Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ನಿಷೇಧ ‘ಸಂಘಟಿತ ಲೂಟಿ’: ಮನಮೋಹನ್...

ನೋಟು ನಿಷೇಧ ‘ಸಂಘಟಿತ ಲೂಟಿ’: ಮನಮೋಹನ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ7 Nov 2017 5:01 PM IST
share
ನೋಟು ನಿಷೇಧ ‘ಸಂಘಟಿತ ಲೂಟಿ’: ಮನಮೋಹನ್ ಸಿಂಗ್

ಹೊಸದಿಲ್ಲಿ, ನ. 7: ನವೆಂಬರ್ 8, 2016 ನಮ್ಮ ಆರ್ಥಿಕತೆ ಹಾಗೂ ಪ್ರಜಾಪ್ರಭುತ್ವದ ‘ಕರಾಳ ದಿನ’ ಎಂದು ವ್ಯಾಖ್ಯಾನಿಸಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ನೋಟು ನಿಷೇಧ ಸಂಘಟಿತ ಹಾಗೂ ಕಾನೂನುಬದ್ಧ ಲೂಟಿ ಎಂದಿದ್ದಾರೆ.

ನೋಟು ನಿಷೇಧದ ಮೊದಲ ವರ್ಷಾಚರಣೆಯ ಮುನ್ನಾ ದಿನವಾದ ಮಂಗಳವಾರ ವಿಧಾನ ಸಭೆ ಚುನಾವಣೆ ನಡೆಯಲಿರುವ ಗುಜರಾತ್‌ನ ಅಹ್ಮದಾಬಾದ್‌ನ ಕಾರ್ಯಕ್ರಮವೊಂದರಲ್ಲಿ ವ್ಯಾಪಾರಿಗಳು ಹಾಗೂ ಉದ್ಯಮಿಗಳೊಂದಿಗೆ ಅವರು ಸಂವಹನ ನಡೆಸಿದರು.

ಇಷ್ಟು ಪ್ರಮಾಣದಲ್ಲಿ ಕರೆನ್ಸಿಯನ್ನು ಹಿಂದೆ ಪಡೆಯುವ ಕಠಿಣ ನಿರ್ಧಾರವನ್ನು ಇದುವರೆಗೆ ಜಗತ್ತಿನ ಯಾವುದೇ ದೇಶ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದರು. ನಗದು ನಿಷೇಧ ಸಂಘಟಿತ ಹಾಗೂ ಕಾನೂನುಬದ್ಧ ಲೂಟಿ ಎಂದು ಕಳೆದ ವರ್ಷ ಸಂಸತ್ತಿನಲ್ಲಿ ಹೇಳಿರುವುದನ್ನು ಪುನರುಚ್ಚರಿಸಿದ ಅವರು, ನಗದು ನಿಷೇಧ ಘೋಷಿಸಿದಾಗ, ಮೋದಿ ಅವರಿಗೆ ಇಂತಹ ಬೇಜವಾಬ್ದಾರಿಯುತ ಸಲಹೆಯನ್ನು ಯಾರು ನೀಡಿದರು ಎಂದು ನನಗೆ ಅಚ್ಚರಿಯಾಗಿತ್ತು ಎಂದರು.

ಸರಕಾರ ನಗದು ರಹಿತ ಆರ್ಥಿಕತೆಗೆ ಉತ್ತೇಜನ ನೀಡಲು ಬಯಸುವುದಾದರೆ, ನಗದು ನಿಷೇಧದಂತಹ ಕ್ರಮಗಳು ಪರಿಣಾಮಕಾರಿಯಲ್ಲ ಎಂದು ಹೇಳಿದ ಅವರು, ನೋಟು ನಿಷೇಧದ ಬಳಿಕ ತೆರಿಗೆ ಭಯೋತ್ಪಾದನೆ ಭಯ ಭಾರತದ ವ್ಯವಹಾರದಲ್ಲಿ ಹೂಡಿಕೆ ಮಾಡುವ ವಿಶ್ವಾಸವನ್ನು ಕುಗ್ಗಿಸಿತು ಎಂದರು.

 ನಗದು ನಿಷೇಧ, ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಭಾರತದ ಆರ್ಥಿಕತೆಗೆ ಹೊಡೆದ ಎರಡು ಗುಂಡುಗಳು ಎಂಬ ಕಾಂಗ್ರೆಸ್‌ನ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆ ಬೆಂಬಲಿಸಿದ ಮನಮೋಹನ್ ಸಿಂಗ್, ಈ ಎರಡು ಹೊಡೆತ ನಮ್ಮ ಆರ್ಥಿಕತೆಯನ್ನು ವಿನಾಶದೆಡೆಗೆ ದೂಡಿದೆ. ಇದು ಸಣ್ಣ ಉದ್ಯಮ ಬೆನ್ನೆಲುಬನ್ನು ಮುರಿದಿದೆ ಎಂದರು.

 ಜಿಎಸ್‌ಟಿಯನ್ನು ದೋಷಪೂರ್ಣವಾಗಿ ವಿನ್ಯಾಸಗೊಳಿಸಲಾಗಿದೆ, ಅವಸರವಾಗಿ ಅನುಷ್ಠಾನಗೊಳಿಸಲಾಗಿದೆ. ಅದು ಸಂಪೂರ್ಣ ವಿನಾಶಕಾರಿ ಹಾಗೂ ಚಾರಿತ್ರಿಕ ಪ್ರಮಾದ ಎಂದು ಅವರು ಹೇಳಿದರು. ಪ್ರಸಕ್ತ ಜಿಎಸ್‌ಟಿ ಸ್ವರೂಪ ನಮ್ಮ ದೃಷ್ಟಿಕೋನದಿಂದ ನಿರ್ಗಮಿಸಿದೆ ಎಂದು ಹೇಳಿದ ಅವರು, ಜಿಎಸ್‌ಟಿ ಹೆಚ್ಚುವರಿ ಸೆಸ್ ಹಾಗೂ ಬಹು ಸ್ಲಾಬ್‌ನಿಂದ ಗೊಂದಲದ ಗೂಡಾಗಿದೆ ಎಂದರು.

ಕೇಂದ್ರ ಸರಕಾರದ ಮೇಲಿನ ದಾಳಿ ತೀವ್ರಗೊಳಿಸಿದ ಮನಮೋಹನ್ ಸಿಂಗ್, ಎನ್‌ಡಿಎ ಸರಕಾರದ ತಥಾಕಥಿತ ಆರ್ಥಿಕ ಸುಧಾರಣೆ ಚೀನಾಕ್ಕೆ ನೆರವು ನೀಡಿತು. ಇದರಿಂದಾಗಿ ಈ ವರ್ಷ ಚೀನಾದ ರಫ್ತಿನಲ್ಲಿ ಏರಿಕೆಯಾಗಿದೆ ಎಂದರು.

ಚೀನಾದ ರಫ್ತಿನಿಂದಾಗಿ ಭಾರತದಲ್ಲಿ ಉದ್ಯೋಗವಕಾಶ ಇಳಿಕೆಯಾಗಿದೆ. 2016-17ರಲ್ಲಿ ಚೀನಾದಿಂದ ಭಾರತದ ಆಮದು 1.96 ಲಕ್ಷ ಕೋ. ರೂ. ಇತ್ತು. 2017-18ಕ್ಕೆ ಅದು 2.41 ಲಕ್ಷ ಕೋ. ರೂ.ಗೆ ಏರಿಕೆಯಾಗಿದೆ ಎಂದು ಅವರು ಹೇಳಿದರು.

ನಗದು ನಿಷೇಧದಿಂದ ಸೂರತ್‌ನ ಜವಳಿ ವಲಯವೊಂದರಲ್ಲೇ 21 ಸಾವಿರ ಉದ್ಯೋಗ ನಷ್ಟವಾಗಿದೆ. ಸೂರತ್‌ನಲ್ಲಿ 60 ಸಾವಿರ ಮಗ್ಗಗಳು ಕಾರ್ಯ ಸ್ಥಗಿತಗೊಳಿಸಿದ್ದು, ಇದರಿಂದ ಒಟ್ಟು 21 ಸಾವಿರ ಉದ್ಯೋಗಿಳು ಕೆಲಸ ಕಳೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X