Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿನ್ನಾ ಹೌಸ್‌ಗಾಗಿ ಮುಂಬೈ ಹೈಕೋರ್ಟ್ ...

ಜಿನ್ನಾ ಹೌಸ್‌ಗಾಗಿ ಮುಂಬೈ ಹೈಕೋರ್ಟ್ ಮೆಟ್ಟಿಲನ್ನೇರಿದ್ದ ದೀನಾ ವಾಡಿಯಾ

ವಾರ್ತಾಭಾರತಿವಾರ್ತಾಭಾರತಿ3 Nov 2017 5:59 PM IST
share
ಜಿನ್ನಾ ಹೌಸ್‌ಗಾಗಿ ಮುಂಬೈ ಹೈಕೋರ್ಟ್  ಮೆಟ್ಟಿಲನ್ನೇರಿದ್ದ ದೀನಾ ವಾಡಿಯಾ

ಮುಂಬೈ,ನ.3: ಗುರುವಾರ ನ್ಯೂಯಾರ್ಕ್‌ನಲ್ಲಿ ನಿಧನರಾದ, ಪಾಕಿಸ್ತಾನದ ಸ್ಥಾಪಕ ಮುಹಮ್ಮದ್ ಅಲಿ ಜಿನ್ನಾ ಅವರ ಪುತ್ರಿ ದೀನಾ ವಾಡಿಯಾ(98) ಅವರು ಇಲ್ಲಿಯ ಮಲಬಾರ್ ಹಿಲ್‌ನಲ್ಲಿರುವ ಜಿನ್ನಾ ಅವರ ವೈಭವೋಪೇತ ಬಂಗಲೆಯ ಒಡೆತನಕ್ಕಾಗಿ ಭಾರತ ಸರಕಾರದೊಡನೆ ಸುದೀರ್ಘ ಕಾನೂನು ಸಮರವನ್ನು ನಡೆಸಿದ್ದರು. ಈ ಪ್ರಕರಣವಿನ್ನೂ ಮುಂಬೈ ಉಚ್ಚ ನ್ಯಾಯಾಲಯದಲ್ಲಿ ಅಂತಿಮ ವಿಚಾರಣೆಗಾಗಿ ಬಾಕಿಯುಳಿದಿದೆ.

ಮೂಲತಃ ಸೌಥ್ ಕೋರ್ಟ್ ಎಂದು ಕರೆಯಲ್ಪಡುತ್ತಿದ್ದ ಅರಮನೆಸದೃಶ ‘ಜಿನ್ನಾ ಹೌಸ್’ ವಿಭಜನೆಗೆ ಮುನ್ನ ಮುಸ್ಲಿಂ ಲೀಗ್‌ನ ಹಲವಾರು ಸಭೆಗಳು ಹಾಗೂ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ಜಿನ್ನಾ ಅವರ ನಡುವಿನ ನಿರ್ಣಾಯಕ ಮಾತುಕತೆಗಳಿಗೆ ಸಾಕ್ಷಿಯಾಗಿತ್ತು.

1919,ಆಗಸ್ಟ್‌ನಲ್ಲಿ ಲಂಡನ್‌ನಲ್ಲಿ ಜಿನ್ನಾ ಅವರ ಪಾರ್ಸಿ ಪತ್ನಿ ರತನ್‌ಬಾಯಿ ಪೆಟಿಟ್ ಅವರಿಗೆ ಜನಿಸಿದ್ದ ದೀನಾ ಯುರೋಪಿಯನ್ ವಾಸ್ತುಶೈಲಿಯನ್ನು ಹೊಂದಿದ್ದ ತನ್ನ ತಂದೆಯ ಬಂಗಲೆಯನ್ನು ಸೌಥ್ ಕೋರ್ಟ್ ಎಂದು ಕರೆಯಬೇಕೆಂದು ಒತ್ತಾಯಿಸಿದ್ದರು.

2007ರಲ್ಲಿ ಪಾಕಿಸ್ತಾನದ ಆಗಿನ ಅಧ್ಯಕ್ಷ ಪರ್ವೇಝ್ ಮುಷಾರಫ್ ಅವರು ಜಿನ್ನಾ ಹೌಸ್‌ನ್ನು ವಶಕ್ಕೆ ಪಡೆದುಕೊಂಡು ಅದನ್ನು ತನ್ನ ರಾಷ್ಟ್ರದ ದೂತಾವಾಸವನ್ನಾಗಿ ಪರಿವರ್ತಿಸಲು ಬಯಸಿದ್ದರು.

ಅದೇ ವರ್ಷದ ಆಗಸ್ಟ್‌ನಲ್ಲಿ ಆಗ 88 ವರ್ಷ ಪ್ರಾಯವಾಗಿದ್ದ ದೀನಾ ತಾನು ಜಿನ್ನಾ ಅವರ ಏಕೈಕ ವಾರಸುದಾರಳಾಗಿರುವುದರಿಂದ ಬಂಗಲೆಯ ಒಡೆತನವನ್ನು ತನಗೆ ಹಸ್ತಾಂತರಿಸುವಂತೆ ಕೋರಿ ಮುಂಬೈ ಉಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು.

ಹಲವಾರು ವರ್ಷಗಳ ಕಾಲ ಮುಂಬೈನಲ್ಲಿ ವಾಸವಾಗಿದ್ದ ದೀನಾ ಕಳೆದ ಕೆಲವು ದಶಕಗಳಿಂದ ಅಮೆರಿಕದಲ್ಲಿ ನೆಲೆಸಿದ್ದರು. ತನ್ನ ಬದುಕಿನ ಉಳಿದ ದಿನಗಳನ್ನು ತಾನು ಬಾಲ್ಯವನ್ನು ಕಳೆದಿದ್ದ ಜಿನ್ನಾ ಹೌಸ್‌ನಲ್ಲಿ ಕಳೆಯುವ ಬಯಕೆಯನ್ನು ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ವ್ಯಕ್ತಪಡಿಸಿದ್ದರು.

ತನ್ನ ತಂದೆಯು ಯಾವುದೇ ಉಯಿಲು ಬರೆಯದೆ ನಿಧನರಾಗಿದ್ದರಿಂದ ಜಿನ್ನಾ ಹೌಸ್‌ನ್ನು ‘ಸ್ಥಳಾಂತರಗೊಂಡವರ ಆಸ್ತಿ’ ಎಂದು ವರ್ಗೀಕರಿಸುವಂತಿಲ್ಲ ಎಂದೂ ದೀನಾ ಅರ್ಜಿಯಲ್ಲಿ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X