Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯೆ, ಸಂಸ್ಕಾರ ಸೇರಿದರೆ ಹಾಲು...

ವಿದ್ಯೆ, ಸಂಸ್ಕಾರ ಸೇರಿದರೆ ಹಾಲು ಜೇನಿನಂತೆ: ಚೈತ್ರಾ ಶ್ರೀ

ವಾರ್ತಾಭಾರತಿವಾರ್ತಾಭಾರತಿ6 Nov 2017 11:15 PM IST
share

ಚಿಕ್ಕಮಗಳೂರು, ನ.6: ವಿದ್ಯೆಗೆ ಸಂಸ್ಕಾರ ಸೇರಿದಾಗ ಹಾಲಿಗೆ ಜೇನು ಬೆರೆಸಿದಂತೆ. ಪುರಾತನ ಆಚರಣೆಗಳು ವೈಜ್ಞಾನಿಕತೆಯಿಂದ ಕೂಡಿದ್ದು, ಇದರ ಅರಿವು ನಮಗಿರಬೇಕು ಎಂದು ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸಿ.ಎಸ್.ಚೈತ್ರಾಶ್ರೀಚೇತನ್ ಹೇಳಿದ್ದಾರೆ.

ಅಕ್ಕಮಹಾದೇವಿ ಮಹಿಳಾ ಸಂಘದ ಕಲ್ಯಾಣನಗರ ಶರಣೆ ಮಾದಲಾಂಬಿಕೆ ತಂಡ ನಗರದ ಶ್ರೀಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗೌರಿಹುಣ್ಣಿಮೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪುರಾತನ ಸಂಸ್ಕೃತಿಯ ಆಚರಣೆಗಳನ್ನು ಅರಿತು ಪಾಲಿಸುವುದರಲ್ಲಿ ಒಳಿತಿದೆ. ವಿದೇಶಿಯರು ನಮ್ಮ ದೇಶಕ್ಕೆ ಬಂದು ಸಂಸ್ಕೃತಿ-ಸಂಸ್ಕಾರವನ್ನು ಅಧ್ಯಯನ ಮಾಡುತ್ತಿರುವಾಗ ನಾವು ಮರೆಯುತ್ತಿರುವುದು ಸರಿಯಲ್ಲ ಎಂದರು.

ಹುಣ್ಣಿಮೆ ಬೆಳಕಿನ ಸಂಕೇತ. ನಮ್ಮ ಎಲ್ಲ ಹಬ್ಬ-ಹುಣ್ಣಿಮೆ ಆಚರಣೆಗಳು ವೈಜ್ಞಾನಿಕ ಆಲೋಚನೆಗಳಿಂದ ಕೂಡಿವೆ. ಮುತ್ತೈದೆಯರು ಧರಿಸುವ ಕುಂಕುಮ, ಮೂಗುತಿ, ಬಳೆ, ತಾಳಿ, ಕಾಲುಂಗುರ ರಕ್ತಸಂಚಲನಕ್ಕೆ ನೆರವಾಗುವುದರ ಜೊತೆಗೆ ಋಣಾತ್ಮಕ ಭಾವನೆ ಗಳನ್ನು ಸುಪ್ತಮನಸ್ಸಿನಲ್ಲಿ ಮೂಡಿಸುತ್ತವೆ. ಸೂರ್ಯನ ಶಾಖವನ್ನು ಹೀರಿಕೊಂಡು ದೇಹವನ್ನು ತಂಪಾಗಿಸುವ ವಿಭೂತಿ. ಎದೆ ಮೇಲಿರುವ ಬೆಳ್ಳಿಕರಡಿಗೆ ಹೃದಯಬಡಿತ ಸುಸ್ಥಿತಿಗೆ ತರುತ್ತದೆ. ಇಷ್ಟಲಿಂಗಪೂಜೆ ಮನಸ್ಸನ್ನು ಕೇಂದ್ರೀಕರಿಸಲು ಸಹಕಾರಿ ಎಂದರು.

ಬಹುತೇಕ ನಮ್ಮ ಪದ್ಧತಿಗಳು ವೈಜ್ಞಾನಿಕ ಮತ್ತು ವೈಚಾರಿಕ ಅಂಶಗಳನ್ನು ಒಳಗೊಂಡಿವೆ. ವಿದ್ಯೆ ನಮ್ಮತನವನ್ನು ಕಲಿಸಬೇಕು. ವಿದ್ಯೆಗೆ ವಿನಯವೇ ಭೂಷಣ ಎಂಬುದನ್ನು ಅರಿಯಬೇಕು. ವಿದ್ಯೆ ಜೀವನ ವೌಲ್ಯಗಳನ್ನು ತಿಳಿಸುವಂತಾಗಬೇಕು. ನಾನು ಎಂಬ ಅಹಂಕಾರದಿಂದ ದೂರವಿಡಬೇಕು. ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ-ಸಂಸ್ಕಾರಗಳನ್ನು ಮಕ್ಕಳ ಮೂಲಕ ಮುಂದುವರಿಸಬೇಕು. ಕೇವಲ ಪಠ್ಯಕ್ಕೆ ಸೀಮಿತವಾಗದೆ ಜೀವನದ ಶಿಕ್ಷಣ ಮನೆಗಳಲ್ಲಿ ನೀಡುವಂತಾಗಬೇಕು ಎಂದು ತಿಳಿಸಿದರು.

ಕನ್ನಡ ರಾಜ್ಯೋತ್ಸವ ಕುರಿತಂತೆ ಉಪನ್ಯಾಸಕಿ ಸುಜಾತಾ ಜಗದೀಶ್ ಮಾತನಾಡಿ, ಭಾಷಾವಾರು ಪ್ರಾಂತ್ಯ ರಚನೆ ಹಿನ್ನೆಲೆಯಲ್ಲಿ ವಿಶಾಲ ಕರ್ನಾಟಕ ಜನ್ಮತಾಳಿದೆ. ಕರ್ನಾಟಕದಲ್ಲಿ ಕನ್ನಡ ಉಳಿವಿಗೆ ಹೋರಾಟ ನಡೆಯುತ್ತಿರುವುದು ವಿಷಾದನೀಯ. ಕನ್ನಡದ ಬಗ್ಗೆ ಪ್ರತಿಯೊಬ್ಬ ಕನ್ನಡಿಗರೂ ಅಭಿಮಾನ ತಾಳಬೇಕು ಎಂದು ಹೇಳಿದರು.

ಅಕ್ಕಮಹಾದೇವಿ ಮಹಿಳಾ ಸಂಘದ ಅಧ್ಯಕ್ಷೆ ಗೌರಮ್ಮಬಸವೇಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಚನ ಗಾಯನ, ಸಾಂಸ್ಕೃತಿ ಕಾರ್ಯಕ್ರಮ ನಡೆದವು. ಆಟೋಟ ಸ್ಪರ್ಧಾ ವಿಜೇತರಿಗೆ ಯಮುನಾ ಚಂದ್ರಶೇಖರ್ ಬಹುಮಾನ ವಿತರಿಸಿದರು.

ಉಪಾಧ್ಯಕ್ಷೆ ಕಾತ್ಯಾಯಿನಿ ಚಂದ್ರಶೇಖರ್, ಕಾರ್ಯದರ್ಶಿ ಹೇಮಲತಾ, ಖಜಾಂಚಿ ಯುಮುನಾ ಸಿ.ಶೆಟ್ಟಿ, ಪದಾಧಿಕಾರಿಗಳಾದ ಭಾರತಿ ಶಿವರುದ್ರಪ್ಪ, ರೇಖಾ ಉಮಾಶಂಕರ್ ಇದ್ದರು. ಅನುಸೂಯಾ ನಿರೂಪಿಸಿ, ಪ್ರೇಮಾ ಪ್ರಾರ್ಥಿಸಿ, ಮಮತಾ ಸ್ವಾಗತಿಸಿ, ರೂಪಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X