Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ: ಕರ್ನಾಟಕ ತಂಡಕ್ಕೆ ‘ಹ್ಯಾಟ್ರಿಕ್’...

ರಣಜಿ: ಕರ್ನಾಟಕ ತಂಡಕ್ಕೆ ‘ಹ್ಯಾಟ್ರಿಕ್’ ಜಯ

►ಮಿಥುನ್‌ಗೆ 5 ವಿಕೆಟ್‌ ► ಮಹಾರಾಷ್ಟ್ರಕ್ಕೆ ಹೀನಾಯ ಸೋಲು

ವಾರ್ತಾಭಾರತಿವಾರ್ತಾಭಾರತಿ4 Nov 2017 11:44 PM IST
share
ರಣಜಿ: ಕರ್ನಾಟಕ ತಂಡಕ್ಕೆ ‘ಹ್ಯಾಟ್ರಿಕ್’ ಜಯ

ಪುಣೆ, ನ.4: ಮಧ್ಯಮ ವೇಗದ ಬೌಲರ್ ಅಭಿನವ್ ಮಿಥುನ್ ಐದು ವಿಕೆಟ್ ಗೊಂಚಲು(5-66)ಸಹಾಯದಿಂದ ಕರ್ನಾಟಕ ತಂಡ ರಣಜಿ ಟ್ರೋಫಿಯ ‘ಎ’ ಗುಂಪಿನ ಪಂದ್ಯದಲ್ಲಿ ಆತಿಥೇಯ ಮಹಾರಾಷ್ಟ್ರ ತಂಡವನ್ನು ಇನಿಂಗ್ಸ್ ಹಾಗೂ 136 ರನ್‌ಗಳ ಅಂತರದಿಂದ ಹೀನಾಯವಾಗಿ ಸೋಲಿಸಿದೆ.

ರಣಜಿಯ ನಾಲ್ಕನೆ ದಿನವಾದ ಶನಿವಾರ ಮಹಾರಾಷ್ಟ್ರವನ್ನು ಎರಡನೆ ಇನಿಂಗ್ಸ್‌ನಲ್ಲಿ 247 ರನ್‌ಗೆ ನಿಯಂತ್ರಿಸಿದ ಕರ್ನಾಟಕ ಟೂರ್ನಿಯಲ್ಲಿ ಸತತ 3ನೆ ಜಯ ದಾಖಲಿಸಿತು. ಒಟ್ಟು 20 ಅಂಕ ಸಂಪಾದಿಸಿ ‘ಎ’ ಗುಂಪಿನಲ್ಲಿ ಅಗ್ರ ಸ್ಥಾನವನ್ನು ಕಾಯ್ದುಕೊಂಡಿತು. ಮೊದಲ ಇನಿಂಗ್ಸ್‌ನಲ್ಲಿ 383 ರನ್ ಹಿನ್ನಡೆ ಕಂಡಿದ್ದ ಮಹಾರಾಷ್ಟ್ರ ತಂಡ ಶನಿವಾರ 4 ವಿಕೆಟ್‌ಗಳ ನಷ್ಟಕ್ಕೆ 135 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿತು. 61 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ಋತುರಾಜ್ ಗಾಯಕ್ವಾಡ್ ನಿನ್ನೆಯ ಮೊತ್ತಕ್ಕೆ 4 ರನ್ ಸೇರಿಸಿ ಮಿಥುನ್‌ಗೆ ವಿಕೆಟ್ ಒಪ್ಪಿಸಿದರು. 55 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸರ್‌ಗಳಿರುವ ಮಿಂಚಿನ 51 ರನ್ ಗಳಿಸಿದ ರಾಹುಲ್ ತ್ರಿಪಾಠಿಗೆ ಮಿಥುನ್ ಪೆವಿಲಿಯನ್ ಹಾದಿ ತೋರಿಸಿದರು. ತ್ರಿಪಾಠಿ, ಮಿಥುನ್‌ಗೆ ಬಲಿಯಾದ ನಾಲ್ಕನೆ ದಾಂಡಿಗ ಎನಿಸಿಕೊಂಡರು.

47ನೆ ಓವರ್‌ನ 2ನೆ ಎಸೆತದಲ್ಲಿ ಚಿರಾಗ್ ಖುರಾನ(4) ವಿಕೆಟ್ ಉಡಾಯಿಸಿದ ಮಿಥುನ್ 5 ವಿಕೆಟ್ ಗೊಂಚಲು ಪಡೆದರು. ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರೋಹಿತ್ ಮೊಟ್ವಾನಿ(ಅಜೇಯ 49, 75 ಎಸೆತ, 9 ಬೌಂಡರಿ)ಏಕಾಂಗಿ ಹೋರಾಟ ನೀಡಿದರು. ಅವರಿಗೆ ಮತ್ತೊಂದು ತುದಿಯಲ್ಲಿ ಸರಿಯಾದ ಸಾಥ್ ಸಿಗಲಿಲ್ಲ. ನಾಯಕ ವಿನಯ್ ಕುಮಾರ್ ಮೊದಲ ಇನಿಂಗ್ಸ್‌ನಲ್ಲಿ 6 ವಿಕೆಟ್ ಕಬಳಿಸಿ ಮಹಾರಾಷ್ಟ್ರವನ್ನು 245 ರನ್‌ಗೆ ಕಟ್ಟಿಹಾಕಿ ತಂಡದ ಗೆಲುವಿಗೆ ಮುನ್ನುಡಿ ಬರೆದರು. ಚೊಚ್ಚಲ ತ್ರಿಶತಕ ಕೊಡುಗೆ ನೀಡಿದ ಆರಂಭಿಕ ಆಟಗಾರ ಮಾಯಾಂಕ್ ಅಗರವಾಲ್ ಕರ್ನಾಟಕ ಮೊದಲ ಇನಿಂಗ್ಸ್‌ನಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 628 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಲು ನೆರವಾದರು. ಕರ್ನಾಟಕ ಮೊದಲ ಇನಿಂಗ್ಸ್‌ನಲ್ಲಿ 383 ರನ್ ಬೃಹತ್ ಮುನ್ನಡೆಯನ್ನು ಪಡೆಯಿತು. ಮಹಾರಾಷ್ಟ್ರ ಎರಡನೆ ಇನಿಂಗ್ಸ್ ನಲ್ಲಿ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯಕ್ಕೆ ಒಳಗಾಗಿ ನಾಲ್ಕನೆ ದಿನದಾಟದಲ್ಲಿ ಬೇಗನೆ ತನ್ನ ಹೋರಾಟ ಕೊನೆಗೊಳಿಸಿತು.

ಸಂಕ್ಷಿಪ್ತ ಸ್ಕೋರ್

►ಮಹಾರಾಷ್ಟ್ರ ಮೊದಲ ಇನಿಂಗ್ಸ್: 245/10

►ಕರ್ನಾಟಕ ಮೊದಲ ಇನಿಂಗ್ಸ್: 628/5 ಡಿಕ್ಲೇರ್

►ಎರಡನೆ ಇನಿಂಗ್ಸ್: 66.2 ಓವರ್‌ಗಳಲ್ಲಿ 247/10

(ಋತುರಾಜ್ ಗಾಯಕ್ವಾಡ್ 65, ರಾಹುಲ್ ತ್ರಿಪಾಠಿ 51,ರೋಹಿತ್ ಮೊಟ್ವಾನಿ ಅಜೇಯ 49, ಮಿಥುನ್ 5-57, ರೋಹಿತ್ ಮೋರೆ 2-34)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X