Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಡಿಗಾಸು ನೀಡುವುದಿಲ್ಲ ಎಂದು ರಾಜ್ಯಕ್ಕೆ...

ಬಿಡಿಗಾಸು ನೀಡುವುದಿಲ್ಲ ಎಂದು ರಾಜ್ಯಕ್ಕೆ ಅಪಮಾನ ಮಾಡಿದ ನರೇಂದ್ರ ಮೋದಿ: ದಿನೇಶ್‌ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ2 Nov 2017 8:37 PM IST
share
ಬಿಡಿಗಾಸು ನೀಡುವುದಿಲ್ಲ ಎಂದು ರಾಜ್ಯಕ್ಕೆ ಅಪಮಾನ ಮಾಡಿದ ನರೇಂದ್ರ ಮೋದಿ: ದಿನೇಶ್‌ ಗುಂಡೂರಾವ್

ಬೆಂಗಳೂರು, ನ.2: ರಾಜ್ಯಕ್ಕೆ ಇನ್ನು ಮುಂದೆ ಬಿಡಿಗಾಸು ನೀಡುವುದಿಲ್ಲ ಎನ್ನುವ ಮೂಲಕ ಪ್ರಧಾನಿ ನರೇಂದ್ರಮೋದಿ ಕನ್ನಡಿಗರಿಗೆ ಧಮಕಿ ಹಾಕಿದ್ದಾರೆ. ಇದರಿಂದ ರಾಜ್ಯಕ್ಕೆ ಅಪಮಾನವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಥವಾ ರಾಜ್ಯಾಧ್ಯಕ್ಷ ಯಡಿಯೂರಪ್ಪ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರಕಾರ ನಮಗೆ ಭಿಕ್ಷೆ ಕೊಡಬೇಕಿಲ್ಲ, ನಾವು ಭಿಕ್ಷುಕರಲ್ಲ. ಕೇಂದ್ರದ ಮುಂದೆ ಕೈ ಚಾಚಿ ನಿಲ್ಲಬೇಕಿಲ್ಲ, ಅದು ನಮ್ಮ ಹಕ್ಕು. ಅವರೇನು ನಮಗೆ ವಿಶೇಷ ಅನುದಾನ ನೀಡಿಲ್ಲ. ಬರ ಪರಿಹಾರಕ್ಕೆ ಮಹಾರಾಷ್ಟ್ರ ಹಾಗೂ ಗುಜರಾತ್‌ಗಿಂತ ಕಡಿಮೆ ಅನುದಾನ ನೀಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರಕಾರಕ್ಕೆ ಕೇಂದ್ರ ಸರಕಾರ ನೀಡಿರುವ ಅನುದಾನದ ವಿವರಗಳನ್ನು ಕೇಳಲು ಅಮಿತ್ ಶಾ ಯಾರು? ಪ್ರಧಾನಮಂತ್ರಿ ಅಥವಾ ಕೇಂದ್ರ ಹಣಕಾಸು ಸಚಿವರು ಅನುದಾನದ ಬಗ್ಗೆ ಕೇಳಲಿ. ಕೇಂದ್ರದಿಂದ ಅನುದಾನ ಪಡೆಯುವುದು ನಮ್ಮ ಹಕ್ಕು. ಅಮಿತ್‌ಶಾಗೆ ಸಂವಿಧಾನದ ಬಗ್ಗೆ ಅರಿವಿಲ್ಲ ಎಂದು ದಿನೇಶ್‌ಗುಂಡೂರಾವ್ ಕಿಡಿಗಾರಿದರು.

 ರೈಲ್ವೆ ಯೋಜನೆಗಳಿಗೆ ಶೇ.50ರಷ್ಟು ಅನುದಾನ ಹಾಗೂ ಭೂಮಿಯನ್ನು ಉಚಿತವಾಗಿ ರಾಜ್ಯ ಸರಕಾರ ನೀಡುತ್ತದೆ. ಪ್ರಧಾನಿ ನರೇಂದ್ರಮೋದಿ ಭಾಗವಹಿಸಿದ್ದ ಬೀದರ್-ಕಲಬುರಗಿ ನಡುವಿನ ರೈಲು ಸಂಚಾರದ ಲೋಕಾರ್ಪಣೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸರಿಯಾಗಿ ಆಹ್ವಾನವನ್ನು ನೀಡಿಲ್ಲ. ಬಿಜೆಪಿಯವರು ಸಂಸದೀಯ ತತ್ವಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಅಮಿತ್ ಶಾ ಈ ಸಮಾರಂಭದಲ್ಲಿ ರಣಕಹಳೆ ಮೊಳಗಿಸುತ್ತಾರೆ, ಯಾವುದೋ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸುತ್ತಾರೆ ಎಂದುಕೊಂಡಿದ್ದೆವು. ಆದರೆ, ನಿರೀಕ್ಷೆ ಹುಸಿಯಾಗಿದೆ. ಬಿಜೆಪಿ ಕಾರ್ಯಕರ್ತರೇ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಬಿಜೆಪಿಯವರ ನಕಾರಾತ್ಮಕ ಧೋರಣೆ ಇದಕ್ಕೆ ಕಾರಣ ಎಂದು ದಿನೇಶ್‌ಗುಂಡೂರಾವ್ ಟೀಕಿಸಿದರು.

ರಾಷ್ಟ್ರೀಯ ಪಕ್ಷವೊಂದರ ಚುನಾವಣಾ ಪ್ರಚಾರ ಚಾಲನಾ ಸಭೆ, ಈ ಹಿಂದೆ ಯಾವತ್ತೂ ಈ ರೀತಿ ಫ್ಲಾಪ್ ಆಗಿರಲಿಲ್ಲ. ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಕಡಿಮೆ ಆಗಿರುವುದಕ್ಕೆ ಇದೇ ಉದಾಹರಣೆ. ಇದು ರಾಜ್ಯದ ಪರಿವರ್ತನೆ ಅಲ್ಲ, ಬಿಜೆಪಿ ನಾಯಕರ ಪರಿವರ್ತನೆ ಅಂತ ಹೇಳಬಹುದು. ಪಶ್ಚಾತ್ತಾಪ ಯಾತ್ರೆ ಮಾಡಿದರೆ ಜನ ಅವರ ಕಡೆ ನೋಡಬಹುದು ಎಂದು ಅವರು ವ್ಯಂಗ್ಯವಾಡಿದರು.

ಅಮಿತ್ ಶಾ ಹಾಗೂ ಯಡಿಯೂರಪ್ಪ ನಡುವೆ ಕೆಲವು ವಿಷಯಗಳಲ್ಲಿ ಸಾಮ್ಯತೆಯಿದೆ. ಇಬ್ಬರು ಜೈಲಿಗೆ ಹೋಗಿ ಬಂದವರು ಎಂದು ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದರು.

ಅಮಿತ್ ಶಾ ಯಾರು?

ರಾಜ್ಯ ಸರಕಾರಕ್ಕೆ ಕನ್ನಡ ರಾಜ್ಯೋತ್ಸವಕ್ಕಿಂತಲೂ ಟಿಪ್ಪು ಜಯಂತಿ ಮೇಲೆ ಆಸಕ್ತಿ ಹೆಚ್ಚು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್, ಕನ್ನಡದ ಬಗ್ಗೆ ಪ್ರಶ್ನೆ ಮಾಡಲು ಅಮಿತ್ ಶಾ ಯಾರೂ ಎಂದು ತಿರುಗೇಟು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X