಳನ್ನು ನಂಬಿಸಿ ಕಾರಿನಲ್ಲಿ ಬನವಾಸಿಗೆ ಕರೆದೊಯ್ದಿದ್ದ. ಈ ವೇಳೆ ತನ್ನ ಶೋ ರೂಂನಲ್ಲಿ ಕೆಲಸ ಮಾಡುವ ಬಸವರಾಜ್ ಎಂಬಾತನನ್ನು ಕರೆತಂದಿದ್ದ. 

ಬಸವರಾಜ್ ಸೂಚನೆಯಂತೆ ಈರ್ವರು ಹಂತಕರು ಬೈಕ್‍ನಲ್ಲಿ ಕಾರನ್ನು ಹಿಂಬಾಲಿಸುತ್ತಿದ್ದರು. ಸಂಪಗೋಡು ಬಳಿ ಕಾರು ನಿಲ್ಲಿಸಿ ಅರಣ್ಯದೊಳಗೆ ಲತಾಳನ್ನು ಬಸವರಾಜ್ ಕರೆದೊಯ್ದಿದ್ದ. ಹಂತಕರು ಕೂಡ ಬೈಕ್ ನಿಲ್ಲಿಸಿ ಅರಣ್ಯದೊಳಗೆ ತೆರಳಿದ್ದರು. ಬಸವರಾಜ್ ಸೂಚನೆಯಂತೆ ಆರೋಪಿಗಳಿಬ್ಬರು ರಾಡ್‍ನಿಂದ ಲತಾಳ ತಲೆಗೆ ಹೊಡೆದು ಹತ್ಯೆ ಮಾಡಿದ್ದರು. ನಂತರ ಎಲ್ಲರೂ ಸ್ಥಳದಿಂದ ಕಾಲ್ಕಿತ್ತಿದ್ದರು. 

ಈ ಎಲ್ಲ ಆರೋಪಿಗಳು ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಆರಾಮಾಗಿ ಓಡಾಡಿಕೊಂಡಿದ್ದರು. ಮತ್ತೊಂದು ಕಡೆ ಪೊಲೀಸರು ಲತಾ ಬಳಸುತ್ತಿದ್ದ ಮೊಬೈಲ್ ನಂಬರ್ ಜಾಡು ಹಿಡಿದು ತನಿಖೆ ನಡೆಸುತ್ತಿದ್ದ ವೇಳೆ ಬಸವರಾಜ್‍ನು ಲತಾಳೊಂದಿಗೆ ಮೊಬೈಲ್ ಸಂಪರ್ಕದಲ್ಲಿದ್ದುದು ಗೊತ್ತಾಗಿದೆ. ಆಪಾದಿತರಿಗೆ ಗೊತ್ತಾಗದಂತೆ ಅವರ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದ ಪೊಲೀಸರು, ಎಲ್ಲರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹತ್ಯೆಯ ಬಗ್ಗೆ ಬಾಯ್ಬಿಟ್ಟಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X