Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಚಾಂಪಿಯನ್...

​ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಪಂದ್ಯ ಉದ್ಘಾಟನೆಗೆ ಸಿದ್ಧತೆ ಪೂರ್ಣ- ಕವಿತಾ ಸನಿಲ್‌

ವಾರ್ತಾಭಾರತಿವಾರ್ತಾಭಾರತಿ3 Nov 2017 8:14 PM IST
share
​ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಪಂದ್ಯ ಉದ್ಘಾಟನೆಗೆ ಸಿದ್ಧತೆ ಪೂರ್ಣ- ಕವಿತಾ ಸನಿಲ್‌

ಮಂಗಳೂರು, ನ.3:ನಗರದ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಡೋಜೋ ಇದರ ವತಿಯಿಂದ ನ. 4ಮತ್ತು 5ರಂದು ರಾಷ್ಟಮಟ್ಟದ ಮುಕ್ತ ಕರಾಟೆ ಪಂದ್ಯ ‘ಇಂಡಿಯನ್ ಕರಾಟೆ ಚಾಂಪಿಯನ್‌ಶಿಪ್ -2017’ ನೆಹರೂ ಮೈದಾನದಲ್ಲಿ ನಡೆಯಲಿರುವ ಪಂದ್ಯದ ಸಿದ್ಧತೆ ಬಹುತೇಕ ಪೂರ್ಣಗೊಂಡಿದೆ ಎಂದು ಮನಪಾ ಮೇಯರ್ ಹಾಗೂ ಕರಾಟೆ ಪಂದ್ಯದ ಸಂಘಟಕಿ ಕವಿತಾ ಸನಿಲ್ ಹಾಗೂ ಸಂಸ್ಥೆಯ ಸ್ಥಾಪಕಾಧ್ಯಕ್ಷ ಎ.ಸದಾನಂದ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ 9.30ಕ್ಕೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯ ಮಂತ್ರಿ ಆಗಮಿಸಿಲಿದ್ದಾರೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಲೋಕೋಪಯೋಗಿ ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಡಾ.ಎಚ್.ಸಿ .ಮಹಾದೇವಪ್ಪ, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯು.ಟಿ.ಖಾದರ್ ಸಂಸದ ನಳಿನ್ ಕುಮಾರ್ ಕಟೀಲ್, ಸರಕಾರದ ಮುಖ್ಯ ಸಚೇತಕ ಐವನ್ ಡಿ ಸೋಜ ಶಾಸಕ ಜೆ.ಆರ್.ಲೋಬೊ, ಶಾಸಕ ಬಿ.ಎ.ಮೊಯ್ದಿನ್ ಬಾವ, ಶಕುಂತಳಾ ಶೆಟ್ಟಿ ಮೊದಲಾದ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಈ ರೀತಿಯ ನಾಲ್ಕು ರಿಂಗ್‌ಗಳನ್ನೊಳಗೊಂಡ ಹೊರಾಂಗಣದಲ್ಲಿ ನಡೆಯುವ ರಾಷ್ಟ್ರಮಟ್ಟದ ಮುಕ್ತ ಕರಾಟೆ ಕ್ರೀಡಾಕೂಟವಾಗಿದೆ. ಈ ಕ್ರೀಡಾ ಕೂಟದಲ್ಲಿ ಹನ್ನೆರಡಕ್ಕೂ ಹೆಚ್ಚು ರಾಜ್ಯಗಳಿಂದ 1200ಕ್ಕೂ ಅಧಿಕ ಕರಾಟೆಪಟುಗಳು ಭಾಗವಹಿಸಲಿದ್ದಾರೆ. ಈಗಾಗಲೇ 500 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ನ.5ರಂದು ಸಂಜೆ 7.30ಕ್ಕೆ ಸಮಾರೋಪ ನಡೆಯಲಿದೆ. ಡಿಜಿಟಲ್ ಸ್ಕೋರ್ ಬೋರ್ಡ್ ಬಳಕೆ ಹಾಗೂ ಅಂತರಾಷ್ಟ್ರೀಯ ದರ್ಜೆಯ ಕರಾಟೆ ರಿಂಗನ್ನು ನಿರ್ಮಿಸಿ ಸ್ಫರ್ಧೆ ನಡೆಸಲಾಗುವುದು. ರಾಷ್ಟ್ರಮಟ್ಟದ ಈ ಕ್ರೀಡಾ ಕೂಟದಲ್ಲಿ ಸೆಲ್ಫ್ ಡಿಫೆನ್ಸ್ ಇಂಡಿಯನ್ ಕರಾಟೆಯ ಸ್ಕೂಲ್‌ನ ಸ್ಥಾಪಕ ಗ್ರಾಂಡ್ ಮಾಸ್ಟರ್‌ಬಿ.ಎಂ.ನರಸಿಂಹನ್, ಮಲೇಶಿಯಾದ ವಸಂತನ್ ತಾಂತ್ರಿಕ ಸಲಹೆಗಾರರಾಗಿ ಹಾಗೂ ಶ್ರೀನಿವಾಸ್ ಎಂ ಪಂದ್ಯದ ಪ್ರಧಾನ ತೀರ್ಪುಗಾರರಾಗಿ ಭಾಗವಹಿಸಲಿದ್ದಾರೆ ಎಂದು ಕವಿತಾ ಸನಿಲ್ ತಿಳಿಸಿದ್ದಾರೆ.

108ವಿವಿಧ ವಿಭಾಗಗಳಲ್ಲಿ ನಡೆಯುವ ಸ್ಫರ್ಧೆಯಲ್ಲಿ ಕಟಾ ಮತ್ತು ಕುಮಿಟೆ ವಿಭಾಗಗಳಲ್ಲಿ ವೈಯಕ್ತಿಕ ಹಾಗೂ ಗುಂಪುಗಳ ನಡುವೆ ಸ್ಫರ್ಧೆ ನಡೆಯಲಿದೆ ಎಂದು ಸಂಘಟಕರಾದ ಮನೀಶ್ ಆಚಾರ್ಯ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಸಂಘಟನೆಯ ದ. ಕ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸುರೇಂದ್ರ, ಕಾರ್ಯದರ್ಶಿ ಮನಿಶ್, ತಾಂತ್ರಿಕ ನಿರ್ದೇಶಕ ಸುರೇಶ್ ಶೆಟ್ಟಿ , ಸಂಘಟಕರು ಮತ್ತು ಮನಪಾ ಮೇಯರ್ ಕವಿತಾ ಸನಿಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X