Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ಥಳ ಕೊರತೆಯಾದರೆ 'ಮೊಬೈಲ್ ಕ್ಯಾಂಟೀನ್'...

ಸ್ಥಳ ಕೊರತೆಯಾದರೆ 'ಮೊಬೈಲ್ ಕ್ಯಾಂಟೀನ್' ಆರಂಭಿಸಿ: ಸಿಎಂ ಸಿದ್ದರಾಮಯ್ಯ

ಜಿಲ್ಲಾ-ತಾಲೂಕು ಕೇಂದ್ರಗಳಲ್ಲಿ 'ಇಂದಿರಾ ಕ್ಯಾಂಟೀನ್'

ವಾರ್ತಾಭಾರತಿವಾರ್ತಾಭಾರತಿ7 Nov 2017 7:22 PM IST
share
ಸ್ಥಳ ಕೊರತೆಯಾದರೆ ಮೊಬೈಲ್ ಕ್ಯಾಂಟೀನ್ ಆರಂಭಿಸಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನ. 7: ಅಗ್ಗದ ದರದಲ್ಲಿ ಬಡ-ಕೂಲಿ ಕಾರ್ಮಿಕರಿಗೆ ಉಪಾಹಾರ ಮತ್ತು ಊಟ ಒದಗಿಸುವ ‘ಇಂದಿರಾ ಕ್ಯಾಂಟೀನ್’ಗಳನ್ನು ರಾಜ್ಯದ ಎಲ್ಲಾ ಜಿಲ್ಲಾ-ತಾಲೂಕು ಕೇಂದ್ರಗಳಲ್ಲಿ ಆರಂಭಿಸಲು ತೀರ್ಮಾನಿಸಿದ್ದು, ಸ್ಥಳದ ಕೊರತೆ ಎದುರಾದರೆ ಬಾಡಿಗೆಗೆ ಅಥವಾ ಮೊಬೈಲ್ ಕ್ಯಾಂಟೀನ್‌ಗೆ ಚಾಲನೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳ ಸಭೆಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಯ ಆವರಣ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣ, ಬಸ್-ರೈಲ್ವೆ ನಿಲ್ದಾಣ ಸೇರಿ ಜನ ಸಂದಣಿ ಇರುವ ಪ್ರದೇಶದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಿರಿ ಎಂದರು.

ಕ್ಯಾಂಟೀನ್ ಸ್ಥಾಪಿಸಲು ಸೂಕ್ತ ಸ್ಥಳ ಗುರುತಿಸಿ, ಇಲ್ಲವಾದರೆ ಮೊಬೈಲ್ ಕ್ಯಾಂಟೀನ್ ಪ್ರಾರಂಭಿಸಿ, 1ಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆ ಇರುವ ನಗರ ಪಟ್ಟಣಗಳಲ್ಲಿ ಜ.1ರಿಂದ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಬೇಕೆಂಬುದು ಸರಕಾರದ ಆಶಯ. ಜನಸಂಖ್ಯೆ ಲಕ್ಷಕ್ಕಿಂತ ಕಡಿಮೆ ಇದ್ದರೂ, ಕೈಕಟ್ಟಿ ಕುಳಿತು ಕೊಳ್ಳಬೇಡಿ. ಅವಶ್ಯಕತೆ ಕಂಡು ಬಂದಲ್ಲಿ ಅಂತಹ ಪ್ರದೇಶದಲ್ಲೂ ಕ್ಯಾಂಟೀನ್ ಪ್ರಾರಂಭ ಮಾಡಿ. ಜನಸಂಖ್ಯೆ 2ಲಕ್ಷ ಇದ್ದಲ್ಲಿ ಮತ್ತೊಂದು ಕ್ಯಾಂಟೀನ್ ಪ್ರಾರಂಭಿಸುವ ಔದಾರ್ಯ ತೋರಿ ಎಂದು ಸೂಚನೆ ನೀಡಿದರು.

ಬಯಲು ಬಹಿರ್ದಸೆ ಮುಕ್ತ: ರಾಜ್ಯದಲ್ಲಿ 32 ಲಕ್ಷ ಶೌಚಾಲಯ ನಿರ್ಮಾಣ ಆಗಿದೆ. 176 ತಾಲೂಕುಗಳ ಪೈಕಿ ಈವರೆಗೆ 76 ತಾಲೂಕುಗಳು ಮಾತ್ರ ಬಯಲು ಬಹಿರ್ದಸೆ ಮುಕ್ತ ತಾಲೂಕುಗಳಾಗಿವೆ. ಮುಂದಿನ 2018ರ ಮಾರ್ಚ್ ಒಳಗೆ ರಾಜ್ಯ ಬಯಲು ಬಹಿರ್ದಸೆ ಮುಕ್ತ ಆಗಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ನಿರ್ಮಾಣ ತ್ವರಿತವಾಗಿ ಆಗಬೇಕು ಎಂದರು.

ಸರಕಾರದ ಮಹತ್ವಾಕಾಂಕ್ಷಿ ಮಾತೃಪೂರ್ಣ ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡಿ. ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕವಾದ ಆಹಾರ ಒದಗಿಸುವ ಈ ಯೋಜನೆಯ ಸಮರ್ಪಕ ಅನುಷ್ಠಾನ ಆಗಬೇಕು. ಮಲೆನಾಡು ಜಿಲ್ಲೆಗಳಲ್ಲಿ ಒಂದು ಮನೆ ಒಂದು ಪ್ರದೇಶದಲ್ಲಿದ್ದರೆ ಮತ್ತೊಂದು ಮನೆ ಮತ್ತೊಂದು ಪ್ರದೇಶದಲ್ಲಿದೆ. ಆದ ಕಾರಣ, ಯೋಜನೆಯ ಅನುಷ್ಠಾನದಲ್ಲಿ ಕೆಲವು ಸಮಸ್ಯೆಗಳು ಎದುರಾಗಿದೆ ಎಂಬ ಅಂಶ ಗಮನಕ್ಕೆ ಬಂದಿದೆ. ಆದಕಾರಣ, ಮಲೆನಾಡು ಜಿಲ್ಲೆಗಳಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ ವಿಶೇಷ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಅನಿಲ ಭಾಗ್ಯ ಯೋಜನೆಯಡಿ 30ಲಕ್ಷ ಕುಟುಂಬಗಳಿಗೆ ಸೌಲಭ್ಯ ಒದಗಿಸುವ ಗುರಿ ಇದೆ. ಇದನ್ನು ಈ ಕೂಡಲೇ ಕಾರ್ಯಗತಗೊಳಿಸಿ, ರಾಜ್ಯದಲ್ಲಿ ಬಡತನ ರೇಖೆಗಿಂತಲೂ ಕಡಿಮೆ ಇರುವ ಅರ್ಹ ಕುಟುಂಬಗಳಿಗೆ ಆದ್ಯತೆಯ ಮೇರೆಗೆ ಕಾರ್ಡ್ ವಿತರಿಸಿ. ಮೈಸೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಶಾಲಾ ಮಕ್ಕಳಿಗೆ ಹಾಲು ನೀಡುವಲ್ಲಿ ಸುವಾಸಿತ ಹಾಲು ಒದಗಿಸುವ ಕಾರ್ಯ ಈಗಾಗಲೇ ಜಾರಿಯಾಗಿದೆ ಎಂದು ಹೇಳಿದರು.

ಬೆಳೆ ಸಮೀಕ್ಷೆ: ಬೆಳೆ ಸಮೀಕ್ಷಾ ಕಾರ್ಯವನ್ನು ನ.10ರ ವರೆಗೆ ಅಧಿಕಾರಿಗಳು ಮಾಡಲಿ. ಬೆಳೆ ವಿಮೆ ಹಾಗೂ ಬೆಳೆ ಪರಿಹಾರಕ್ಕೆ ಅತ್ಯಾವಶ್ಯಕವೆನಿಸಿರುವ ತಮ್ಮ ಭೂಮಿಗೆ ಸಂಬಂಧಿತ ಮಾಹಿತಿಯನ್ನು ಬೆಳೆ ಸಮೀಕ್ಷಾ ಆ್ಯಪ್ ಮೂಲಕ ರೈತರೇ ದಾಖಲಿಸಲು ಪ್ರೇರೇಪಿಸಿ. ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಎಸ್ಸಿ-ಎಸ್ಟಿ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ರೂಪಿಸಿರುವ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆ ಎಲ್ಲವೂ ಕಾಲ ಕಾಲಕ್ಕೆ ನಡೆಸಿ, ಸರಕಾರಕ್ಕೆ ವರದಿ ಸಲ್ಲಿಸಬೇಕು. ಹಠಾತ್ ಭೇಟಿ ನೀಡಿ ಪರಿಶೀಲಿಸಿ. ಕರ್ತವ್ಯ ಲೋಪ ಎಸಗಿದವರ ವಿರುದ್ಧ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಿಸ್ತು ಕ್ರಮ ಜರಗಿಸಬೇಕು.

-ಸಿದ್ದರಾಮಯ್ಯ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X