Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನಕದಾಸರು ತನ್ನ ಕೀರ್ತನೆಗಳ ಮೂಲಕ ಮೌಢ್ಯ...

ಕನಕದಾಸರು ತನ್ನ ಕೀರ್ತನೆಗಳ ಮೂಲಕ ಮೌಢ್ಯ ಹೋಗಲಾಡಿಸಲು ಯತ್ನಿಸಿದರು: ಪ್ರೊ.ಎಂ.ಕರೀಮುದ್ದೀನ್

ವಾರ್ತಾಭಾರತಿವಾರ್ತಾಭಾರತಿ6 Nov 2017 10:16 PM IST
share
ಕನಕದಾಸರು ತನ್ನ ಕೀರ್ತನೆಗಳ ಮೂಲಕ ಮೌಢ್ಯ ಹೋಗಲಾಡಿಸಲು ಯತ್ನಿಸಿದರು: ಪ್ರೊ.ಎಂ.ಕರೀಮುದ್ದೀನ್

ಮಂಡ್ಯ, ನ.6: ಬಹುಮುಖ ಪ್ರತಿಭೆ ಹೊಂದಿದ್ದ ಕನಕದಾಸರು, ಕವಿ, ಸಂತ, ವಚನಕಾರ, ಕೀರ್ತನೆಕಾರರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಲು ಮುಂದಾದರು ಎಂದು ಸಾಹಿತಿ ಪ್ರೊ.ಎಂ.ಕರಿಮುದ್ದೀನ್ ತಿಳಿಸಿದ್ದಾರೆ.

ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು, ಮಾನವ ಮಾನವನಾಗಿ ಬಾಳಬೇಕು. ಕುಲ, ಜಾತಿ ಎಂದು ಹೊಡೆದಾಡಬಾರದು. ಸತ್ಯ ಎಂಬುದು ಜೀವನದಲ್ಲಿ ಶ್ರೇಷ್ಠವಾದುದು ಎಂದು ಕನಕದಾಸರು ಕೀರ್ತನೆಗಳ ಮೂಲಕ ಸಾರಿದರು ಎಂದು ಹೇಳಿದರು.

ಮೋಹಿನಿ ತರಂಗಿಣಿ, ನಳಚರಿತ್ರೆ, ಹರಿಭಕ್ತಸಾರ ಸೇರಿದಂತೆ ಮುಂತಾದ ಗ್ರಂಥಗಳನ್ನು ಕನಕದಾಸರು ಬರೆದಿದ್ದಾರೆ. ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಮೌಢ್ಯವನ್ನು ಹೋಗಲಾಡಿಸಲು ಯತ್ನಿಸಿದರು ಎಂದು ಅವರು, ಧರ್ಮ ಹೃದಯಕ್ಕೆ ಸಂಬಂಧಿಸಿದ್ದಾಗಿದ್ದು, ಅದಕ್ಕೆ ಹೃದಯವನ್ನು ಅರಳಿಸಿವ ಶಕ್ತಿ ಇದೆ. ಕುಲ, ಜಾತಿ ಎಂದು ಹೊಡೆದಾಡಬೇಡಿ. ಮೌಢ್ಯವನ್ನು ಬಿಟ್ಟು ಹೊರಬನ್ನಿ  ಎಂದು ಕನಕದಾಸರು ಸಾರಿದರು ಎಂದು ವಿವರಿಸಿದರು.

ದೇವರು ಎಲ್ಲ ಕಡೆ ಇದ್ದಾನೆ. ನರಕ, ಸ್ವರ್ಗ ಎಂಬುದು ಬೇರಲ್ಲೂ ಇಲ್ಲ, ಭೂಮಿಯ ಮೇಲೆಯೇ ಇದೆ. ಹಸಿದವರಿಗೆ ಅನ್ನ, ದಾಹ ಎಂದವರಿಗೆ ನೀರು ಕೊಡಬೇಕು. ರೋಗಿಗಳಿಗೆ ಆರೈಕೆ, ಚಿಕಿತ್ಸೆ ಮಾಡಿದರೆ ಅಲ್ಲಿ ದೇವರು ಇರುತ್ತಾನೆ ಎಂದು ನುಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ, ಕುಲ ಕುಲವೆಂದು ಹೊಡೆದಾಡದೆ, ಮನುಷ್ಯ ಮನುಷ್ಯರಾಗಿ ಬಾಳುವುದನ್ನು ಕಲಿಯಬೇಕು ಎಂದು ಕನಕದಾಸರು ತಮ್ಮ ಕೀರ್ತನೆಗಳಲ್ಲಿ ಹೇಳಿದ್ದಾರೆ ಎಂದರು.

ಜಾತಿ, ಭೇದ ಭಾವ ಮಾಡದೆ ಎಲ್ಲರೂ ಒಗ್ಗಟ್ಟಾಗಿ ಬಾಳಬೇಕು ಎಂಬುದು ಬುದ್ಧ, ಬಸವಣ್ಣ, ಕನಕ ಮುಂತಾದ ದಾರ್ಶನಿಕರ ಸಂದೇಶವಾಗಿದೆ. ಆದರೆ, ಅದನ್ನು ಮರೆತು ಜಾತಿಗಳನ್ನು ಸೃಷ್ಟಿಸಿಕೊಂಡು ಹೊಡೆದಾಡುತ್ತಿದ್ದೇವೆ ಎಂದು ವಿಷಾದಿಸಿದರು.

ದೇವರಿಗೆ ಯಾವುದೇ ಧರ್ಮ, ಜಾತಿ ಇಲ್ಲ. ಭಕ್ತಿಯೇ ಮುಖ್ಯವಾಗಿದೆ. ದೊಡ್ಡವ, ಶ್ರೀಮಂತ, ಅಧಿಕಾರಸ್ಥ ಎಂದು ಅಹಂಕಾರಪಡಬಾರದು. ಹಣ ಇದ್ದಾಗ ಬಡವರಿಗೆ ಹಂಚಬೇಕು. ಅಧಿಕಾರ ಇದ್ದಾಗ ಸಹಾಯ ಮಾಡಬೇಕು. ಶೋಷಿತರನ್ನು ತುಳಿಯಬಾರದು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ, ತಾಪಂ ಅಧ್ಯಕ್ಷ ಕೆ.ಎಂ.ಬೀರಪ್ಪ, ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಜಿಪಂ ಸಿಇಒ ಬಿ.ಶರತ್, ಅಪರ ಜಿಲ್ಲಾಧಿಕಾರಿ ವಿಜಯ್, ಉಪವಿಭಾಗಾಧಿಕಾರಿ ರಾಜೇಶ್, ಅಲ್ಪಸಂಖ್ಯಾತರ ಮುಖಂಡ ಅಮ್ಜದ್ ಪಾಷ, ದಲಿತ ಮುಖಂಡ ಎಂ.ಬಿ.ಶ್ರೀನಿವಾಸ್, ಹಿಂದುಳಿದ ವರ್ಗಗಳ ಮುಖಂಡ ಎಲ್.ಸಂದೇಶ್, ಎನ್.ದೊಡ್ಡಯ್ಯ ಸೇರಿದಂತೆ, ಹಲವು ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X