Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ: ಮಹಾರಾಷ್ಟ್ರ ವಿರುದ್ಧ ಕರ್ನಾಟಕ...

ರಣಜಿ: ಮಹಾರಾಷ್ಟ್ರ ವಿರುದ್ಧ ಕರ್ನಾಟಕ ಮೇಲುಗೈ

ಮಾಯಾಂಕ್ ದ್ವಿಶತಕ, ಸಮರ್ಥ್ ಶತಕ

ವಾರ್ತಾಭಾರತಿವಾರ್ತಾಭಾರತಿ2 Nov 2017 11:49 PM IST
share
ರಣಜಿ: ಮಹಾರಾಷ್ಟ್ರ ವಿರುದ್ಧ ಕರ್ನಾಟಕ ಮೇಲುಗೈ

ಪುಣೆ, ನ.2: ಆರಂಭಿಕ ಆಟಗಾರರಾದ ಮಾಯಾಂಕ್ ಅಗರವಾಲ್ ದ್ವಿಶತಕ(ಅಜೇಯ 219) ಹಾಗೂ ರವಿಕುಮಾರ್ ಸಮರ್ಥ್(129) ಶತಕದ ಬೆಂಬಲದ ನೆರವಿನಿಂದ ಕರ್ನಾಟಕ ತಂಡ ರಣಜಿ ಟ್ರೋಫಿ ‘ಎ’ ಗುಂಪಿನ ಪಂದ್ಯದಲ್ಲಿ ಆತಿಥೇಯ ಮಹಾರಾಷ್ಟ್ರದ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸಿದೆ.

ಎರಡನೆ ದಿನವಾದ ಗುರುವಾರ ವಿಕೆಟ್‌ನಷ್ಟವಿಲ್ಲದೆ 117 ರನ್‌ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಕರ್ನಾಟಕ 125 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 461 ರನ್ ಗಳಿಸಿದ್ದು ಒಟ್ಟು 216 ರನ್ ಮುನ್ನಡೆಯಲ್ಲಿದೆ.

ಮೊದಲ ವಿಕೆಟ್‌ಗೆ 259 ರನ್ ಜೊತೆಯಾಟ ನಡೆಸಿದ ಅಗರವಾಲ್(ಅಜೇಯ 219,373 ಎಸೆತ, 25 ಬೌಂಡರಿ,2 ಸಿಕ್ಸರ್) ಹಾಗೂ ಆರ್.ಸಮರ್ಥ್(129 ರನ್, 219 ಎಸೆತ, 17 ಬೌಂಡರಿ) ಕರ್ನಾಟಕ ಇನಿಂಗ್ಸ್‌ಗೆ ಭದ್ರಬುನಾದಿ ಹಾಕಿಕೊಟ್ಟರು.

ಮೂರು ಪಂದ್ಯಗಳಲ್ಲಿ ಎರಡನೆ ಶತಕ ಸಿಡಿಸಿದ ಸಮರ್ಥ್ ಅವರು ಸ್ವಪ್ನಿಲ್ ಗುಗಾಲೆಗೆ ವಿಕೆಟ್ ಒಪ್ಪಿಸಿದರು. ದೇಗಾ ನಿಶ್ಚಲ್(16) ಬೇಗನೆ ಔಟಾದರು. ಆಗ ಕರುಣ್ ನಾಯರ್(ಅಜೇಯ 56,121 ಎಸೆತ, 6 ಬೌಂಡರಿ) ಅವರೊಂದಿಗೆ ಕೈಜೋಡಿಸಿದ ಅಗರವಾಲ್ 3ನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 142 ರನ್ ಜೊತೆಯಾಟ ನಡೆಸಿದರು. ಕರ್ನಾಟಕವನ್ನು ಬೃಹತ್ ಮುನ್ನಡೆಯತ್ತ ಮುನ್ನಡೆಸಿದರು.

 ಕರ್ನಾಟಕದ ಆರಂಭಿಕ ಜೋಡಿ ಸಮರ್ಥ್-ಅಗರವಾಲ್‌ರನ್ನು ಬೇರ್ಪಡಿಸಲು ಮಹಾರಾಷ್ಟ್ರ ಶತ ಪ್ರಯತ್ನ ನಡೆಸಿದ್ದು ಏಳು ಬೌಲರ್‌ಗಳನ್ನು ದಾಳಿಗಿಳಿಸಿತ್ತು. 67ನೆ ಓವರ್‌ನಲ್ಲಿ ಸ್ವಪ್ನಿಲ್ ಈ ಜೋಡಿಯನ್ನು ಬೇರ್ಪಡಿಸಿದರು.

ಮೊದಲ ದಿನವಾದ ಬುಧವಾರ ಮಹಾರಾಷ್ಟ್ರ ತಂಡ ಕರ್ನಾಟಕದ ನಾಯಕ ವಿನಯಕುಮಾರ್ ದಾಳಿಗೆ ತತ್ತರಿಸಿ ಮೊದಲ ಇನಿಂಗ್ಸ್‌ನಲ್ಲಿ 245 ರನ್ ಗಳಿಸಿ ಆಲೌಟಾಗಿತ್ತು.

ಸಂಕ್ಷಿಪ್ತ ಸ್ಕೋರ್

►ಮಹಾರಾಷ್ಟ್ರ ಮೊದಲ ಇನಿಂಗ್ಸ್: 55 ಓವರ್‌ಗಳಲ್ಲಿ 245/10

►ಕರ್ನಾಟಕ ಮೊದಲ ಇನಿಂಗ್ಸ್: 125 ಓವರ್‌ಗಳಲ್ಲಿ 461/2

 (ಮಾಯಾಂಕ್ ಅಗರವಾಲ್ ಅಜೇಯ 219, ಆರ್.ಸಮರ್ಥ್ 129, ಕರುಣ್ ನಾಯರ್ ಅಜೇಯ 56,ಸ್ವಪ್ನಿಲ್ 1-32, ಚಿರಾಗ್ ಖುರಾನ 1-104)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X