Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದ್ವೇಷ ಭಾವನೆಯಿಂದ ನನ್ನ ಮೇಲೆ ಪ್ರಕರಣ...

ದ್ವೇಷ ಭಾವನೆಯಿಂದ ನನ್ನ ಮೇಲೆ ಪ್ರಕರಣ ದಾಖಲು: ಪತ್ರಕರ್ತ ಶಂಸುದ್ದೀನ್

ಠಾಣಾಧಿಕಾರಿ ವಿರುದ್ಧ ಮೇಲಾಧಿಕಾರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ3 Nov 2017 10:53 PM IST
share

ಕುಶಾಲನಗರ, ನ.3: ಅಕ್ರಮ ಮರಳುಗಾರಿಕೆಯ ವಿರುದ್ಧ ಸುದ್ದಿ ಮಾಡಿದ್ದಕ್ಕೆ ಪೂರ್ವಾಗ್ರಹ ಪೀಡಿತರಾಗಿ ದ್ವೇಷ ಭಾವನೆಯಿಂದ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಹೇಶ್ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಪತ್ರಕರ್ತ ಶಂಸುದ್ದೀನ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾನು ಕುಶಾಲನಗರದಲ್ಲಿ ಆಂದೋಲನ ಪತ್ರಿಕಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಇತ್ತೀಚೆಗೆ ಅಕ್ರಮ ಮರಳು ದಂಧೆಯ ಸಂಬಂಧ ನಾನು ಬರೆದ ಲೇಖನ ಬರೆದಿದ್ದು, ಅದರಲ್ಲಿ ಮರಳು ದಂಧೆ ಕೋರರು ಮತ್ತು ಸ್ಥಳೀಯ ಪೊಲೀಸರ ನಂಟಿನ ಬಗ್ಗೆ ವಿಮರ್ಶಿಸಿದ್ದೆ. ಇದರಿಂದ ಆಕ್ರೋಶಿತರಾದ ಕುಶಾಲನಗರ ಗ್ರಾಮಾಂತರ ಪೋಲೀಸ್ ಠಾಣೆಯ ಠಾಣಾಧಿಕಾರಿ ಮಹೇಶ್, ಯಾವುದೋ ಪರ್ತಕರ್ತರ ಬೆದರಿಕೆ ಹಾಗೂ ಬ್ಲಾಕ್ ಮೇಲ್ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ನನ್ನ ಹೆಸರನ್ನು ಸೇರಿಸಿದ್ದಾರೆ ಎಂದು ದೂರಿದ್ದಾರೆ.

ಘಟನೆಯ ವೇಳೆ ನಾನು ತಮಿಳುನಾಡಿನ ತೂತುಕ್ಕುಡಿಯಲ್ಲಿ ನನ್ನ ಸ್ನೇಹಿತನ ವಿವಾಹ ಸಮಾರಭದಲ್ಲಿದ್ದೆ. ಈ ವಿಚಾರ ಠಾಣಾಧಿಕಾರಿಗೆ ತಿಳಿದಿದ್ದೂ ಅನಾವಶ್ಯಕವಾಗಿ ಸೇಡಿನಿಂದ ಆರೋಪಿ ಪಟ್ಟಿಯನ್ನು ನನ್ನ ಹೆಸರು ಸೇರಿಸಿ ನನ್ನ ಚಾರಿತ್ಯವಧೆ ಮಾಡಿ, ಸಮಾಜದಲ್ಲಿ ಗೌರವಯುತವಾಗಿ ಬದುಕಲು ಧಕ್ಕೆ ತಂದಿದ್ದಾರೆ ಎಂದು ದೂರಿದ್ದಾರೆ.

ಇದರಿಂದಾಗಿ ನನ್ನ ಕುಟುಂಬ ಮಾನಸಿಕ ಕ್ಷೋಭೆಗೊಳಗಾಗಿದ್ದು, ನಾನು ಆರ್ಥಿಕ ಮುಗ್ಗಟ್ಟಿನಿಂದಾಗಿ ಮೊಟಕುಗೊಳಿಸಿದ್ದ ಇಂಜಿನಿಯರಿಂಗ್ ಶಿಕ್ಷಣವನ್ನು ಮುಂದುವರಿಸುವ ಇರಾದೆ ಹೊಂದಿದ್ದು, ಇಂತಹ ಸುಳ್ಳು ಪ್ರಕರಣದಿಂದ ಅನಾವಶ್ಯಕವಾಗಿ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ನನ್ನ ಭವಿಷ್ಯವನ್ನು ಆಳು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಠಾಣಾಧಿಕಾರಿಯ ಕಾರ್ಯವೈಖರಿಯನ್ನು ವಿಮರ್ಷೆ ಮಾಡುವ ಪರ್ತಕರ್ತರ ಬಗ್ಗೆ ಅನಾವಶ್ಯಕ ಮೊಕದ್ದಮೆಗಳಲ್ಲಿ ಸಿಲುಕಿಸಿ ಕಿರುಕುಳ ಕೊಡುವ ಸ್ವಭಾವ ಹೊಂದಿದ್ದಾರೆ. ಈ ಮೊದಲು ನನ್ನನ್ನು ಮತ್ತೊಂದು ಮೊಕದ್ದಮೆಯಲ್ಲಿ ಹೆಸರಿಸಿ, ನಂತರ ವಾಸ್ತವಾಂಶದ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳ ತನಿಖೆಯಿಂದ ದೋಷಾಪಟ್ಟಿ ಸಲ್ಲಿಸುವ ವೇಳೆ ನನ್ನ ಹೆಸರನ್ನು ಕೈಬಿಟ್ಟಿದ್ದಾರೆ. ಠಾಣಾಧಿಕಾರಿಯ ಇಂತಹ ಪ್ರವೃತಿಯಿಂದ ಅನೇಕ ಅಮಾಯಕರು, ಅವರ ಅಶ್ಲೀಲ ಪದಗಳ ಬೈಗುಳ, ದರ್ಪದ ವರ್ತನೆ ಹಾಗೂ ಅನಾವಶ್ಯಕ ಮೊಕದ್ದಮೆ ಹೂಡುವ ಕಿರುಕುಳಕ್ಕೆ ಸಿಲುಕಿ ತತ್ತರಿಸಿ ಹೋಗಿದ್ದಾರೆ ಎಂದು ದೂರಿದ್ದಾರೆ.

ಈ ಸಂಬಂಧ ನನ್ನ ಮೇಲೆ ಹೂಡಿರುವ ಮೊಕದ್ದಮೆ ಸುಳ್ಳೆಂದು ಹಾಗೂ ಘಟನೆ ನಡೆದ ದಿನದಂದು ನಾನು ತಮಿಳುನಾಡಿನಲ್ಲಿದ ಬಗ್ಗೆ ಮೇಲಾಧಿಕಾರಿಗೆ ಸಾಕ್ಷ್ಯ ಒದಗಿಸಿ ದೂರು ನೀಡಿದ್ದೇನೆ. ಪ್ರತೀಕಾರದ ಮನೋಭಾ ವನೆಯಿಂದ ನನ್ನನ್ನು ಬಂಧಿಸುವ ಅಪಾಯವಿರುವುದರಿಂದ ನಾನು ಪೋಲೀಸ್ ವರಿಷ್ಠಾಧಿ ಕಾರಿಯಲ್ಲಿ ರಕ್ಷಣೆಗೆ ನೀಡುವಂತೆ ವಿನಂತಿಸಿದ್ದೇನೆ ಎಂದು ತಿಳಿಸಿದ್ದಾರೆ.

ಒಂದು ತಿಂಗಳ ಒಳಗಾಗಿ ಸತ್ಯಾಸತ್ಯತೆಯನ್ನು ತನಿಖೆಯ ಮೂಲಕ ಅರಿತು, ದೋಷಾರೋಪ ಪಟ್ಟಿಯಿಂದ ನನ್ನ ಹೆಸರು ಕೈಬಿಡದಿದದ್ದಲ್ಲಿ ಸಮಾನ ಮನಸ್ಕರೊಡನೆ ಒಗ್ಗೂಡಿ ಪ್ರತಿಭಟನಾ ಧರಣಿಯನ್ನು ನಡೆಸುವುದಾಗಿ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X