Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಹುತ್ವ ಗೌರವಿಸುವವರೆಲ್ಲರೂ ಸಿಖ್ಖರೇ:...

ಬಹುತ್ವ ಗೌರವಿಸುವವರೆಲ್ಲರೂ ಸಿಖ್ಖರೇ: ಚಿರಂಜೀವಿ ಸಿಂಗ್

ವಾರ್ತಾಭಾರತಿವಾರ್ತಾಭಾರತಿ4 Nov 2017 6:51 PM IST
share

ಬೆಂಗಳೂರು, ನ.4: ದೇಶದ ಬಹುತ್ವವನ್ನು ಗೌರವಿಸುವವರು ಹಾಗೂ ‘ಗುರುಬಾನಿ’ಯನ್ನು ಓದುವವರೆಲ್ಲರೂ ಸಿಖ್ಖರೇ ಆಗಿದ್ದಾರೆ ಎಂದು ಸಂಸ್ಕೃತಿ ಚಿಂತಕ ಚಿರಂಜೀವಿ ಸಿಂಗ್ ಹೇಳಿದ್ದಾರೆ.

ಶನಿವಾರ ಅಭಿನವ ಪ್ರಕಾಶನ ನಗರದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಆಯೋಜಿಸಿದ್ದ ಲೇಖಕ ಎಸ್.ಸೀತಾರಾಮುರವರ ‘ಸದ್ಗುರು ನಾನಕ್ ದೇವ್’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಸಿಖ್ಖ್’ ಎಂದರೆ ಗುರುವಿನ ಶಿಷ್ಯ ಎಂದಾರ್ಥ. ಹೀಗಾಗಿ ಗುರುನಾನಕ್ ಚಿಂತನೆಗಳನ್ನು ಒಳಗೊಂಡಿರುವ ‘ಗುರುಬಾನಿ’ ಓದುವವರೆಲ್ಲರೂ ಸಿಖ್ಖರು ಎಂದು ತಿಳಿಸಿದರು.

ಪ್ರಸ್ತುತ ದಿನಗಳಲ್ಲಿ ಸಿಖ್ಖ್ ಧರ್ಮಕ್ಕೆ ಸಂಬಂಧಿಸಿದ ವಿಚಾರಗಳು ಕನ್ನಡ ಜನತೆಗೆ ತಿಳಿಯಬೇಕಾಗಿದೆ. ಮುಖ್ಯವಾಗಿ ಗುರುನಾನಕ್‌ರ ಜೀವನಗಾಥೆ, ಗುರುಬಾನಿ ಹಾಗೂ ಗುರುನಾನಕ್‌ರ ಶಿಷ್ಯರಿಗೆ ಸಂಬಂಧಿಸಿದ ಪುಸ್ತಕಗಳು ಕನ್ನಡಕ್ಕೆ ಅನುವಾದಗೊಳ್ಳಬೇಕಾಗಿದೆ. ಹಂಪಿ ವಿಶ್ವವಿದ್ಯಾನಿಲಯದಿಂದ ಅನುವಾದ ಕಾರ್ಯ ಆಗುತ್ತದೆ ಎಂದು ಬಯಸಿದ್ದೇನೆ ಎಂದು ವಿವರಿಸಿದರು.

ಹಿರಿಯ ವಿಮರ್ಶಕ ಸಿ.ಎನ್.ರಾಮಚಂದ್ರನ್ ಮಾತನಾಡಿ, ಭಾರತ ಬಹು ಧರ್ಮಗಳ, ಬಹು ತತ್ವಗಳ ನಾಡೆಂಬುದು ನಿಜವೇ. ಆದರೆ, ಬಹುತ್ವಕ್ಕೆ ಹೆಚ್ಚಿನ ಅರ್ಥ ಬರುವುದು ಭಿನ್ನ, ಭಿನ್ನ ಧರ್ಮಗಳ, ಸಂಸ್ಕೃತಿಗಳ ಆಚಾರ, ವಿಚಾರಗಳನ್ನು ಪ್ರತಿಯೊಬ್ಬರು ಪರಿಸ್ಪರ ಅರಿತಾಗಲೇ ಎಂದರು.

ಗುರುನಾನಕ್ ಕುರಿತು ಪುಸ್ತಕಗಳು ಕನ್ನಡದಲ್ಲಿ ಬಂದಿವೆ. ಭಕ್ತಿ ಪಂಥದ ಕುರಿತು ಬರೆದಿರುವ ಕೃತಿಕಾರರು ಗುರುನಾನಕ್ ಬಗೆಗೂ ಬೆಳಕು ಚೆಲ್ಲಿದ್ದಾರೆ. ಆದರೆ, ಗುರುನಾನಕ್‌ರ ಬಾಲ್ಯದಿಂದ ಪ್ರಾರಂಭಗೊಂಡು ತಮ್ಮದೇ ತತ್ವಗಳನ್ನೊಳಗೊಂಡ ಧರ್ಮವನ್ನು ಸ್ಥಾಪಿಸಿ ದೇಶ-ವಿದೇಶಗಳಲ್ಲಿ ಪ್ರಚಾರ ಮಾಡಿರುವ ಅನನ್ಯ ಅನುಭವಗಳು ‘ಸದ್ಗುರು ನಾನಕ್ ದೇವ್’ ಕೃತಿಯಲ್ಲಿ ಸವಿವರವಾಗಿ ದಾಖಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೃತಿಕಾರ ಎಸ್.ಸೀತಾರಾಮು ಉಪಸ್ಥಿತರಿದ್ದರು.
  
'ಸಿಖ್ಖ್-ವಚನಗಳ ನಡುವೆ ಸಾಮ್ಯತೆ'
ಸಿಖ್ಖ್, ಬೌದ್ಧ ಹಾಗೂ ಲಿಂಗಾಯತ ಧರ್ಮಗಳ ನಡುವೆ ಅನೇಕ ಸಾಮ್ಯತೆಗಳಿವೆ. ಗುರುನಾನಕ್‌ರ ಜೀವನ ವೃತ್ತಾಂತಕ್ಕೂ ಬುದ್ಧನ ಜೀವನಗಾಥೆಗೂ ಹೋಲಿಕೆಗಳಿವೆ. ಹಾಗೆಯೇ ಸಿಖ್ಖ್ ಧರ್ಮದ ಮೂಲ ತತ್ವಗಳಾದ ಪ್ರಾಮಾಣಿಕ ವೃತ್ತಿ, ಸಮಾಜ ಸೇವೆ, ಇಷ್ಟಲಿಂಗಾ ಪೂಜೆ ಲಿಂಗಾಯತ ಧರ್ಮದ ಮೂಲ ತತ್ವಗಳೇ ಆಗಿವೆ.
-ಸಿ.ಎನ್.ರಾಮಚಂದ್ರ, ಹಿರಿಯ ವಿಮರ್ಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X