Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಪ್ಪು ಜಯಂತಿ ದಿನಾಚರಣೆ: ಮೆರವಣಿಗೆಗೆ...

ಟಿಪ್ಪು ಜಯಂತಿ ದಿನಾಚರಣೆ: ಮೆರವಣಿಗೆಗೆ ಅನುಮತಿ ನಿಷೇಧ

ಶಾಂತಿ ಭಂಗ ಆಗದಂತೆ ಟಿಪ್ಪು ಜಯಂತಿ ಆಚರಣೆ: ಪಿಎಸೈ ಶಕ್ತಿವೇಲು

ವಾರ್ತಾಭಾರತಿವಾರ್ತಾಭಾರತಿ5 Nov 2017 5:13 PM IST
share

ಬಣಕಲ್, ನ.5: ಮುಂಬರುವ ಟಿಪ್ಪು ಜಯಂತಿ ಆಚರಣೆಯ ಸಂದರ್ಭದಲ್ಲಿ ಯಾವುದೇ ಸಮುದಾಯದವರಿಂದ ಕಾನೂನು ಭಂಗ ಆಗದಂತೆ ಜಾಗ್ರತೆ ವಹಿಸಿ ಕಾನೂನು ಪಾಲನೆ ಮಾಡಿ ಟಿಪ್ಪು ಜಯಂತಿ ಆಚರಿಸಬೇಕೆಂದು ಬಣಕಲ್ ಠಾಣಾಧಿಕಾರಿ ಶಕ್ತಿವೇಲು ಹೇಳಿದರು.

ಅವರು ಬಣಕಲ್ ಪೋಲಿಸ್ ಠಾಣೆಯಲ್ಲಿ ನಡೆದ ಟಿಪ್ಪು ಜಯಂತಿ ಕುರಿತು ಶಾಂತಿಸಭೆಯಲ್ಲಿ ಮಾತನಾಡಿದರು. ಯಾವುದೇ ಸಭೆ ಸಮಾರಂಭಗಳು ನಡೆಸಬೇಕಾದರೆ ಸಂಬಂಧಪಟ್ಟ ಗ್ರಾಂ.ಪಂ ಹಾಗೂ ಪೋಲಿಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಪರವಾನಗಿ ಪಡೆಯಬೇಕು.

ಜನಸಂದಣಿ ಇರುವ ಕಡೆ ಬ್ಯಾನರ್ ಮತ್ತು ಬಿತ್ತಿಪತ್ರಗಳನ್ನು ಹಾಕುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಶಾಂತಿ ಕದಡದಂತೆ ಎಚ್ಚರವಹಿಸಿ ಟಿಪ್ಪು ಜಯಂತಿ ಆಚರಿಸಬೇಕು. ಡಿಸಿ ಮತ್ತು ಎಸ್ಪಿ ಸಭೆಯಲ್ಲಿ ನಡೆದ ಆದೇಶದ ನಡಾವಳಿಯಂತೆ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ಸೂಚಿಸಿದರು.

ಎಎಸೈ ಶಶಿ ಮಾತನಾಡಿ, ಆಚರಣೆಗಳು ಯಾವ ಧರ್ಮಗಳದ್ದೇ ಆದರೂ ಶಾಂತಿಯಿಂದ ನಡೆಸುವುದು ಸೂಕ್ತ. ಪ್ರಚೋಧನಾಕಾರಿ ಭಾಷಣಗಳನ್ನು ಹಮ್ಮಿಕೊಳ್ಳುವಂತಿಲ್ಲ. ಮೆರವಣಿಗೆಗಳನ್ನು ಈ ಸಂದರ್ಭದಲ್ಲಿ ನಿಷೇಧಿಸಲಾಗಿದೆ. ನ.13 ರಿಂದ ದತ್ತಮಾಲೆ, ನ.23 ರಿಂದ ದತ್ತ ಜಯಂತಿ ಬರುವುದರಿಂದ ಜನರು ಶಾಂತಿಯಿಂದ ವರ್ತಿಸಬೇಕು. ಯಾವುದೇ ಪರವಾನಿಗೆ ಪಡೆದ ಕಾರ್ಯಕ್ರಮಗಳು ನಡೆಸಿದರೆ ಅದನ್ನು ಕಾನೂನಿನ ಚೌಕಟ್ಟಿನಲ್ಲಿ ನಿಯಮ ಪಾಲಿಸಿ ನಡೆಸಬೇಕಾಗುತ್ತದೆ ಎಂದರು.

ಕೋಮು ಸೌಹಾರ್ಧ ವೇದಿಕೆಯ ಗೌಸ್ ಮೊಹಿದ್ದೀನ್ ಮಾತನಾಡಿ, ಟಿಪ್ಪು ಜಯಂತಿಯದಂದು ಬಣಕಲ್ ಸುತ್ತಮುತ್ತ ನಮ್ಮ ಮುಸ್ಲಿಂ ಬಾಂಧವರಿಂದ ಯಾವುದೇ ಮೆರವಣಿಗೆಗಳು ನಡೆಯುವುದಿಲ್ಲ. ಶಾಂತಿ ಕಾಪಾಡುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯವಾಗಿದ್ದು ಅದನ್ನು ನಾವು ಪಾಲಿಸುತ್ತೇವೆ. ಬಣಕಲ್‍ಗೆ ನೂತನವಾಗಿ ಬಂದಿರುವ ಠಾಣಾಧಿಕಾರಿಯವರು ಉತ್ತಮ ಸೇವೆ ನೀಡುತ್ತಿದ್ದು ಕಾನೂನು ಪಾಲನೆಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಬಣಕಲ್‍ಗೆ ಒಬ್ಬ ನಿಷ್ಠೆಯ ಅಧಿಕಾರಿಯ ಅವಶ್ಯಕತೆಯಿತ್ತು. ಅದು ಈಗ ಈಡೇರಿದೆ. ಸಾರ್ವಜನಿಕರು ಉತ್ತಮ ರೀತಿಯಲ್ಲಿ ನಡೆದು ಕಾನೂನು ಪಾಲಿಸಲು ಕೈಜೋಡಿಸಬೇಕು ಎಂದು ತಿಳಿಸಿದರು.

ಶಾಂತಿಸಭೆಯಲ್ಲಿ ಮುಖ್ಯ ಪೇದೆ ರುದ್ರೇಶ್, ಯೋಗೀಶ್, ಗ್ರಾಪಂ ಅಧ್ಯಕ್ಷ ಬಿ.ವಿ.ಸುರೇಶ್, ಗ್ರಾಮಸ್ಥರಾದ ಸುರೇಶ್‍ಶೆಟ್ಟಿ, ವಿನಯ್‍ಶೆಟ್ಟಿ, ಸಬ್ಲಿದೇವರಾಜ್, ಹಸನಬ್ಬ, ಅಭಿಷೇಕ್‍ಗೌಡ, ಸುಶಾಂತ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X