Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಷ್ಯಾಕಪ್ ಹಾಕಿ: ಭಾರತದ ಮಹಿಳಾ ತಂಡ...

ಏಷ್ಯಾಕಪ್ ಹಾಕಿ: ಭಾರತದ ಮಹಿಳಾ ತಂಡ ಫೈನಲ್‌ಗೆ

ಗುರ್ಜಿಂಗ್ ಸಿಂಗ್ ಅವಳಿ ಗೋಲು: ಜಪಾನ್ ವಿರುದ್ಧ ಜಯ

ವಾರ್ತಾಭಾರತಿವಾರ್ತಾಭಾರತಿ3 Nov 2017 8:20 PM IST
share
ಏಷ್ಯಾಕಪ್ ಹಾಕಿ: ಭಾರತದ ಮಹಿಳಾ ತಂಡ ಫೈನಲ್‌ಗೆ

ಟೋಕಿಯೊ, ನ.3: ಹಾಲಿ ಚಾಂಪಿಯನ್ ಜಪಾನ್ ತಂಡವನ್ನು 4-2 ಗೋಲುಗಳ ಅಂತರದಿಂದ ಮಣಿಸಿದ ಭಾರತದ ಮಹಿಳಾ ಹಾಕಿ ತಂಡ 9ನೆ ಆವೃತ್ತಿಯ ಏಷ್ಯಾಕಪ್‌ನಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಶುಕ್ರವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಗುರ್ಜಿತ್ ಕೌರ್ ಅವಳಿ ಗೋಲು(7ನೆ,10ನೆ ನಿಮಿಷ), ನವಜೋತ್ ಕೌರ್(9ನೆ ನಿಮಿಷ) ಹಾಗೂ ಲಾಲ್‌ರೆಮ್‌ಸಿಯಾಮಿ(38ನೆ ನಿಮಿಷ)ತಲಾ ಒಂದು ಗೋಲು ನೆರವಿನಿಂದ ಆತಿಥೇಯ ಜಪಾನ್ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಭಾರತ ಪ್ರಶಸ್ತಿ ಸುತ್ತಿಗೆ ತಲುಪಿತು.

 ನಾಲ್ಕನೆ ಬಾರಿ ಏಷ್ಯಾಕಪ್ ಫೈನಲ್‌ಗೆ ತಲುಪಿರುವ ರಾಣಿ ರಾಂಪಾಲ್ ನೇತೃತ್ವದ ಭಾರತ ರವಿವಾರ ಚೀನಾ ತಂಡವನ್ನು ಎದುರಿಸಲಿದೆ. ಭಾರತ 2004ರಲ್ಲಿ ಪ್ರಶಸ್ತಿ ಜಯಿಸಿತ್ತು. 1999 ಹಾಗೂ 2009ರಲ್ಲಿ ರನ್ನರ್ಸ್‌-ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.

ಗುರ್ಜಿತ್ ಸಿಂಗ್ ಟೂರ್ನಿಯಲ್ಲಿ ತಮ್ಮ ಶ್ರೇಷ್ಠ ಪ್ರದರ್ಶನ ಮುಂದುವರಿಸಿದರು. ಏಳನೆ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿದ ಗುರ್ಜಿತ್ ಭಾರತಕ್ಕೆ ಬೇಗನೆ 1-0 ಮುನ್ನಡೆ ಒದಗಿಸಿಕೊಟ್ಟರು. 9ನೆ ನಿಮಿಷದಲ್ಲಿ ನವಜೋತ್ ಕೌರ್ ಫೀಲ್ಡ್ ಗೋಲು ಬಾರಿಸುವ ಮೂಲಕ ಭಾರತದ ಮುನ್ನಡೆಯನ್ನು 2-0ಗೆ ಏರಿಸಿದರು.

ನವಜೋತ್ ಗೋಲು ಬಾರಿಸಿದ ಬೆನ್ನಿಗೆ ಗುರ್ಜಿತ್ ಮತ್ತೊಂದು ಗೋಲು ಬಾರಿಸಿ ಭಾರತದ ಮುನ್ನಡೆಯನ್ನು 3-0ಗೆ ಹಿಗ್ಗಿಸಿದರು. ಜಪಾನ್ ಎರಡನೆ ಕ್ವಾರ್ಟರ್‌ನಲ್ಲಿ ಭಾರತ ವಿರುದ್ಧ ಪ್ರಾಬಲ್ಯ ಸಾಧಿಸಿತು. ಶಿಹೊ ಸುಜಿ(17ನೆ ನಿಮಿಷ) ಹಾಗೂ ಯುಯಿ ಐಶಿಬಾಶಿ(28ನೆ ನಿಮಿಷ) ತಲಾ ಒಂದು ಗೋಲು ಬಾರಿಸಿ ಮೊದಲಾರ್ಧದಲ್ಲಿ ತಂಡದ ಸ್ಕೋರನ್ನು 2-3ಕ್ಕೆ ತಲುಪಿಸಿದರು.

ಮೂರನೆ ಕ್ವಾರ್ಟರ್‌ನಲ್ಲಿ 38ನೆ ನಿಮಿಷದಲ್ಲಿ ಲಾಲ್‌ರೆಮ್‌ಸಿಯಾಮಿ ಟೂರ್ನಿಯಲ್ಲಿ ಮೊದಲ ಬಾರಿ ಗೋಲು ಬಾರಿಸಿ ಭಾರತಕ್ಕೆ 4-2 ಮುನ್ನಡೆ ಒದಗಿಸಿಕೊಟ್ಟರು. ಭಾರತದ ಡಿಫೆಂಡರ್‌ಗಳು ಕೊನೆಯ 22 ನಿಮಿಷಗಳ ಆಟದಲ್ಲಿ ಜಪಾನ್‌ಗೆ ಒತ್ತಡ ಹೇರಿ ಮುನ್ನಡೆ ಕಾಯ್ದುಕೊಳ್ಳಲು ನೆರವಾದರು.

ಇದೇ ವೇಳೆ ನಿಕ್ಕಿ ಪ್ರಧಾನ್ ಭಾರತದ ಪರ 50ನೆ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದರು.

ಭಾರತ ಗ್ರೂಪ್ ಹಂತದಲ್ಲಿ ಸಿಂಗಾಪುರ(10-0), ಚೀನಾ(4-1) ಹಾಗೂ ಮಲೇಷ್ಯಾ(2-0)ತಂಡವನ್ನು ಮಣಿಸುವ ಮೂಲಕ ನಾಕೌಟ್ ಹಂತಕ್ಕೇರಿತ್ತು. ಗುರುವಾರ ನಡೆದ ಕ್ವಾರ್ಟರ್‌ಫೈನಲ್‌ನಲ್ಲಿ ಕಝಕ್‌ಸ್ತಾನ ತಂಡವನ್ನು 7-1 ಅಂತರದಿಂದ ಸೋಲಿಸಿತ್ತು. ಭಾರತ ರವಿವಾರ ನಡೆಯಲಿರುವ ಫೈನಲ್‌ನಲ್ಲಿ ಚೀನಾ ತಂಡವನ್ನು ಎದುರಿಸಲಿದ್ದು, ಚೀನಾ 1989 ಹಾಗೂ 2009ರಲ್ಲಿ ಏಷ್ಯಾಕಪ್‌ನ್ನು ಜಯಿಸಿತ್ತು. 2009ರಲ್ಲಿ ಭಾರತ-ಚೀನಾ ಏಷ್ಯಾಕಪ್ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದು ಚೀನಾ 5-3 ಅಂತರದಿಂದ ಜಯ ಸಾಧಿಸಿತ್ತು.

 ಪ್ರಸ್ತುತ ಆವೃತ್ತಿಯಲ್ಲಿ ಏಷ್ಯಾಕಪ್‌ನ್ನು ಜಯಿಸುವ ತಂಡ ಇಂಗ್ಲೆಂಡ್‌ನಲ್ಲಿ 2018ರಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಅರ್ಹತೆ ಪಡೆದುಕೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X