Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉತ್ತಮ ಸಮಾಜಕ್ಕೆ ಕನಕದಾಸರ ಸಂದೇಶ...

ಉತ್ತಮ ಸಮಾಜಕ್ಕೆ ಕನಕದಾಸರ ಸಂದೇಶ ಪೂರಕ-ಎ.ಸಿ. ರಘುನಂದನ್ ಮೂರ್ತಿ

ಕನಕ ಜಯಂತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ6 Nov 2017 4:49 PM IST
share
ಉತ್ತಮ ಸಮಾಜಕ್ಕೆ ಕನಕದಾಸರ ಸಂದೇಶ ಪೂರಕ-ಎ.ಸಿ. ರಘುನಂದನ್ ಮೂರ್ತಿ

ಪುತ್ತೂರು, ನ.6: ಇಂದು ಸಮಾಜದಲ್ಲಿ ನಾನು, ನನ್ನಿಂದಲೇ ಎಂಬ ಭಾವನೆ ಮೇಳೈಸುತ್ತಿದ್ದು, ನಾನು ಎಂಬ ಅಹಂ ತೊಲಗಿ ಆ ಜಾಗದಲ್ಲಿ ನಾವು ಎಂಬ ಭಾವನೆ ಬೆಳಗಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಈ ಆದರ್ಶ ಅನುಷ್ಠಾನವಾಗಬೇಕಾದರೆ ದಾಸಶ್ರೇಷ್ಠರಾದ ಕನಕದಾಸರ ಸಂದೇಶ ನೆರವಾಗುತ್ತದೆ ಎಂದು ಪುತ್ತೂರು ಉಪ ವಿಭಾಗಾಧಿಕಾರಿ ಡಾ. ರಘುನಂದನ ಮೂರ್ತಿ ಹೇಳಿದರು.

ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ವತಿಯಿಂದ ಪುತ್ತೂರಿನ ಪುರಭವನದಲ್ಲಿ ಸೋಮವಾರ ನಡೆದ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕನಕದಾಸರು ನಮ್ಮ ನಾಡು ಕಂಡ ಶ್ರೇಷ್ಠ ದಾಸರು. ವ್ಯಾಸರಾಯರ ಶಿಷ್ಯರಾಗಿದ್ದ ಸಂದರ್ಭ ಅವರು ತೋರಿಸಿಕೊಟ್ಟ ಅಹಂ ನಿವಾರಣೆಯ ನಿರ್ದಶನ ಇಂದಿಗೂ ಜನಜನಿತ ಎಂದ ಅವರು ವ್ಯಕ್ತಿಯೊಬ್ಬ ಮಾಡುವ ಸಾಧನೆಯ ಹಿಂದೆ ಕುಟುಂಬ, ಸಮಾಜದ ನಾನಾ ರೀತಿಯ ಕೊಡುಗೆಗಳಿದ್ದರೂ ಅವೆಲ್ಲವನ್ನೂ ಮರೆತು ಎಲ್ಲವನ್ನೂ ನಾನೇ ಮಾಡಿದ್ದು, ಎಲ್ಲವೂ ನನ್ನಿಂದಲೇ ಆಗಿದ್ದು ಎಂಬ ಭಾವನೆ ವಿಜ್ರಂಭಿಸುತ್ತಿದೆ. ಈ ಅಹಂ ಭಾವನೆ ಸರಿಯಲ್ಲ .ಕನಕದಾಸರ ಸಂದೇಶಗಳನ್ನು ಅರ್ಥೈಸಿಕೊಂಡಲ್ಲಿ ಮಾತ್ರ ಈ ಅಹಂ ಭಾವನೆ ಸಮಾಜದಿಂದ ದೂರವಾಗಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಉಪ್ಪಿನಂಗಡಿ ಸರ್ಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕೃಷ್ಣವೇಣಿ ರೈ ವಿಶೇಷ ಉಪನ್ಯಾಸ ನೀಡಿ ಕೀರ್ತನೆ ಮೂಲಕ ಸಂಗೀತ ಕ್ಷೇತ್ರಕ್ಕೆ, ಕಾವ್ಯದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಕನಕದಾಸರು ತಮ್ಮ ಭಕ್ತಿ, ಮತ್ತು ಆಧ್ಯಾತ್ಮಿಕ ಚಿಂತನೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದರು. ರಾಜ ಮನೆತನದ ಸಖ್ಯದೊಂದಿಗೆ ಎಲ್ಲ ಶ್ರೀಮಂತ ಸೌಕರ್ಯಗಳಿದ್ದರೂ ಬುದ್ಧನಂತೆ ಅವೆಲ್ಲವನ್ನೂ ತ್ಯಾಗ ಮಾಡಿದ ಕನಕದಾಸರು, ಕೀರ್ತನೆಗಳ ಮೂಲಕ ಸಾಮಾನ್ಯ ಜನರನ್ನು, ಕಾವ್ಯಗಳ ಮೂಲಕ ಪಂಡಿತವರ್ಗವನ್ನು ಏಕಕಾಲದಲ್ಲಿ ಮುಟ್ಟಿದರು ಎಂದರು. ತಿಮ್ಮಪ್ಪ ನಾಯಕನಾಗಿದ್ದ ಇವರು ತಮಗೆ ಸಿಕ್ಕ ಕೊಪ್ಪರಿಗೆಯನ್ನು ದಾನ ಮಾಡುವ ಮೂಲಕ ಕನಕ ನಾಯಕನಾದರು. ತನ್ನೆಲ್ಲ ವೈಭೋಗ ತ್ಯಾಗ ಮಾಡುವ ಮೂಲಕ ಕನಕದಾಸರಾದರು ಎಂದ ಅವರು ನಾಡು ಕಂಡ 250ಕ್ಕಿಂತಲೂ ಅಧಿಕ ಹರಿದಾಸರ ಪೈಕಿ ಕನಕದಾಸರೊಬ್ಬರೇ ಶೂದ್ರ ವರ್ಗಕ್ಕೆ ಸೇರಿದವರು ಎಂದು ಅವರು ತಿಳಿಸಿದರು.

ಉಡುಪಿಯಲ್ಲಿ ಕನಕನ ಭಕ್ತಿಗೆ ಒಲಿದು ಕೃಷ್ಣನ ಮೂರ್ತಿ ಪಶ್ಚಿಮಕ್ಕೆ ತಿರುಗಿತು ಎಂಬ ಕತೆ ಜನಪದೀಯ ಮಾತ್ರ, ಇದಕ್ಕೆ ಸಮಕಾಲೀನ ಕಾವ್ಯಗಳಲ್ಲಿ, ಚರಿತ್ರೆ ಅಥವಾ ಶಾಸನಗಳಲ್ಲಿ, ಉಡುಪಿಯ ಚರಿತ್ರೆಯಲ್ಲೂ ಎಲ್ಲೂ ಪೂರಕ ದಾಖಲೆಗಳಿಲ್ಲ. ಕ್ರಿ.ಶ. 1238ರಲ್ಲಿ ಮಧ್ವಾಚಾರ್ಯರು ಕೃಷ್ಣನ ವಿಗ್ರಹವನ್ನು ಪಶ್ಚಿಮಾಭಿಮುಖವಾಗಿಯೇ ಸ್ಥಾಪಿಸಿದರು ಎಂಬ ಐತಿಹ್ಯವೇ ಹೆಚ್ಚು ಶಕ್ತಿಶಾಲಿಯಾದುದು. ವಾದಿರಾಜರ ಕಾಲದ ನಂತರ ಕನಕನ ಕಿಂಡಿ ಎಂಬ ಕತೆ ಬಾಯಿ ಮಾತಿನ ಮೂಲಕ ಆರಂಭಗೊಂಡು ಪ್ರಚಾರ ಪಡೆಯಿತು ಎಂಬ ಐತಿಹ್ಯವಿದೆ ಎಂದು ಹೇಳಿದರು.

ತಾಲೂಕು ಪಂಚಾಯತ್ ಅಧ್ಯಕ್ಷೆ ಭವಾನಿ ಚಿದಾನಂದ ಅವರು ಅಧ್ಯಕ್ಷತೆ ವಹಿಸಿದ್ದರು. ನಗರ ಸಭೆಯ ಅಧ್ಯಕ್ಷೆ ಜಯಂತಿ ಬಲ್ನಾಡು ಮಾತನಾಡಿದರು.
ತಾಲೂಕು ರಾಷ್ಡ್ರೀಯ ಹಬ್ಬಗಳ ಆಚರಣಾ ಸಮಿತಿಯ ಸಂಚಾಲಕರಾದ ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಉಪಸ್ಥಿತರಿದ್ದರು.

ಉಪತಹಶೀಲ್ದಾರ್ ಶ್ರೀಧರ್ ಕೋಡಿಜಾಲ್ ಸ್ವಾಗತಿಸಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ್ ಕುಮಾರ್ ವಂದಿಸಿದರು. ತಾಲೂಕು ಕಚೇರಿಯ ಸಿಬ್ಬಂದಿ ನಾಗೇಶ್ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X