Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಚಿಕ್ಕಮಗಳೂರು: ನ.8ಕ್ಕೆ ನೋಟು ಅಮಾನ್ಯ...

​ಚಿಕ್ಕಮಗಳೂರು: ನ.8ಕ್ಕೆ ನೋಟು ಅಮಾನ್ಯ ವಿರುದ್ಧ ಕರಾಳ ದಿನ

ವಾರ್ತಾಭಾರತಿವಾರ್ತಾಭಾರತಿ6 Nov 2017 11:27 PM IST
share

ಚಿಕ್ಕಮಗಳೂರು, ನ.6: ಪ್ರಧಾನಿ ಮೋದಿ ಜನತೆಗೆ ಅನೇಕ ಭರವಸೆಗಳ ಮೂಲಕ ಗರಿಷ್ಠ ಮುಖಬೆಲೆಯ ನೋಟು ಅಮಾನ್ಯಗೊಳಿಸಿ ನ.8ಕ್ಕೆ ಒಂದು ವರ್ಷ ಸಂದಿದ್ದು, ಪ್ರಧಾನಿಯ ಎಲ್ಲ ಭರವಸೆಗಳು ಹುಸಿಯಾಗಿ ದೇಶದ ಜನತೆ ತೀವ್ರ ಸಂಕಷ್ಟ ಎದುರಿಸಬೇಕಾಯಿತು. ಈ ಹಿನ್ನೆಲೆಯಲ್ಲಿ ಅಂದಿನ ದಿನವನ್ನು ಎಡಪಕ್ಷಗಳು ಕರಾಳ ದಿನವಾಗಿ ಆಚರಿಸಲಿವೆ ಎಂದು ಸಿಪಿಐನ ಜಿಲ್ಲಾ ಕಾರ್ಯದರ್ಶಿ ಎಚ್.ಎಂ. ರೇಣುಕಾರಾಧ್ಯ ತಿಳಿಸಿದ್ದಾರೆ.

ಅವರು ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷದ ನ.8ರಂದು ರಾತ್ರಿ ನೋಟು ಅಮಾನ್ಯವನ್ನು ಪ್ರಧಾನಿ ಮೋದಿ ಘೋಷಿಸಿ ಕಪ್ಪುಹಣ, ಭ್ರಷ್ಟಾಚಾರ ನಿಯಂತ್ರಣ ಮುಂತಾದ ಭರವಸೆ ನೀಡಿದ್ದರು. ನಂತರದ ಒಂದು ವರ್ಷದ ಅವಧಿಯನ್ನು ಅವಲೋಕಿಸಿದರೆ ಈ ಎಲ್ಲ ಭರವಸೆಗಳು ಸುಳ್ಳಾಗಿದ್ದು, ಜನತೆಗೆ ಲಾಭ ಮಾಡಿಕೊಡುವ ಹೆಸರಲ್ಲಿ ಇನ್ಯಾರಿಗೋ ಲಾಭ ಮಾಡಿದ ಕೃತ್ಯ ಇದಾಗಿದೆ ಎಂದು ಟೀಕಿಸಿದರು.

ದೇಶದ ಜನರನ್ನು ನಂಬಿಸಿ ನೋಟು ಅಮಾನ್ಯ ಗೊಳಿಸಲಾಗಿದ್ದು, ಆದರೆ ಅವರ ಭರವಸೆಯ ತದ್ವಿರುದ್ಧ ಪರಿಣಾಮಗಳು ದೇಶದಲ್ಲಾಗಿವೆ. ಅಂಕಿ ಅಂಶಗಳು, ನಡೆದ ಘಟನೆಗಳು, ಇಂದಿನ ವಾತಾವರಣ ಗಮನಿಸಿದರೆ ಪ್ರಧಾನಿ ಭರವಸೆ ಸಂಪೂರ್ಣ ಸುಳ್ಳಾಗಿದೆ ಎಂಬುವುದು ಮನವರಿಕೆಯಾಗುತ್ತದೆ ಎಂದರು.

ದೇಶ ಆಳುವವರು ಸುಳ್ಳಿನ ಮೂಲಕ ಜನತೆಯನ್ನು ನಂಬಿಸಿ ದಿಕ್ಕು ತಪ್ಪಿಸಬಾರದು ಎಂದು ಒತ್ತಾಯಿಸುವುದಾಗಿ ಹೇಳಿದರು.

ಮತ್ತೋರ್ವ ಮುಖಂಡ ಬಿ. ಅಮ್ಜದ್ ಮಾತನಾಡಿ, ಮೋದಿ ಸರಕಾರ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ ನೋಟು ರದ್ದತಿಯ ಪರಿಣಾಮ ಶೇ.33ರಷ್ಟು ಉದ್ಯೋಗ ಕಡಿತಗೊಂಡಿದೆ. ಬೆಲೆ ಏರಿಕೆ ನಿರಂತರ ವಾಗಿದೆ. ಶಿಕ್ಷಣ, ಖಾಸಗೀಕರಣಗೊಳ್ಳುತ್ತಿದೆ. ಈ ಎಲ್ಲ ವೈಫಲ್ಯಗಳನ್ನು ಮರೆಮಾಚಲು ಮೋದಿ ಸರಕಾರ ವಿಷಯ ಹರಿಯಬಿಡುತ್ತಿದೆ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ಸಿಪಿಐನ ಮತ್ತೋರ್ವ ಮುಖಂಡ ಜಾರ್ಜ್ ಆಸ್ಟಿನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X