Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಮಹಿಳೆಯರನ್ನು ಕಾಡುತ್ತಿದೆ...

ಭಾರತೀಯ ಮಹಿಳೆಯರನ್ನು ಕಾಡುತ್ತಿದೆ ರಕ್ತಹೀನತೆ...

ಇದು ವಿಶ್ವದಲ್ಲಿಯೇ ಅತಿ ಹೆಚ್ಚು

ವಾರ್ತಾಭಾರತಿವಾರ್ತಾಭಾರತಿ7 Nov 2017 6:26 PM IST
share
ಭಾರತೀಯ ಮಹಿಳೆಯರನ್ನು ಕಾಡುತ್ತಿದೆ ರಕ್ತಹೀನತೆ...

ಹೊಸದಿಲ್ಲಿ,ನ.7: ಭಾರತೀಯ ಮಹಿಳೆಯರನ್ನು ಪೌಷ್ಟಿಕತೆಯ ಕೊರತೆಯ ಗಂಭೀರ ಸಮಸ್ಯೆಯು ಕಾಡುತ್ತಿದೆ. ಒಂದೆಡೆ ವಿಶ್ವದ ಇತರ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯ ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದರೆ, ಇನ್ನೊಂದೆಡೆ ಮಹಿಳೆಯರು ತ್ವರಿತವಾಗಿ ಹೆಚ್ಚುತ್ತಿರುವ ಬೊಜ್ಜಿನಿಂದಾಗಿ ಕಾಯಿಲೆಗಳಿಗೆ ಗುರಿಯಾಗುತ್ತಿರುವುದು ಇನ್ನೊಂದು ಸಮಸ್ಯೆಯಾಗಿದೆ.

 ಜಾಗತಿಕ ಪೌಷ್ಟಿಕತೆ ವರದಿ 2017 ಬೆಟ್ಟು ಮಾಡಿರುವಂತೆ ಭಾರತದಲ್ಲಿ ರಕ್ತಹೀನತೆ ಯಿಂದ ಬಳಲುತ್ತಿರುವ ಮಹಿಳೆಯರ ಸಂಖ್ಯೆ ವಿಶ್ವದಲ್ಲಿಯೇ ಅತ್ಯಂತ ಹೆಚ್ಚು. ನಂತರದ ಸ್ಥಾನಗಳಲ್ಲಿ ಚೀನಾ, ಪಾಕಿಸ್ತಾನ, ನೈಜೀರಿಯಾ ಮತ್ತು ಇಂಡೋನೇಷ್ಯಾಗಳಿವೆ. ಭಾರತದಲ್ಲಿ ಸಂತಾನೋತ್ಪತ್ತಿ ವಯೋಗುಂಪಿನ ಮಹಿಳೆಯರ ಪೈಕಿ ಅರ್ಧಕ್ಕಿಂತಲೂ ಹೆಚ್ಚಿನವರು(ಶೇ.51) ರಕ್ತಹೀನತೆಯಿಂದ ಬಳಲುತ್ತಿದ್ದರೆ, ಶೇ.22ರಷ್ಟು ಮಹಿಳೆಯರು ಅತಿಯಾದ ತೂಕವನ್ನು ಹೊಂದಿದ್ದಾರೆ. ವರದಿಯು 140 ದೇಶಗಳಲ್ಲಿಯ ಸ್ಥಿತಿಗಳನ್ನು ವಿಶ್ಲೇಷಿಸಿದೆ.

ಸರಕಾರವು ಮಹಿಳೆಯರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆಯ ಸಮಸ್ಯೆಯನ್ನು ಗುರುತಿಸಲು ಆರಂಭಿಸಿದೆಯಾದರೂ ಅದನ್ನು ಬಗೆಹರಿಸುವುಲ್ಲಿ ಯಾವುದೇ ಪ್ರಗತಿ ಯಾಗಿಲ್ಲ ಎನ್ನುತ್ತಾರೆ ತಜ್ಞರು. ರಕ್ತಹೀನತೆಯಿಂದ ಬಳಲುತ್ತಿರುವ 15ರಿಂದ 49 ವರ್ಷ ವಯೋಗುಂಪಿನ ಮಹಿಳೆಯರ ಶೇಕಡಾವಾರು ಪ್ರಮಾಣ ಕೆಟ್ಟ ದಾಖಲೆಯಾಗಿದ್ದು, ಇದೇ ವೇಳೆ ವಯಸ್ಕ ಮಹಿಳೆಯರಲ್ಲಿ ಬೊಜ್ಜು ಮತ್ತು ಮಧುಮೇಹವನ್ನು ತಗ್ಗಿಸುವ ಗುರಿಸಾಧನೆಯಲ್ಲಿಯೂ ದೇಶವು ನಿರಾಶಾದಾಯಕ ಪ್ರದರ್ಶನ ನೀಡಿದೆ ಎನ್ನುವುದನ್ನು ವರದಿಯು ಪ್ರಮುಖವಾಗಿ ಬಿಂಬಿಸಿದೆ.

2016ರ ವರದಿಯಂತೆ ಭಾರತದಲ್ಲಿ ಸುಮಾರು ಶೇ.48ರಷ್ಟು ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದರು.

ಅಪೌಷ್ಟಿಕತೆ ನಿವಾರಣೆ ವಿಷಯದಲ್ಲಿ ನಿಷ್ಕ್ರಿಯವಾಗಿರುವಂತಿಲ್ಲ ಮತ್ತು ಈ ನಿಟ್ಟಿನಲ್ಲಿ ಸಾಗಬೇಕಾದ ದಾರಿ ದೂರವಿದೆ ಎನ್ನುವುದರ ಅರಿವು ಸರಕಾರಕ್ಕಿದೆ ಎಂದಿರುವ ವರದಿಯು, ಭಾರತದ ರಾಷ್ಟ್ರೀಯ ಪೋಷಕಾಂಶ ಕಾರ್ಯತಂತ್ರದ ಭಾಗವಾಗಿ ಅಪೌಷ್ಟಿಕತೆ ಮತ್ತು ಬೊಜ್ಜು ಈ ಎರಡೂ ಸವಾಲುಗಳನ್ನು ಅದು ಎದುರಿಸಬೇಕಿದೆ ಎನ್ನುವುದನ್ನು ಮುಖ್ಯವಾಗಿ ಬಿಂಬಿಸಿದೆ. ಅಪೌಷ್ಟಿಕತೆ ಕುರಿತಂತೆ ಅಸಮಾನತೆಯ ಬಿರುಕುಗಳನ್ನು ಮುಚ್ಚುವ ಪ್ರಮುಖ ಪ್ರಯತ್ನಗಳ ಅಗತ್ಯವಿದೆ ಎನ್ನುತ್ತಾರೆ ದಿಲ್ಲಿಯಲ್ಲಿರುವ ಅಂತರರಾಷ್ಟ್ರೀಯ ಆಹಾರ ನೀತಿ ಸಂಶೋಧನಾ ಸಂಸ್ಥೆ(ಐಎಫ್‌ಪಿಅರ್‌ಐ)ಯ ದಕ್ಷಿಣ ಏಷ್ಯಾ ಕಚೇರಿಯ ಹಿರಿಯ ಸಂಶೋಧನಾ ಫೆಲೊ ಪೂರ್ಣಿಮಾ ಮೆನನ್ ಹೇಳಿದರು.

ಆರೋಗ್ಯದ ಅರಿವಿನ ಕೊರತೆ, ನಿರಕ್ಷರತೆ ಮತ್ತು ಕಾಳಜಿಯ ವಿಷಯದಲ್ಲಿ ಸ್ವಂತಕ್ಕಿಂತ ಕುಟುಂಬಕ್ಕೆ ಆದ್ಯತೆ ನೀಡುವ ಪರಿಪಾಠ ಇವು ಮಹಿಳೆಯರಲ್ಲಿ ಪೋಷಕಾಂಶ ಕೊರತೆಗೆ ಮತ್ತು ರಕ್ತಹೀನತೆಗೆ ಕಾರಣವಾಗುತ್ತವೆ ಎಂದು ಫೋರ್ಟಿಸ್ ಎಸ್ಕಾರ್ಟ್ಸ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಹಿರಿಯ ತಜ್ಞವೈದ್ಯೆ ಡಾ.ಇಂದು ತನೇಜಾ ತಿಳಿಸಿದರು.

ಆದರೆ ರಕ್ತಹೀನತೆ ಜಾಗತಿಕ ಸಮಸ್ಯೆಯಾಗಿದೆ, ಶ್ರೀಮಂತ ರಾಷ್ಟ್ರಗಳಲ್ಲಿಯೂ ಹಲವಾರು ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದೂ ವರದಿಯು ಬೆಟ್ಟು ಮಾಡಿದೆ. ಫ್ರಾನ್ಸ್ ಮತ್ತು ಸ್ವಿಟ್ಝರ್‌ಲ್ಯಾಂಡ್‌ನಂತಹ ರಾಷ್ಟ್ರಗಳಲ್ಲಿ ಇಂತಹವರ ಸಂಖ್ಯೆ ಸುಮಾರು ಶೇ.18ರಷ್ಟಿದೆ ಎಂದು ಅದು ಹೇಳಿದೆ. ವಿಶ್ವಾದ್ಯಂತ 15-49 ವರ್ಷ ವಯೋಗುಂಪಿನ 614 ಮಿಲಿಯನ್ ಮಹಿಳೆಯರು ರಕ್ತಹೀನತೆಯಿಂದ ಬಾಧಿತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X